ಆ್ಯಪ್ನಗರ

Bharat Jodo Yatra | ಮೈಸೂರಿನ ಆರ್ ಗೇಟ್ ನಿಂದ ನಾಲ್ಕನೇ ದಿನದ ಕಾಂಗ್ರೆಸ್ ಪಾದಯಾತ್ರೆ ಆರಂಭ

ಭಾರತ್ ಜೋಡೋ ಯಾತ್ರೆ ನಾಲ್ಕನೇ ದಿನದ ಪಾದಯಾತ್ರೆ ಆರಂಭಗೊಂಡಿದೆ. ಸೋಮವಾರ ಬೆಳಗ್ಗೆ ಮೈಸೂರಿನ ಆರ್ ಗೇಟ್ ನಿಂದ ಪಾದಯಾತ್ರೆ ಆರಂಭಗೊಂಡಿದೆ. ಬೆಳಗಿನ ಜಾವ 6:30 ಕ್ಕೆ ಪಾದಯಾತ್ರೆ ಆರಂಭವಾಗಿದೆ. ನಾಲ್ಕನೇ ದಿನ ಸೋಮವಾರ ರಾಹುಲ್ ಗಾಂಧಿ12 ಕಿ.ಮೀ ಹೆಜ್ಜೆ ಹಾಕಲಿದ್ದಾರೆ. 9:30 ಕ್ಕೆಶ್ರೀರಂಗಪಟ್ಟಣದ ಅಗ್ರಹಾರದಲ್ಲಿ ಬೆಳಗ್ಗಿನ ವಿರಾಮ ಇರಲಿದೆ. ಶ್ರೀರಂಗಪಟ್ಟಣದ ಪರಿವರ್ತನಾ ಸ್ಕೂಲ್ ನಲ್ಲಿ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ.

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka Web 3 Oct 2022, 7:16 am

ಹೈಲೈಟ್ಸ್‌:

  • ಭಾರತ್ ಜೋಡೋ ಯಾತ್ರೆ ನಾಲ್ಕನೇ ದಿನದ ಪಾದಯಾತ್ರೆ ಆರಂಭ
  • ಸೋಮವಾರ ಬೆಳಗ್ಗೆ ಮೈಸೂರಿನ ಆರ್ ಗೇಟ್ ನಿಂದ ಪಾದಯಾತ್ರೆ ಆರಂಭ
  • ಸೋನಿಯಾ ಗಾಂಧಿ ಆಗಮನ ಹಿನ್ನೆಲೆ ಸಂಜೆ 4:30 ಕ್ಕೆ ಪಾದಯಾತ್ರೆ ಮುಕ್ತಾಯ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web bharat jodo yatra
ಸಂಗ್ರಹ ಚಿತ್ರ
ಮೈಸೂರು: ಭಾರತ್ ಜೋಡೋ ಯಾತ್ರೆ ನಾಲ್ಕನೇ ದಿನದ ಪಾದಯಾತ್ರೆ ಆರಂಭಗೊಂಡಿದೆ. ಸೋಮವಾರ ಬೆಳಗ್ಗೆ ಮೈಸೂರಿನ ಆರ್ ಗೇಟ್ ನಿಂದ ಪಾದಯಾತ್ರೆ ಆರಂಭಗೊಂಡಿದೆ. ಬೆಳಗಿನ ಜಾವ 6:30 ಕ್ಕೆ ಪಾದಯಾತ್ರೆ ಆರಂಭವಾಗಿದೆ.
ನಾಲ್ಕನೇ ದಿನ ಸೋಮವಾರ ರಾಹುಲ್ ಗಾಂಧಿ 12 ಕಿ.ಮೀ ಹೆಜ್ಜೆ ಹಾಕಲಿದ್ದಾರೆ. 9:30 ಕ್ಕೆಶ್ರೀರಂಗಪಟ್ಟಣದ ಅಗ್ರಹಾರದಲ್ಲಿ ಬೆಳಗ್ಗಿನ ವಿರಾಮ ಇರಲಿದೆ. ಶ್ರೀರಂಗಪಟ್ಟಣದ ಪರಿವರ್ತನಾ ಸ್ಕೂಲ್ ನಲ್ಲಿ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ.

Bharat Jodo Yatra: ಕಾಂಗ್ರೆಸ್‌ ಪಾದಯಾತ್ರೆಗೆ ತಿರುಗೇಟು ನೀಡಲು ಬಿಜೆಪಿ 'ಪಂಚ'ತಂತ್ರ!
ಮಧ್ಯಾಹ್ನ 2 ಕ್ಕೆ ಮತ್ತೆ ಪಾದಯಾತ್ರೆ ಶ್ರೀರಂಗಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಆರಂಭಗೊಳ್ಳಲಿದೆ. ಸಂಜೆ 4:30 ಕ್ಕೆ ಪಾದಯಾತ್ರೆ ಮುಕ್ತಾಯಗೊಳ್ಳಿದ್ದು, ಪಾಂಡವಪುರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪಾದಯಾತ್ರೆ ಮುಕ್ತಾಯವಾಗಲಿದೆ.

ಮಧ್ಯಾಹ್ನ 10 ಕಿ.ಮೀ ಪಾದಯಾತ್ರೆ ನಡೆಯಲಿದ್ದು, ರಾತ್ರಿ ಜೆಎಸ್ಎಸ್ ಗ್ರೌಂಡ್ ನಲ್ಲಿ ರಾಹುಲ್ ವಾಸ್ತವ್ಯ ಹೂಡಲಿದ್ದಾರೆ. ಸೋನಿಯಾ ಗಾಂಧಿ ಮೈಸೂರಿಗೆ ಆಗಮನದ ಹಿನ್ನೆಲೆಯಲ್ಲಿ ಸಂಜೆ 4:30 ಕ್ಕೆ ಪಾದಯಾತ್ರೆ ಮುಕ್ತಾಯ ಆಗಲಿದೆ. ಬಳಿಕ ರಾಹುಲ್ ಕೊಡಗಿಗೆ ತೆರಳುವ ಸಾಧ್ಯತೆ ಇದೆ.

ಎರಡು ದಿನ ಬ್ರೇಕ್

ಮಂಗಳವಾರ ಹಾಗು ಬುಧವಾರ ದಸರಾ ರಜೆ ಇರುವ ಹಿನ್ನೆಲೆಯಲ್ಲಿ ಪಾದಯಾತ್ರೆಗೆ ಬ್ರೇಕ್ ಇರಲಿದೆ. ಗುರುವಾರ ಮತ್ತೆ ಪಾದಯಾತ್ರೆ ಆರಂಭಗೊಳ್ಳಲಿದೆ.

ಕಪ್ಪು ಬಾವುಟ ಪ್ರದರ್ಶನ ಸಾಧ್ಯತೆ, ಖಾಕಿ ಫುಲ್ ಅಲರ್ಟ್

ಮೈಸೂರಲ್ಲಿ ರಾಹುಲ್ ಗೆ ಕಪ್ಪು ಭಾವುಟ ಪ್ರದರ್ಶನ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಹುಲ್ ಪಾದಯಾತ್ರೆಗೆ ಫುಲ್ ಸೆಕ್ಯೂರಿಟಿ ನೀಡಲಾಗಿದೆ. ಭದ್ರತೆಗೆ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ರಾಹುಲ್ ಸುತ್ತಮುತ್ತ 500ಕ್ಕೂ ಹೆಚ್ಚು ಮಂದಿ ಪೊಲೀಸರ ನಿಯೋಜನೆ ಮಾಡಲಾಗಿದೆ.
ಪಾದಯಾತ್ರೆ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಮಿಲ್ಲರ್ ಪಾರ್ಕ್ ನಲ್ಲಿರುವ ಆಜಂ ಮಸೀದ್ ಹಾಗೂ ಸೈಂಟ್ ಫಿಲೋಮಿನಾ ಚರ್ಚ್ ಗೆ ಭೇಟಿ ನೀಡಿದರು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ