ಆ್ಯಪ್ನಗರ

ನಮಗೆ 'ಉಜ್ವಲ್‌ ಹಿಂದೂಸ್ತಾನ್‌' ಬೇಕಿದೆ! ಎರಡ್ಮೂರು ತಿಂಗಳಲ್ಲಿ ಉತ್ತಮ ಸುದ್ದಿ ಕೊಡ್ತೀವಿ: ಕೆ ಚಂದ್ರಶೇಖರ್ ರಾವ್‌

ಲೋಕಸಭಾ ಚುನಾವಣೆಗೆ ಎರಡು ವರ್ಷಗಳಿರುವಾಗಲೇ ದೇಶದಲ್ಲಿ ತೃತೀಯ ರಂಗ ರಚನೆಯ ಕಸರತ್ತು ಜೋರಾಗಿದೆ. ಇದಕ್ಕೆ ಪೂರಕವೆಂಬಂತೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ್‌ ರಾವ್‌ ಗುರುವಾರ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಶೀಘ್ರದಲ್ಲೇ ಭಾರತ ಬದಲಾಗಲಿದೆ. ನಮಗೆ ಉಜ್ವಲ್‌ ಹಿಂದೂಸ್ತಾನ್‌ ಬೇಕಿದೆ ಎಂದು ಹೇಳಿದ್ದಾರೆ.

Authored byಅವಿನಾಶ ವಗರನಾಳ | Vijaya Karnataka Web 26 May 2022, 5:27 pm

ಹೈಲೈಟ್ಸ್‌:


  • ದೇಶದಲ್ಲಿ ಜೋರಾದ ತೃತೀಯ ರಂಗ ರಚನೆ ಕಸರತ್ತು
  • ಎಚ್‌ಡಿ ದೇವೇಗೌಡರನ್ನು ಭೇಟಿಯಾದ ಕೆ ಚಂದ್ರಶೇಖರ್‌ ರಾವ್‌
  • ಶೀಘ್ರದಲ್ಲೇ ಭಾರತ ಬದಲಾಗಲಿದೆ ಎಂದ ತೆಲಂಗಾಣ ಸಿಎಂ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web KCR
ಬೆಂಗಳೂರು: ದೇಶದಲ್ಲಿ ಅತಿ ಶೀಘ್ರ ಬದಲಾವಣೆಯಾಗಲಿದೆ, ಭಾರತ ಬದಲಾಗುತ್ತದೆ. ಭಾರತವನ್ನು ಬದಲಿಸುವ ಕೆಲಸ ಆಗಲಿದೆ. ಆ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತೇವೆ. ಉಜ್ವಲ್‌ ಹಿಂದೂಸ್ತಾನ ನಮಗೆ ಬೇಕಿದೆ. ಎರಡ್ಮೂರು ತಿಂಗಳಲ್ಲಿ ಉತ್ತಮ ಸುದ್ದಿ ನೀಡುತ್ತೇವೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಹೇಳಿದ್ದಾರೆ.
ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಬಳಿಕ ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ರಾಷ್ಟ್ರ, ಸರ್ಕಾರ, ಸಮಸ್ಯೆಗಳ ಬಗ್ಗೆ ದೇವೇಗೌಡರ ಜೊತೆ ಚರ್ಚೆ ಮಾಡಿದ್ದೇವೆ. ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ದೇಶದ ಯುವ ಶಕ್ತಿ ಸಂಕಷ್ಟದಲ್ಲಿದೆ. ದೇಶದಲ್ಲಿ ಹಲವು ಸಂಪನ್ಮೂಲಗಳಿದ್ದರೂ ಉಪಯೋಗಕ್ಕೆ ಬರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇವತ್ತು ದೇಶಕ್ಕೆ ಅಪಮಾನ ಮಾಡೋ ಕೆಲಸ ಆಗ್ತಿದೆ. ಸರ್ಕಾರ ಮಾಡೋದು ಮುಖ್ಯ ಅಲ್ಲ. ಸಮಸ್ಯೆ ಪರಿಹಾರ ಅಗಿದೆಯಾ ಅನ್ನೋದು ಮುಖ್ಯ.
75 ವರ್ಷಗಳ ಅಮೃತ ಮಹೋತ್ಸವದಲ್ಲಿ ನಾವು ಇದ್ದೇವೆ. ಆದ್ರೂ ಕೂಡ ದೇಶ ನೀರಿನ ಸಮಸ್ಯೆ ಎದುರಿಸುತ್ತಿದೆ. ಅನೇಕ ಸಮಸ್ಯೆಗಳನ್ನ ಎದುರಿಸುತ್ತಿದೆ. ಕಾಂಗ್ರೆಸ್-ಬಿಜೆಪಿ ಸರ್ಕಾರ ಮಾಡೋದು ಮುಖ್ಯ ಅಲ್ಲ. ಉಜ್ವಲ ಭಾರತ ಆಗೋದು ನಮಗೆ ಮುಖ್ಯ. ಈ ನಿಟ್ಟಿನಲ್ಲಿ ನಾವು ಕೆಲಸ ಮಾಡ್ತಿದ್ದೇವೆ ಎಂದರು.
ಗುರುವಾರ ರಾಜ್ಯಕ್ಕೆ ಬರಲಿದ್ದಾರೆ ತೆಲಂಗಾಣ ಸಿಎಂ: ಕುತೂಹಲ ಕೆರಳಿಸಿದೆ ಎಚ್‌ಡಿಡಿ-ಕೆಸಿಆರ್‌ ಭೇಟಿ
ಯಾವ ವರ್ಗಗಳು ಇವತ್ತು ಸಂತೋಷವಾಗಿ ಇಲ್ಲ. ಡಾಲರ್ ಎದುರು ರೂಪಾಯಿ ಇತಿಹಾಸದಲ್ಲಿ ಮೊದಲ ಬಾರಿಗೆ ಇಷ್ಟೊಂದು ಕುಸಿದಿದೆ. ಇದೆಲ್ಲವೂ ಸರಿ ಹೋಗಬೇಕು. ಈ ನಿಟ್ಟಿನಲ್ಲಿ ನಾವು ಕೆಲಸ ಮಾಡ್ತಿದ್ದೇವೆ. ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಭಾರತ ಬದಲಾವಣೆ ಖಂಡಿತ ಆಗಲಿದೆ. 2-3 ತಿಂಗಳಲ್ಲಿ ನಿಮಗೆ ಒಂದು ಉತ್ತಮ ಸುದ್ದಿ ಕೊಡ್ತೀವಿ ಎಂದು ಹೇಳಿದರು.

ಪ್ರಧಾನಿ ಕುರ್ಚಿ ಮೇಲೆ ಕೆಸಿಆರ್‌ ಕಣ್ಣು: ದೇಶಾದ್ಯಂತ ತೆಲಂಗಾಣ ಮುಖ್ಯಮಂತ್ರಿ 'ಸ್ನೇಹಯಾತ್ರೆ'!
ಇವತ್ತಿಗೂ ಹಲವು‌ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿಲ್ಲ. ಭರವಸೆಗಳನ್ನು ಸಾಕಷ್ಟು ಕೊಡಬಹುದು. ಆದರೆ, ಸಮಸ್ಯೆ ಪರಿಹಾರಕ್ಕೆ ಯಾವ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪ್ರಶ್ನಿಸಿದ ಅವರು, ಭರವಸೆ ನೀಡಿದಂತೆ ಕೇಂದ್ರ ಸರ್ಕಾರ ಯುವಕರಿಗೆ ಉದ್ಯೋಗ ನೀಡ್ತಾ? ದೇಶದಲ್ಲಿ ಈಗ ಎಲ್ಲವೂ ಸಮಸ್ಯೆಗಳೇ. ಇದೆಲ್ಲಾ ಅತಿ ಶೀಘ್ರ ಬದಲಾವಣೆಯಾಗಲಿದೆ ಎಂದರು.

ತೆಲಂಗಾಣ ಸಿಎಂ ಮನೆಯಲ್ಲಿ ವಾಸ್ತವ್ಯ: ಎರಡು ದೋಣಿಗಳ ಮೇಲೆ ಕಾಲಿಟ್ಟ ಪ್ರಶಾಂತ್ ಕಿಶೋರ್
ಕೆಸಿಆರ್‌ರಿಂದ ಉತ್ತಮ ಪ್ರಯತ್ನ ಎಂದ ಎಚ್‌ಡಿಕೆ!
ಚಂದ್ರಶೇಖರ್ ರಾವ್ ಹೊಸ ರೀತಿ ಪ್ರಯತ್ನ ಮಾಡ್ತಿದ್ದಾರೆ. ಹಿಂದಿನ ಪ್ರಯತ್ನಕ್ಕಿಂತ ಉತ್ತಮವಾಗಿ ಮಾಡ್ತಿದ್ದಾರೆ. ದೇಶದ ಸಂಪತ್ತು ಕಡುಬಡವರಿಗೆ ತಲುಪಬೇಕು. ಸಂಪತ್ತು ದೇಶದ ಬೆಳವಣಿಗೆಗೆ ಸಹಕಾರವಾಗಬೇಕು. ಆ ನಿಟ್ಟಿನಲ್ಲಿ ಚಂದ್ರಶೇಖರ್ ರಾವ್ ನಮ್ಮ ಜೊತೆ ಚರ್ಚಿಸಿದ್ದಾರೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದರು.


ದಸರಾ ವೇಳೆಗೆ ಉತ್ತಮ ನಿರ್ಧಾರ!
ದೇಶದಲ್ಲಿ ಮೂರನೇ ಶಕ್ತಿ ಇಂದು ಅನಿವಾರ್ಯವಾಗಿದೆ. ದಸರಾ ವೇಳೆಗೆ ಈ ಬಗ್ಗೆ ಉತ್ತಮ ನಿರ್ಧಾರ ಹೊರಬೀಳಲಿದೆ. ದಸರಾ ಎಂದರೆ ಯುದ್ಧಕ್ಕೆ ಹೋಗುವ ಸಂದರ್ಭ, ಆ ವೇಳೆ ಉತ್ತಮ ನಿರ್ಧಾರ ತೆಗೆದುಕೊಳ್ಳುತ್ತೇವೆ. ಎರಡ್ಮೂರು ತಿಂಗಳಲ್ಲಿ ಇದಕ್ಕೆಲ್ಲಾ ಅಂತಿಮ ಸ್ಪರ್ಷ ನೀಡುತ್ತೇವೆ ಎಂದು ಎಚ್‌ಡಿಕೆ ಹೇಳಿದರು.

ಈ ಹಿಂದೆ ತೆಗೆದುಕೊಂಡ ನಿರ್ಣಯ ಬೇರೆ, ಈಗ ತೆಗೆದುಕೊಳ್ಳುವ ನಿರ್ಣಯ ಬೇರೆ. ದೇಶದ ಇತಿಹಾಸಕ್ಕೆ ಇದು ಫೌಂಡೇಷನ್ ಹಾಕಲಿದೆ. ದೇಶ ಹಲವು ಸಮಸ್ಯೆ ಎದುರಿಸುತ್ತಿದೆ. ಜನರ ಸಮಸ್ಯೆ ಮುಂದಿಟ್ಟುಕೊಂಡೇ ಹೋಗ್ತೇವೆ. ಎಲ್ಲರೂ ಸೇರಿಯೇ ಇದಕ್ಕೆ ಶಕ್ತಿ ಕೊಡ್ತೇವೆ. ದೇಶಕ್ಕೆ ಪರ್ಯಾಯ ವ್ಯವಸ್ಥೆ ಅನಿವಾರ್ಯವಾಗಿದೆ. ಪ್ರಾದೇಶಿಕ ಪಕ್ಷಗಳ ಮುಖಂಡರ ಜೊತೆ ಕೆ ಚಂದ್ರಶೇಖರ್‌ ರಾವ್‌ ಚರ್ಚೆ ಮಾಡ್ತಿದ್ದಾರೆ. ಎರಡ್ಮೂರು ತಿಂಗಳಲ್ಲಿ ಇದಕ್ಕೆಲ್ಲಾ ಅಂತಿಮ ಸ್ಪರ್ಶ ಸಿಗಲಿದೆ. ಒಂದು ಉತ್ತಮ ನಿರ್ಧಾರ ಹೊರಬೀಳಲಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ತಿಳಿಸಿದರು.
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ