ಆ್ಯಪ್ನಗರ

ದೇವಸ್ಥಾನಗಳಲ್ಲಿ ಹರಕೆ ಸಲ್ಲಿಸಿದ ಸೀರೆ, ವಸ್ತ್ರ ಸಂತ್ರಸ್ತರಿಗೆ ವಿತರಿಸಲು ಸೂಚನೆ

ಧಾರ್ಮಿಕ ದತ್ತಿ ಇಲಾಖೆ ನಿರ್ವಹಣೆಯಲ್ಲಿರುವ ದೇವಸ್ಥಾನಗಳಲ್ಲಿ ಭಕ್ತರ ಹರಕೆ ಸಲ್ಲಿಕೆಯಿಂದ ಸಂಗ್ರಹವಾದ ಸೀರೆ, ವಸ್ತ್ರಗಳನ್ನು ಪ್ರವಾಹ ಸಂತ್ರಸ್ತರಿಗೆ ವಿತರಿಸುವಂತೆ ಸರಕಾರ ...

Vijaya Karnataka 12 Aug 2019, 5:00 am
ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆ ನಿರ್ವಹಣೆಯಲ್ಲಿರುವ ದೇವಸ್ಥಾನಗಳಲ್ಲಿ ಭಕ್ತರ ಹರಕೆ ಸಲ್ಲಿಕೆಯಿಂದ ಸಂಗ್ರಹವಾದ ಸೀರೆ, ವಸ್ತ್ರಗಳನ್ನು ಪ್ರವಾಹ ಸಂತ್ರಸ್ತರಿಗೆ ವಿತರಿಸುವಂತೆ ಸರಕಾರ ಸೂಚಿಸಿದೆ.
Vijaya Karnataka Web temple


ದೇವಸ್ಥಾನಗಳ ಆಡಳಿತ ಮಂಡಳಿಗಳೇ ಈ ನಿಟ್ಟಿನಲ್ಲಿ ಮುಂದೆ ಬಂದಿವೆ. ಅದರಂತೆ ಬೆಳಗಾವಿ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನದೊಳಗೆ ದೇವಸ್ಥಾನಗಳ ಸುಪರ್ದಿಯಲ್ಲಿರುವ ಇಂಥ ವಸ್ತ್ರಗಳನ್ನು ಜಿಲ್ಲಾಧಿಕಾರಿ ವಶಕ್ಕೆ ನೀಡಲು ನಿರ್ದೇಶಿಸಲಾಗಿದೆ. ಇದರ ಸಾಗಾಣಿಕೆಯ ವೆಚ್ಚವನ್ನು ಮೈಸೂರಿನ ಚಾಮುಂಡೇಶ್ವರಿ ದೇವಾಲಯ ಮತ್ತು ಸವದತ್ತಿ ಯಲ್ಲಮ್ಮ ದೇವಾಲಯದ ನಿಧಿಯಿಂದ ಭರಿಸುವಂತೆ ಸೂಚಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ