ಆ್ಯಪ್ನಗರ

ಈ ಬಾರಿ ಯಕ್ಷಗಾನ ಕಲಾವಿದರು ಕೊರೊನಾ ಟೆಸ್ಟ್‌ ಮಾಡೋದು ಕಡ್ಡಾಯ: ಕೋಟ ಶ್ರೀನಿವಾಸ ಪೂಜಾರಿ

ಮೇಳ ಹೊರಟ ನಂತರವೂ ವಾರಕ್ಕೊಮ್ಮೆ ಉಚಿತ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಲಾಗುವುದು. ಮೇಳದ ತಿರುಗಾಟಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು.

Vijaya Karnataka Web 19 Oct 2020, 10:57 am
ಮಂಗಳೂರು: ಕರಾವಳಿ ಕರ್ನಾಟಕ ಪ್ರಸಿದ್ಧ ಕಲೆ ಯಕ್ಷಗಾನ ಕೊರೊನಾ ಕಾರಣದಿಂದ ಅರ್ಧದಲ್ಲೇ ನಿಂತಿತ್ತು. ಆದರೆ ಈ ಬಾರಿಯ ತಿರುಗಾಟದಲ್ಲಿ ಮೇಳ ಹೊರಡುವ ಮುನ್ನ ಯಕ್ಷಗಾನ ಕಲಾವಿದರಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಮಾಡಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
Vijaya Karnataka Web yakshagana


ಬಂಟ್ವಾಳ ಸರ್ಕಾರಿ ಆಸ್ಪತ್ರೆ ಖಾಸಗಿ ಆಸ್ಪತ್ರೆಗಳನ್ನು ಮೀರಿಸುವಂತೆ ಸುಸಜ್ಜಿತವಾಗಿದೆ : ಶಾಸಕ ರಾಜೇಶ್ ನಾಯ್ಕ್

ಈ ಕುರಿತು ಕುಂದಾಪುರದಲ್ಲಿ ಮಾತನಾಡಿದ ಅವರು, ಮೇಳ ಹೊರಟ ನಂತರವೂ ವಾರಕ್ಕೊಮ್ಮೆ ಉಚಿತ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಲಾಗುವುದು. ಮೇಳದ ತಿರುಗಾಟಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು. ಅಲ್ಲದೇ ಕೊರೊನಾ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ಮೇಳ ತಿರುಗಾಟ ಹೊರಡುವ ಕುರಿತು ಸಮಾಲೋಚನೆ ನಡೆದಿದೆ. ಅದಕ್ಕೆ ಬೇಕಾದ ಎಸ್‌ಓಪಿಗಳನ್ನು ಸಿದ್ಧಪಡಿಸಲಾಗುವುದು ಎಂದರು.

ಭಾನುವಾರ ಸಂತೆ ವ್ಯಾಪಾರ ನಡೆಸಲು ಅನುಮತಿ ನೀಡಲು ಆಗ್ರಹಿಸಿ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು, ಉಡುಪಿ, ಉತ್ತರಕನ್ನಡ ಜಿಲ್ಲೆಯಲ್ಲಿರುವ ಸುಮಾರು 2 ಸಾವಿರಕ್ಕೂ ಅಧಿಕ ಹಿಮ್ಮೇಳ, ಮುಮ್ಮೇಳ ಕಲಾವಿದರು ಹಾಗೂ ಮೇಳದ ಸಿಬ್ಬಂದಿಯನ್ನು ಗಮನದಲ್ಲಿಟ್ಟುಕೊಂಡು ಕೆಲವು ಮೇಳಗಳು ಈ ಬಾರಿ ತಿರುಗಾಟ ನಡೆಸುವುದು ಕಷ್ಟ ಎಂಬ ಹಿನ್ನೆಲೆಯಲ್ಲಿ ಧಾರ್ಮಿಕ ಕ್ಷೇತ್ರಗಳ ಮೂಲಕ ಮೇಳಗಳನ್ನು ಹೊರಡಿಸಬೇಕು ಎಂದು ಮನವಿ ಬಂದಿದೆ. ಎಲ್ಲೆಲ್ಲಿ ಹೊಸ ಮೇಳಗಳನ್ನು ಪ್ರಾರಂಭಿಸಬೇಕು ಎನ್ನುವುದನ್ನು ಪರಿಶೀಲಿಸಲಾಗುವುದು ಎಂದರು.

ಉಡುಪಿ ಭೂ ಅಭಿವೃದ್ಧಿ ಬ್ಯಾಂಕ್‌ನಲ್ಲಿ ರೈತರ ಹೆಸರಲ್ಲಿ ವಂಚನೆ; ಕಿಶನ್‌ ಹೆಗ್ಡೆ ಕೊಳ್ಕೆಬೈಲು ವಿರುದ್ಧ ಕೇಸ್‌ ದಾಖಲು

ಅಲ್ಲದೇ ಕಟ್ಟ ಕಡೆಯ ಕಲಾವಿದ ಕೂಡಾ ನಿರುದ್ಯೋಗಿಯಾಗಬಾರದು ಎಂದ ಕೋಟ, ಎಲ್ಲರಿಗೂ ಅವಕಾಶ ದೊರೆಯುವಂತೆ ವ್ಯವಸ್ಥೆ ಮಾಡಲಾಗುವುದು. ಯಾವುದೇ ಕಲಾವಿದ ಕಲಾಪ್ರದರ್ಶನದಿಂದ ವಂಚಿತನಾಗಬಾರದು ಎಂಬಂತೆ ವ್ಯವಸ್ಥೆ ಮಾಡಲಾಗುವುದು. ಹರಕೆ ಬಯಲಾಟಗಳಲ್ಲದೇ ಇಡೀ ರಾತ್ರಿ ನಡೆಯುವ ಯಕ್ಷಗಾನಕ್ಕೆ ಬೇರೆ ಸ್ವರೂಪ ನೀಡಬೇಕೆ ಎಂಬ ಕುರಿತು ಚರ್ಚೆ ನಡೆಯಲಿದೆ. ಚರ್ಚೆಯ ಬಳಿಕ ಕಲಾವಿದರು ಹಾಗೂ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ಮಾರ್ಗಸೂಚಿ ಸಿದ್ಧಪಡಿಸಲಾಗುವುದು. ಕಲಾವಿದರಿಗೆ ಪಿಂಚಣಿ ನೀಡಬೇಕು ಎಂಬ ಪ್ರಸ್ತಾವನೆ ಕೂಡಾ ಇಲಾಖೆಯಲ್ಲಿದ್ದು ಕೊರೊನಾ ಕಾರಣದಿಂದ ವಿಳಂಬವಾಗಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ