ಆ್ಯಪ್ನಗರ

ಬಿಎಸ್‌ವೈ ರಾಜೀನಾಮೆ ನನ್ನ ರಾಜಕೀಯ ಜೀವನದಲ್ಲಿ ಅತ್ಯಂತ ದುಃಖದ ದಿನ: ರೇಣುಕಾಚಾರ್ಯ

ಯಾವ ಶಾಸಕರು ಬಹಿರಂಗವಾಗಿ ಯಡಿಯೂರಪ್ಪ ಪರವಾಗಿ ಗಟ್ಟಿಯಾಗಿ ನಿಲ್ಲದೇ ಇದ್ದರೂ ರೇಣುಕಾಚಾರ್ಯ ಮಾತ್ರ ಪ್ರತಿ ಬಾರಿಯೂ ಸಮರ್ಥನೆ ಮಾಡುತ್ತಿದ್ದರು. ಇದೀಗ ರಾಜೀನಾಮೆ ಸಂದರ್ಭದಲ್ಲಿ ದುಃಖದಲ್ಲಿ ಇದ್ದಾರೆ.

Vijaya Karnataka Web 26 Jul 2021, 5:13 pm
ಬೆಂಗಳೂರು: ನನ್ನ ರಾಜಕೀಯ ಜೀವನದಲ್ಲಿ ಅತ್ಯಂತ ದುಖಃದ ದಿನ ಎಂದು ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.
Vijaya Karnataka Web ರೇಣುಕಾಚಾರ್ಯ
ರೇಣುಕಾಚಾರ್ಯ


ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆಯಲ್ಲಿ ಫೇಸ್ ಬುಕ್ ಪೋಸ್ಟ್ ಹಾಕಿದ ರೇಣುಕಾಚಾರ್ಯ ತಮ್ಮ ದುಖಃವನ್ನು ತೋಡಿಕೊಂಡಿದ್ದಾರೆ.

ಎಂಪಿ ರೇಣುಕಾಚಾರ್ಯ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದವರು. ನಾಯಕತ್ವ ಬದಲಾವಣೆ ವಿಚಾರ ಬಂದಾಗ ಯಡಿಯೂರಪ್ಪ ಅವರ ಪರವಾಗಿ ಗಟ್ಟಿಯಾಗಿ ನಿಂತವರು. ಬಿಎಸ್ವೈ ವಿರುದ್ಧ ಹೇಳಿಕೆ ಕೊಟ್ಟವರ ವಿರುದ್ಧ ಬಹಿರಂಗವಾಗಿ ಗುಡುಗಿದ್ದರು.

ಯಾವ ಶಾಸಕರು ಬಹಿರಂಗವಾಗಿ ಯಡಿಯೂರಪ್ಪ ಅವರ ಪರವಾಗಿ ಗಟ್ಟಿಯಾಗಿ ನಿಲ್ಲದೇ ಇದ್ದರೂ ರೇಣುಕಾಚಾರ್ಯ ಮಾತ್ರ ಪ್ರತಿ ಬಾರಿಯೂ ಸಮರ್ಥನೆ ಮಾಡುತ್ತಿದ್ದರು. ಇದೀಗ ರಾಜೀನಾಮೆ ಸಂದರ್ಭದಲ್ಲಿ ಸಾಕಷ್ಟು ದುಃಖದಲ್ಲಿ ಇದ್ದಾರೆ.

ಈ ಹಿನ್ನೆಲೆಯಲ್ಲಿಯೇ ಎಂಪಿ ರೇಣುಕಾಚಾರ್ಯ ಅವರು ಫೇಸ್ ಬುಕ್ ಪೋಸ್ಟ್ ಮೂಲಕ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ