ಆ್ಯಪ್ನಗರ

ಸಿದ್ದಾರ್ಥ ನಾಪತ್ತೆ ಹಿಂದೆ ನಿಗೂಢತೆ ಇದೆ: ಆರ್ ಅಶೋಕ್

ಸಿದ್ದಾರ್ಥ ಅವರ ಸಾವಿನ ಹಿಂದೆ ಏನೋ ರಹಸ್ಯವಿದೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ.

Vijaya Karnataka Web 30 Jul 2019, 1:57 pm
ಬೆಂಗಳೂರು: ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ ನಾಪತ್ತೆ ಬಗ್ಗೆ ಕಳವಳ ವ್ಯಕ್ತ ಪಡಿಸಿರುವ ಬಿಜೆಪಿ ನಾಯಕ ಆರ್ ಅಶೋಕ್, ಅವರ ನಾಪತ್ತೆ ಹಿಂದೆ ನಿಗೂಢತೆ ಇದೆ ಎಂದಿದ್ದಾರೆ.
Vijaya Karnataka Web R Ashok


ವಿಧಾನಸೌಧದಲ್ಲಿ ಮಾತನಾಡುತ್ತಿದ್ದ ಸಿದ್ಧಾರ್ಥ, ಮತ್ತು ನನ್ನ ನಡುವೆ ಉತ್ತಮ ಸಂಬಂಧವಿತ್ತು. ಅವರು ನನಗೆ ಉತ್ತಮ ಸ್ನೇಹಿತರಾಗಿದ್ದರು. ಲಕ್ಷಾಂತರ ಜನಕ್ಕೆ ಉದ್ಯೋಗ‌ ಕೊಟ್ಟ ಅವರು
ಸಮಾಜಕ್ಕೆ ಒಳಿತನ್ನು ಮಾಡಿದ್ದಾರೆ. ಯಾವುದೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿರಲಿಲ್ಲ, ಎಂದರು.

ಐಟಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದು ಅವರ ವೈಯುಕ್ತಿಕ ವಿಷಯ. ಅವರ ಆಸ್ತಿಗಿಂತ ಸಾಲ ಹೆಚ್ಚಾಗಿದೆ. ಅವರ ನಾಪತ್ತೆ ಹಿಂದೆ ನಿಗೂಢತೆ ಇದೆ. ಈ ಕುರಿತ ತನಿಖೆ ಬಗ್ಗೆ ಮುಖ್ಯಮಂತ್ರಿಗಳ ಈ ಬಗ್ಗೆ ಮಾತನಾಡುತ್ತೇನೆ ಎಂದು ಅವರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ