ಆ್ಯಪ್ನಗರ

ಅಧಿವೇಶನ ಮೊಟಕುಗೊಳಿಸುವ ವಿಚಾರದ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ; ನಾರಾಯಣ ಗೌಡ

ಅಧಿವೇಶನದಲ್ಲಿ ವಿರೋಧ ಪಕ್ಷಗಳಿಂದ ಹೋರಾಟದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ನಾರಾಯಣ ಗೌಡ, ವಿರೋಧ ಪಕ್ಷದ ಕೆಲಸ ಹೋರಾಟ ನಡೆಸುವುದಾಗಿದೆ, ಸದನ ಸುಸೂತ್ರವಾಗಿ ನಡೆಯುವ ವಿಶ್ವಾಸವಿದೆ ಎಂದು ಹೇಳಿದರು.

Vijaya Karnataka Web 21 Sep 2020, 12:01 pm
ಬೆಂಗಳೂರು: ಕೊರೊನಾ ಹೆಚ್ಚಾಗುತ್ತಿರುವ ಕಾರಣದಿಂದ ಸದನ ಶೀಘ್ರವಾಗಿ ಮುಕ್ತಾಯಗೊಳಿಸುವ ಚಿಂತನೆ ಇದೆ ಅಷ್ಟೇ ಎಂದು ಸಚಿವ ನಾರಾಯಣ ಗೌಡ ಹೇಳಿಕೆ ನೀಡಿದ್ದಾರೆ.
Vijaya Karnataka Web narayana gowda


ಸದನ ಕದನ: ಅಧಿವೇಶನದ ಅಖಾಡದಲ್ಲಿ ಮಾತಿನ ಕುಸ್ತಿಗೆ ಸಜ್ಜಾದ ಆಡಳಿತ ಹಾಗೂ ವಿಪಕ್ಷ!

ವಿಧಾನಸಭಾ ಕಲಾಪ ಆರಂಭಕ್ಕೂ ಮುನ್ನ ವಿಧಾನಸೌಧದಲ್ಲಿ ಅಧಿವೇಶನ ಮೊಟಕುಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಕುರಿತಾಗಿ ಇದುವರೆಗೂ ಅಂತಿಮ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಹೇಳಿದರು. ಅಧಿವೇಶನದಲ್ಲಿ ವಿರೋಧ ಪಕ್ಷಗಳಿಂದ ಹೋರಾಟದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ನಾರಾಯಣ ಗೌಡ, ವಿರೋಧ ಪಕ್ಷದ ಕೆಲಸ ಹೋರಾಟ ನಡೆಸುವುದಾಗಿದೆ, ರಾಜ್ಯ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಸದನ ಸುಸೂತ್ರವಾಗಿ ನಡೆಯುವ ವಿಶ್ವಾಸವಿದೆ ಎಂದು ಹೇಳಿದರು.

ವಿಧಾನಸಭೆ ಕಲಾಪ ಆರಂಭ; ಅಶೋಕ್ ಗಸ್ತಿ, ಪ್ರಣಬ್‌ ಮುಖರ್ಜಿ ಸೇರಿದಂತೆ ಅಗಲಿದ ಗಣ್ಯರಿಗೆ ಸಂತಾಪ

ಇನ್ನು ಸಚಿವ ಸಂಪುಟ ವಿಸ್ತರಣೆ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಕುರಿತಾಗಿ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಆಗಿದೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾರಿಗೂ ಅನ್ಯಾಯ ಆಗುವುದಿಲ್ಲ, ಎಲ್ಲರಿಗೂ ಈ ವಿಷಯದಲ್ಲಿ ಅನುಕೂಲ ಆಗಲಿದೆ ಎಂದು ನಾರಾಯಣ ಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ