ಆ್ಯಪ್ನಗರ

ಶಿವಮೊಗ್ಗ ಸ್ಫೋಟ ದುರಂತದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಬೇಕು; ಎಚ್‌ಡಿಕೆ ಆಗ್ರಹ

ಕಲ್ಲು ಕ್ವಾರಿಯಲ್ಲಿ ನಡೆದ ಈ ಸ್ಫೋಟ ದುರಂತದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಬೇಕು ಎಂದು ಆಗ್ರಹಿಸಿರುವ ಎಚ್‌ಡಿ ಕುಮಾರಸ್ವಾಮಿ, ಬಡ ಕಾರ್ಮಿಕರ ಜೀವ ಹರಣಕ್ಕೆ, ಈ ದುರ್ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

Vijaya Karnataka Web 22 Jan 2021, 9:09 am
ಶಿವಮೊಗ್ಗ: ಶಿವಮೊಗ್ಗದ ಹುಣಸೋಡು ಬಳಿ ಸಂಭವಿಸಿದ ಜಿಲೆಟಿನ್ ಸ್ಫೋಟ ದುರಂತ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಶಿವಮೊಗ್ಗದ ಜನರಂತೂ ಭೂಕಂಪವೇ ನಡೆದುಹೋಯಿತು ಅನ್ನೋ ಹಾಗೆ ಭಯಭೀತಾಗಿದ್ದರು. ಗಂಟೆ ಉರುಳುತ್ತಿದ್ದಂತೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ.
Vijaya Karnataka Web HD Kumaraswamy


ಘಟನೆಗೆ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ ಹಾಗು ಸಿಎಂ ಬಿಎಸ್‌ ಯಡಿಯೂರಪ್ಪ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ. ಇದೀಗ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಕೂಡ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಶಿವಮೊಗ್ಗದ ಅಬ್ಬಲಗೆರೆಯ ಹುಣಸೋಡು ಗ್ರಾಮದ ಕಲ್ಲುಕ್ವಾರಿಯಲ್ಲಿ ಜಿಲಿಟಿನ್ ಕಡ್ಡಿಗಳ ಸ್ಫೋಟದಿಂದ ಅನೇಕ ಕಾರ್ಮಿಕರು ಸಾವು ಕಂಡಿರುವುದು ಅತ್ಯಂತ ನೋವಿನ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.
ಶಿವಮೊಗ್ಗ ಡೈನಾಮೈಟ್‌ ಸ್ಫೋಟ ದುರಂತ; ಪ್ರಧಾನಿ ಮೋದಿ, ಸಿಎಂ ಬಿಎಸ್‌ವೈ ಸಂತಾಪ

ಅಲ್ಲದೇ, ಕಲ್ಲು ಕ್ವಾರಿಯಲ್ಲಿ ನಡೆದ ಈ ಸ್ಫೋಟ ದುರಂತದ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸಬೇಕು ಎಂದು ಆಗ್ರಹಿಸಿರುವ ಎಚ್‌ಡಿ ಕುಮಾರಸ್ವಾಮಿ, ಬಡ ಕಾರ್ಮಿಕರ ಜೀವ ಹರಣಕ್ಕೆ, ಈ ದುರ್ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ