ಆ್ಯಪ್ನಗರ

ನೂತನ ಶಿಕ್ಷಣ ನೀತಿಗೆ ತಾತ್ವಿಕ ಒಪ್ಪಿಗೆ

ಡಾ.ಕೆ. ಕಸ್ತೂರಿರಂಗನ್‌ ವರದಿಯಲ್ಲಿ ಪ್ರಸ್ತಾಪಿತವಾದ ಹೊಸ ಶಿಕ್ಷಣ ನೀತಿ ಜಾರಿಗೆ ರಾಜ್ಯ ಸರಕಾರ ತಾತ್ವಿಕ ಒಪ್ಪಿಗೆ ನೀಡಿದೆ.

Vijaya Karnataka 2 Aug 2018, 4:00 am
ಬೆಂಗಳೂರು: ಡಾ.ಕೆ. ಕಸ್ತೂರಿರಂಗನ್‌ ವರದಿಯಲ್ಲಿ ಪ್ರಸ್ತಾಪಿತವಾದ ಹೊಸ ಶಿಕ್ಷಣ ನೀತಿ ಜಾರಿಗೆ ರಾಜ್ಯ ಸರಕಾರ ತಾತ್ವಿಕ ಒಪ್ಪಿಗೆ ನೀಡಿದೆ.
Vijaya Karnataka Web New Education Policy


ವರದಿ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಶಿಕ್ಷಣ ಪರಿಷತ್‌ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವರದಿ ಅನುಷ್ಠಾನದ ಬಗ್ಗೆ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ.

ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಉನ್ನತ ಶಿಕ್ಷಣ ಜಿ.ಟಿ.ದೇವೇಗೌಡ, '' ಹೊಸ ಶಿಕ್ಷಣ ನೀತಿ ಜಾರಿಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಇದರ ಜತೆಗೆ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಹಲವು ವಿಚಾರಗಳ ಬಗ್ಗೆ ವರದಿಯಲ್ಲಿ ಹೇಳಲಾಗಿದ್ದು, ಪ್ರತಿಯೊಬ್ಬ ವಿಷಯ ತಜ್ಞರನ್ನು ಒಳಗೊಂಡ ಸಮಿತಿ ರಚಿಸಿ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು,'' ಎಂದು ತಿಳಿಸಿದರು.

''ತಾಂತ್ರಿಕ ಶಿಕ್ಷಣ, ಶಿಕ್ಷಕರ ತರಬೇತಿ, ವಿಶ್ವವಿದ್ಯಾಲಯ ಶಿಕ್ಷಣ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ. ಹೀಗಾಗಿ ವಿವಿ ಕುಲಪತಿಗಳು, ತಜ್ಞರ ಜತೆಗೆ ಸಮಾಲೋಚನೆ ನಡೆಸಬೇಕಾದ ಅಗತ್ಯವಿದೆ,'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ