ಆ್ಯಪ್ನಗರ

ವರ್ಗಾವಣೆ: ಕೈ ಸಚಿವರ ಅಪಸ್ವರ

ಕೆಲವೊಂದು ಪ್ರಮುಖ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು, ಪಾಲಿಕೆ ಆಯುಕ್ತರನ್ನು ಸಂಬಂಧಪಟ್ಟ ಸಚಿವರ ಗಮನಕ್ಕೂ ತರದೆ ದಿಢೀರನೇ ವರ್ಗಾವಣೆ ಮಾಡಿರುವ ಬಗ್ಗೆ ಕಾಂಗ್ರೆಸ್‌ ಸಚಿವರು ಅಸಮಾಧಾನಗೊಂಡಿದ್ದಾರೆ.

Vijaya Karnataka 15 Jul 2018, 9:14 am
ಬೆಂಗಳೂರು: ಕೆಲವೊಂದು ಪ್ರಮುಖ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು, ಪಾಲಿಕೆ ಆಯುಕ್ತರನ್ನು ಸಂಬಂಧಪಟ್ಟ ಸಚಿವರ ಗಮನಕ್ಕೂ ತರದೆ ದಿಢೀರನೇ ವರ್ಗಾವಣೆ ಮಾಡಿರುವ ಬಗ್ಗೆ ಕಾಂಗ್ರೆಸ್‌ ಸಚಿವರು ಅಸಮಾಧಾನಗೊಂಡಿದ್ದಾರೆ.
Vijaya Karnataka Web congress


ಐಎಎಸ್‌, ಐಪಿಎಸ್‌ ಹಾಗೂ ಕೆಎಎಸ್‌ ಅಧಿಕಾರಿಗಳ ವರ್ಗಾವಣೆ ಮುಖ್ಯಮಂತ್ರಿ ವಿವೇಚನೆಗೆ ಸೇರಿದ್ದರೂ ಸಮ್ಮಿಶ್ರ ಸರಕಾರದ ವ್ಯವಸ್ಥೆಯಲ್ಲಿ ಸಂಬಂಧಪಟ್ಟ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ವರ್ಗಾವಣೆ ಮಾಡುವುದು ಮೈತ್ರಿ ಧರ್ಮವೆಂದು ಪ್ರತಿಪಾದಿಸಿರುವ ಸಚಿವರು, ಈ ರೀತಿ ದಿಢೀರನೇ ವರ್ಗಾವಣೆ ಮಾಡುವುದು ಸರಿಯಲ್ಲ. ಇಲಾಖೆಗಳಲ್ಲಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳ ವರ್ಗಾವಣೆ ತಮ್ಮ ಗಮನಕ್ಕೂ ಬರಬೇಕು ಜತೆಗೆ ತಮ್ಮೊಂದಿಗೂ ಸಮಾಲೋಚಿಸಬೇಕು ಎಂದು ಕೆಲವು ಸಚಿವರು ಈಗಾಗಲೇ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಬಳಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆಂದು ತಿಳಿದುಬಂದಿದೆ.

ಇಲಾಖೆಗಳಲ್ಲಿ ಏನೇ ಆದರೂ ನಾವೇ ಜವಾಬ್ದಾರರು. ಹೀಗಾಗಿ ಯಾವ ಅಧಿಕಾರಿಗಳನ್ನು ಇಟ್ಟುಕೊಳ್ಳಬೇಕು ಎಂಬುದು ತಮ್ಮ ವಿವೇಚನೆಗೆ ಬಿಡುವುದು ಸೂಕ್ತ. ಒಂದು ವೇಳೆ ವರ್ಗಾವಣೆ ಮಾಡುವುದೇ ಆದರೆ ತಮ್ಮ ಗಮನಕ್ಕೆ ತಂದು ಮಾಡಬೇಕು, ಈ ರೀತಿ ದಿಢೀರನೇ ವರ್ಗಾವಣೆ ಮಾಡುವುದು ಸರಿಯಲ್ಲ ಎಂದು ನೇರವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ