ಕೋವಿಡ್ ಪರಿಕರ ಖರೀದಿಯಲ್ಲಿ ಅವ್ಯವಹಾರ: ಸದನದಲ್ಲಿ ಸ್ಯಾನಿಟೈಸರ್ ಪ್ರದರ್ಶಿಸಿದ ಸಿದ್ದರಾಮಯ್ಯ!
ಕೋವಿಡ್ ಪರಿಕರ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಸದನದಲ್ಲಿ ಸ್ಯಾನಿಟೈಸರ್ ಪ್ರದರ್ಶನ ಮಾಡಿದ ಅವರು ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.
Vijaya Karnataka Web 23 Sep 2021, 8:35 pm
ಹೈಲೈಟ್ಸ್:
- ಕೋವಿಡ್ ಪರಿಕರ ಖರೀದಿಯಲ್ಲಿ ಅವ್ಯವಹಾರ ನಡೆದಿದೆ
- ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ
- ಸದನದಲ್ಲಿ ಸ್ಯಾನಿಟೈಸರ್ ಪ್ರದರ್ಶನ ಮಾಡಿದ ಸಿದ್ದರಾಮಯ್ಯ
ಬೆಂಗಳೂರು: ಕೋವಿಡ್ ಪರಿಕರ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಸದನದಲ್ಲಿ ಸ್ಯಾನಿಟೈಸರ್ ಪ್ರದರ್ಶನ ಮಾಡಿದ ಅವರು ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ಕೋವಿಡ್ ಪರಿಕರ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಐಯೋಡಿನ್ ಇಂಡಿಯಾ ಫಾರ್ಮಾಸಿಟಿಕಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸ್ಯಾನಿಟೈಸರ್ಗೆ ಹೆಚ್ಚು ಬೆಲೆ ನೀಡಿ ಖರೀದಿಸಲಾಗಿದೆ. ಒಟ್ಟು9.66 ಕೋಟಿ ಮೌಲ್ಯದ ಸ್ಯಾನಿಟೈಸರ್ ಖರೀದಿ ಮಾಡಲಾಗಿದ್ದು, ಕೆಲವೇ ದಿನಗಳಲ್ಲಿ ಸ್ಯಾನಿಟೈಸರ್ ಕೊಳಚೆ ನೀರಿನಂತೆ ಕಾಣುತ್ತದೆ ಎಂದು ಆರೋಪ ಮಾಡಿದರು.
ಸ್ಯಾನಿಟೈಸರ್ ಬಾಟಲ್ ಪ್ರದರ್ಶನ ಮಾಡಿದ ಸಿದ್ದರಾಮಯ್ಯ, ಡ್ರಗ್ಸ್ ಕಂಟ್ರೋಲ್ ಈ ಸ್ಯಾನಿಟೈಸರ್ ತಿರಸ್ಕರಿಸಿದೆ. ಈಗಾಗಲೇ ಕಳಪೆ ಸ್ಯಾನಿಟೈಸರ್ಗೆ 2 ಕೋಟಿ ಹಣ ನೀಡಲಾಗಿದೆ. ಒಂದು ಕಡೆ ಪರಿಹಾರಕ್ಕೆ ದುಡ್ಡಿಲ್ಲ ಅಂತಾರೆ. ಇನ್ನೊಂದು ಕಡೆ ಇಂತಹ ಸ್ಯಾನಿಟೈಸರ್ ಖರೀದಿ ಮಾಡುತ್ತಾರೆ ಎಂದ ಅವರು, ಈ ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಆಗಬೇಕು. ಸಚಿವ ಅಥವಾ ಅಧಿಕಾರಿ ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವೈಫಲ್ಯ: ಸಿದ್ದರಾಮಯ್ಯ ಆರೋಪ
ಚರ್ಚೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೋವಿಡ್ ಎರಡನೇ ಅಲೆಯ ಬಗ್ಗೆ ತಜ್ಞರು ಎಚ್ಚರಿಕೆ ಕೊಟ್ಟಿದ್ದರು.ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದರು.ಆದರೆ ಸರ್ಕಾರ ಸಿದ್ದತೆ, ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರಲಿಲ್ಲ. ಮೊದಲನೇ ಹಾಗೂ ಎರಡು ಅಲೆಗಳಲ್ಲಿ ಸಾವಿರಾರು ಜನರ ಸಾವು ಆಗಿದೆ.ಆದರೆ, ಕೋವಿಡ್ ಪ್ರಕರಣ ಹಾಗೂ ಸಾವಿನ ಬಗ್ಗೆ ಸರ್ಕಾರದ ಅಂಕಿ ಅಂಶಗಳು ಸತ್ಯಕ್ಕೆ ದೂರವಾಗಿದೆ ಎಂದು ಆರೋಪಿಸಿದರು.
37,603 ಜನರ ಸಾವು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ ಆದರೆ ಬೇರೆ ವರದಿಗಳ ಪ್ರಕಾರ 3.50 ಲಕ್ಷದಿಂದ ನಾಲ್ಕು ಲಕ್ಷ ಜನ ಕರ್ನಾಟಕದಲ್ಲಿ ಮೃತಪಟ್ಟಿದ್ದಾರೆ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ಎಷ್ಟೋ ಜನರಿಗೆ ಬೆಡ್ ಸಿಕ್ಕಿಲ್ಲ, ಆಸ್ಪತ್ರೆ ಇರಲಿಲ್ಲ. ಕೋವಿಡ್ ನಿಂದ ಸತ್ತವರಿಗೆ ಸರ್ಟಿಫಿಕೇಟ್ ಕೊಟ್ಟಿಲ್ಲ. ಆಕ್ಸಿಜನ್ ಕೊರತೆಯಿಂದ ಸಾವು ಆಗಿಲ್ಲ ಎಂದು ಪಾರ್ಲಿಮೆಂಟ್ ನಲ್ಲಿ ಕೆ.ಸಿ ವೇಣುಗೋಪಾಲ್ ಪ್ರಶ್ನೆಗೆ ಉತ್ತರ ಕೊಡುತ್ತಾರೆ. ರಾಜ್ಯ ಸರ್ಕಾರ ಮೂರೇ ಜನರ ಸಾವಾಗಿದೆ ಎಂದಿದೆ. ನಾಲ್ಕು ಲಕ್ಷ ಜನ ಕೋವಿಡ್ ನಿಂದ ಸತ್ತಿದ್ದಾರೆ ಅವರಿಗೆ ಎಲ್ಲರಿಗೂ ಪರಿಹಾರ ನೀಡಬೇಕು ಎಂದು ಡಿಕೆ ಶಿವಕುಮಾರ್ ಆಗ್ರಹಿಸಿದರು. ಏನಾದರೂ ಮಾಡಿದರೆ ಯಡಿಯೂರಪ್ಪ ಅವರು ಒಬ್ಬರೇ ಮಾಡಿದ್ದಾರೆ. ಉಳಿದವರು ಯಾರು ಮಾಡಿಲ್ಲ ಎಂದು ಆರೋಪ ಮಾಡಿದರು.
ಸ್ಯಾನಿಟೈಸರ್ ಬಾಟಲ್ ಪ್ರದರ್ಶನ ಮಾಡಿದ ಸಿದ್ದರಾಮಯ್ಯ, ಡ್ರಗ್ಸ್ ಕಂಟ್ರೋಲ್ ಈ ಸ್ಯಾನಿಟೈಸರ್ ತಿರಸ್ಕರಿಸಿದೆ. ಈಗಾಗಲೇ ಕಳಪೆ ಸ್ಯಾನಿಟೈಸರ್ಗೆ 2 ಕೋಟಿ ಹಣ ನೀಡಲಾಗಿದೆ. ಒಂದು ಕಡೆ ಪರಿಹಾರಕ್ಕೆ ದುಡ್ಡಿಲ್ಲ ಅಂತಾರೆ. ಇನ್ನೊಂದು ಕಡೆ ಇಂತಹ ಸ್ಯಾನಿಟೈಸರ್ ಖರೀದಿ ಮಾಡುತ್ತಾರೆ ಎಂದ ಅವರು, ಈ ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಆಗಬೇಕು. ಸಚಿವ ಅಥವಾ ಅಧಿಕಾರಿ ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವೈಫಲ್ಯ: ಸಿದ್ದರಾಮಯ್ಯ ಆರೋಪ
ಚರ್ಚೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೋವಿಡ್ ಎರಡನೇ ಅಲೆಯ ಬಗ್ಗೆ ತಜ್ಞರು ಎಚ್ಚರಿಕೆ ಕೊಟ್ಟಿದ್ದರು.ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದರು.ಆದರೆ ಸರ್ಕಾರ ಸಿದ್ದತೆ, ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರಲಿಲ್ಲ. ಮೊದಲನೇ ಹಾಗೂ ಎರಡು ಅಲೆಗಳಲ್ಲಿ ಸಾವಿರಾರು ಜನರ ಸಾವು ಆಗಿದೆ.ಆದರೆ, ಕೋವಿಡ್ ಪ್ರಕರಣ ಹಾಗೂ ಸಾವಿನ ಬಗ್ಗೆ ಸರ್ಕಾರದ ಅಂಕಿ ಅಂಶಗಳು ಸತ್ಯಕ್ಕೆ ದೂರವಾಗಿದೆ ಎಂದು ಆರೋಪಿಸಿದರು.
37,603 ಜನರ ಸಾವು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ ಆದರೆ ಬೇರೆ ವರದಿಗಳ ಪ್ರಕಾರ 3.50 ಲಕ್ಷದಿಂದ ನಾಲ್ಕು ಲಕ್ಷ ಜನ ಕರ್ನಾಟಕದಲ್ಲಿ ಮೃತಪಟ್ಟಿದ್ದಾರೆ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ಎಷ್ಟೋ ಜನರಿಗೆ ಬೆಡ್ ಸಿಕ್ಕಿಲ್ಲ, ಆಸ್ಪತ್ರೆ ಇರಲಿಲ್ಲ. ಕೋವಿಡ್ ನಿಂದ ಸತ್ತವರಿಗೆ ಸರ್ಟಿಫಿಕೇಟ್ ಕೊಟ್ಟಿಲ್ಲ. ಆಕ್ಸಿಜನ್ ಕೊರತೆಯಿಂದ ಸಾವು ಆಗಿಲ್ಲ ಎಂದು ಪಾರ್ಲಿಮೆಂಟ್ ನಲ್ಲಿ ಕೆ.ಸಿ ವೇಣುಗೋಪಾಲ್ ಪ್ರಶ್ನೆಗೆ ಉತ್ತರ ಕೊಡುತ್ತಾರೆ. ರಾಜ್ಯ ಸರ್ಕಾರ ಮೂರೇ ಜನರ ಸಾವಾಗಿದೆ ಎಂದಿದೆ. ನಾಲ್ಕು ಲಕ್ಷ ಜನ ಕೋವಿಡ್ ನಿಂದ ಸತ್ತಿದ್ದಾರೆ ಅವರಿಗೆ ಎಲ್ಲರಿಗೂ ಪರಿಹಾರ ನೀಡಬೇಕು ಎಂದು ಡಿಕೆ ಶಿವಕುಮಾರ್ ಆಗ್ರಹಿಸಿದರು. ಏನಾದರೂ ಮಾಡಿದರೆ ಯಡಿಯೂರಪ್ಪ ಅವರು ಒಬ್ಬರೇ ಮಾಡಿದ್ದಾರೆ. ಉಳಿದವರು ಯಾರು ಮಾಡಿಲ್ಲ ಎಂದು ಆರೋಪ ಮಾಡಿದರು.