Please enable javascript.ಅಧಿಕಾರಿಗಳ ಪೋಸ್ಟಿಂಗ್ ನಲ್ಲಿ ಭ್ರಷ್ಟಾಚಾರ ನಡೆದಿಲ್ಲ: ಎಚ್ ಡಿಕೆ ಆರೋಪವನ್ನು ನಿರಾಕರಿಸಿದ ರಾಮಲಿಂಗಾ ರೆಡ್ಡಿ - there was no corruption in the posting of officials ramalinga reddy denied hdks allegation - Vijay Karnataka

ಅಧಿಕಾರಿಗಳ ಪೋಸ್ಟಿಂಗ್ ನಲ್ಲಿ ಭ್ರಷ್ಟಾಚಾರ ನಡೆದಿಲ್ಲ: ಎಚ್ ಡಿಕೆ ಆರೋಪವನ್ನು ನಿರಾಕರಿಸಿದ ರಾಮಲಿಂಗಾ ರೆಡ್ಡಿ

Subscribe

ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ಮೇಲೆ ಕಾಸಿಗಾಗಿ ಪೋಸ್ಟಿಂಗ್ ಇದು ಆರನೇ ಗ್ಯಾರಂಟಿ ಎಂದು ಆರೋಪ ಮಾಡಿದ್ದರು. ಇದಕ್ಕೆ ಉತ್ತರಿಸಿದ ಸಚಿವ ರಾಮಲಿಂಗಾ ರೆಡ್ಡಿ, ಹಿಂದಿನ ಸರ್ಕಾರ ಮೇಲೆ ಭ್ರಷ್ಟಾಚಾರ ಆರೋಪ ಮಾಡಿ, ನಾವೇ ಭ್ರಷ್ಟಾಚಾರ ಮಾಡಲು ಃಏಗೆ ಸಾಧ್ಯ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಹೈಲೈಟ್ಸ್‌:

  • ಅಧಿಕಾರಿಗಳ ಪೋಸ್ಟಿಂಗ್ ನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮಾಡಿರುವ ಆರೋಪವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರಾಕರಿಸಿದ್ದಾರೆ.
  • ನಾವು ಹಿಂದಿನ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದೆವು. ನಾವು ಆರೋಪ ಮಾಡಿ, ನಾವು ಭ್ರಷ್ಟಾಚಾರ ಮಾಡಲು ಸಾಧ್ಯವೇ? ಎಂದು ಪ್ರಶ್ನಿಸಿದರು.
  • ಎಚ್ ಡಿಕೆ ಮಾಡಿರುವ ಆರೋಪಗಳು ಸುಳ್ಳು. ನಮ್ಮ ಸರ್ಕಾರದಲ್ಲಿ ಪ್ರಾಮಾಣಿಕ, ದಕ್ಷ ಅಧಿಕಾರಿಗಳಿಗೆ ಮಾತ್ರ ಮಣೆ ಹಾಕುತ್ತೇವೆ ಎಂದ ಅವರು, ವರ್ಗಾವಣೆ ದಂಧೆ ಆರೋಪ ತಳ್ಳಿ ಹಾಕಿದರು.
Ramalinga Reddy
ಬೆಂಗಳೂರು: ಅಧಿಕಾರಿಗಳ ಪೋಸ್ಟಿಂಗ್ ನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮಾಡಿರುವ ಆರೋಪವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರಾಕರಿಸಿದ್ದಾರೆ.
ಪೋಸ್ಟಿಂಗ್ ಹಾಕಲು ದುಡ್ಡು ಬೇಡಿಕೆ ವಿಚಾರವಾಗಿ ಮಾಜಿ ಸಿಎಂ ಎಚ್.ಡಿ.ಕೆ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆದರೆ ಈ ಆರೋಪವನ್ನು ಸಚಿವ ರಾಮಲಿಂಗಾ ರೆಡ್ಡಿ ನಿರಾಕರಿಸಿದರು.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿಯವರಿಗೆ ಹೊಟ್ಟೆಉರಿ! ರಾಮಲಿಂಗಾ ರೆಡ್ಡಿ

ವಿಧಾನಸೌಧದಲ್ಲಿ ಬುಧವಾರ ಮಾತನಾಡಿದ ಅವರು, ನಾವು ಹಿಂದಿನ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದೆವು. ನಾವು ಆರೋಪ ಮಾಡಿ, ನಾವು ಭ್ರಷ್ಟಾಚಾರ ಮಾಡಲು ಸಾಧ್ಯವೇ? ಎಂದು ಪ್ರಶ್ನಿಸಿದರು.

ಎಚ್ ಡಿಕೆ ಮಾಡಿರುವ ಆರೋಪಗಳು ಸುಳ್ಳು. ನಮ್ಮ ಸರ್ಕಾರದಲ್ಲಿ ಪ್ರಾಮಾಣಿಕ, ದಕ್ಷ ಅಧಿಕಾರಿಗಳಿಗೆ ಮಾತ್ರ ಮಣೆ ಹಾಕುತ್ತೇವೆ ಎಂದ ಅವರು, ವರ್ಗಾವಣೆ ದಂಧೆ ಆರೋಪ ತಳ್ಳಿ ಹಾಕಿದರು.

ಇದೇ ಸಂದರ್ಭದಲ್ಲಿ ಈ ತಿಂಗಳ ವೇತನಕ್ಕೆ ಸಾರಿಗೆ ನಿಗಮದಲ್ಲಿ ಹಣಕಾಸು ಕೊರತೆ ವಿಚಾರವಾಗಿ ಮಾತನಾಡಿ, ಸರ್ಕಾರದಿಂದ ನಮಗೆ ಮಹಿಳಾ ಪ್ರಯಾಣಿಕರು ಎಷ್ಟು ಸಂಖ್ಯೆಯಲ್ಲಿ ಪ್ರಯಾಣ ಮಾಡಿದ್ದಾರೆಅದರ ವೆಚ್ಚ ಮಾಹಿತಿ ನೀಡಿಲಿದೆ‌. ಈ ನಿಟ್ಟಿನಲ್ಲಿ ವೇತನ ಸಮಸ್ಯೆ ಆಗುವುದಿಲ್ಲ. ಊಹೆ ಮಾಡಿಕೊಂಡು ಹೇಳಿದ್ದಕ್ಕೆ ಉತ್ತರ ಕೊಡಲು ಆಗಲ್ಲ ಎಂದರು.

ಪಂಚಗ್ಯಾರಂಟಿಗಳ ಕಾಂಗ್ರೆಸ್ ಸರ್ಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; 'ಕಾಸಿಗಾಗಿ ಪೋಸ್ಟಿಂಗ್!!ʼ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು.

ಈ‌ ಕುರಿತು ಟ್ವೀಟ್ ಮಾಡಿದ್ದ ಅವರು, ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ ಎಂದು ಆರೋಪಿಸಿದ್ದರು.
ಇರ್ಷಾದ್ ಉಪ್ಪಿನಂಗಡಿ
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ