ಆ್ಯಪ್ನಗರ

ಸತೀಶ್‌ ಜಾರಕಿಹೊಳಿಗೆ ಎಂಪಿ ಟಿಕೆಟ್‌ ನೀಡಲು ಒತ್ತಡ

ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸಲು ಲೋಕಸಭೆ ಚುನಾವಣೆ ಟಿಕೆಟ್‌ ನೀಡಬೇಕೆಂದು ಪೌರಾಡಳಿತ ಸಚಿವ ರಮೇಶ್‌ ಜಾರಕಿಹೊಳಿ ಒತ್ತಾಯಿಸಿದ್ದಾರೆ.

Vijaya Karnataka 11 Sep 2018, 4:00 am
ಬೆಂಗಳೂರು : ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸಲು ಲೋಕಸಭೆ ಚುನಾವಣೆ ಟಿಕೆಟ್‌ ನೀಡಬೇಕೆಂದು ಪೌರಾಡಳಿತ ಸಚಿವ ರಮೇಶ್‌ ಜಾರಕಿಹೊಳಿ ಒತ್ತಾಯಿಸಿದ್ದಾರೆ.
Vijaya Karnataka Web rjp_240517_brothers1


ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ''ಬೆಳಗಾವಿಯಲ್ಲಿ ಹಿಂದುತ್ವದ ರಾಜಕಾರಣ ಪ್ರಬಲವಾಗಿದೆ. ಹಾಗಾಗಿ ಗೆಲುವಿನ ಸಾಮರ್ಥ್ಯ‌ವಿರುವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು. ಸತೀಶ್‌ ಇದಕ್ಕೆ ಸೂಕ್ತವೆಂಬ ಸಲಹೆ ನೀಡಲಾಗಿದೆ. ಅವರು ಒಪ್ಪದಿದ್ದರೆ ನಾನೇ ಸ್ಪರ್ಧಿಸುತ್ತೇನೆ. ವಿವೇಕರಾವ್‌ ಪಾಟೀಲ್‌ ಅವರೂ ಸಮರ್ಥರಿದ್ದಾರೆ. ನಮ್ಮ ಮೂವರಲ್ಲಿ ಯಾರಾದರೂ ಒಬ್ಬರಿಗೆ ಟಿಕೆಟ್‌ ನೀಡಬೇಕು,'' ಎಂದರು.

ಸತೀಶ್‌ ಜಾರಕಿಹೊಳಿ ಅವರಿಗೆ ಸಿಎಂ ಸ್ಥಾನ ನೀಡಬೇಕೆಂಬ ಹೇಳಿಕೆ ಬಗ್ಗೆ ಕೇಳಿದಾಗ, ''ನಮ್ಮ ಕುಟುಂಬದಿಂದ ಸಿಎಂ ಆಗಲು ಸತೀಶ್‌ ಸಮರ್ಥರಿದ್ದಾರೆ. ನಾನು ಈ ಹುದ್ದೆಯ ಆಕಾಂಕ್ಷಿಯಲ್ಲ. ಈ ಹೇಳಿಕೆಗೆ ಬದ್ಧ,'' ಎಂದು ಸ್ಪಷ್ಟ ಪಡಿಸಿದರು.

ಡಿಕೆಶಿಗೆ ಟಾಂಗ್‌

''ಬೆಳಗಾವಿ ಜಿಲ್ಲೆ ರಾಜಕಾರಣದಲ್ಲಿ ಹೊರಗಿನವರು ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ. ಏನಾದರೂ ಸಮಸ್ಯೆಯಾದರೆ ನಾವು ಬಗೆಹರಿಸಿಕೊಳ್ಳುತ್ತೇವೆ. ಬೇರೆಯವರು ಮಧ್ಯೆ ಪ್ರವೇಶಿಸುವ ಅಗತ್ಯವಿಲ್ಲ,'' ಎಂದು ಜಿಲ್ಲೆಯ ರಾಜಕಾರಣದಲ್ಲಿ ಸಚಿವ ಡಿಕೆಶಿ ಹಸ್ತಕ್ಷೇಪದ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದರು.

ಬಿಜೆಪಿ ನಾಯಕರನ್ನು ಭೇಟಿಯಾದ್ರೆ ತಪ್ಪಾ?

ಬಿಜೆಪಿ ನಾಯಕರ ಸಂಪರ್ಕದ ಬಗ್ಗೆ ಕೇಳಿದಾಗ, ''ಬಿಜೆಪಿ ನಾಯಕರನ್ನು ಭೇಟಿಯಾಗುವುದು ತಪ್ಪಾ? ಮಹಾರಾಷ್ಟ್ರದಲ್ಲೂ ನಮ್ಮ ಸಕ್ಕರೆ ಕಾರ್ಖಾನೆಗಳಿವೆ. ಹಾಗಾಗಿ ಅಲ್ಲಿನ ಸಚಿವರನ್ನು ಭೇಟಿಯಾಗಿದ್ದೆ. ಇನ್ನು ರಾಜ್ಯ ಬಿಜೆಪಿ ನಾಯಕರು ನಮ್ಮನ್ನು ಸಂಪರ್ಕಿಸಿಲ್ಲ. 2 ದಿನದ ಹಿಂದೆ ಬಿಜೆಪಿಯ ರೇಣುಕಾಚಾರ್ಯ ನಮ್ಮ ಮನೆಗೆ ಬಂದಿದ್ದರು. ಅವರು ಕಾಂಗ್ರೆಸ್‌ಗೆ ಸೇರುತ್ತಾರೆಂದು ಹೇಳಲು ಸಾಧ್ಯವಾ?,'' ಎಂದು ಸಚಿವ ರಮೇಶ್‌ ಜಾರಕಿಹೊಳಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ