ಆ್ಯಪ್ನಗರ

ವಾರಾಂತ್ಯಕ್ಕೆ ಸಿದ್ಧಗಂಗಾ ಶ್ರೀ ಮಠಕ್ಕೆ ವಾಪಸ್‌

ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ಧಗಂಗಾ ಶ್ರೀ ಡಾ.ಶಿವಕುಮಾರಸ್ವಾಮೀಜಿ ಅವರು ವಾರದ ಕೊನೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ಮಠಕ್ಕೆ ಮರಳÜಲಿದ್ದಾರೆ.

Vijaya Karnataka 17 Dec 2018, 5:00 am
ತುಮಕೂರು: ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ಧಗಂಗಾ ಶ್ರೀ ಡಾ.ಶಿವಕುಮಾರಸ್ವಾಮೀಜಿ ಅವರು ವಾರದ ಕೊನೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ಮಠಕ್ಕೆ ಮರಳÜಲಿದ್ದಾರೆ.
Vijaya Karnataka Web this weekend siddaganga sri coming to mutt
ವಾರಾಂತ್ಯಕ್ಕೆ ಸಿದ್ಧಗಂಗಾ ಶ್ರೀ ಮಠಕ್ಕೆ ವಾಪಸ್‌


ಶ್ರೀಗಳ ಆರೋಗ್ಯ ಕುರಿತು ಭಾನುವಾರ ಚೆನ್ನೈನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆಪ್ತ ವೈದ್ಯ ಡಾ.ಪರಮೇಶ್‌ ಅವರು, ''ಶ್ರೀಗಳಿಗೆ ಶಸ್ತ್ರಚಿಕಿತ್ಸೆಯಿಂದ ಆಗಿರುವ ಗಾಯ ವಾಸಿಯಾಗುತ್ತಿದೆ. ಶ್ರೀಗಳು ಆರೋಗ್ಯವಾಗಿದ್ದು, ಕೊಂಚ ನ್ಯೂಟ್ರೀಷನ್‌ ಕೊರತೆ ಇದೆ. ಹೀಗಾಗಿ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ,'' ಎಂದು ತಿಳಿಸಿದ್ದಾರೆ.

''ಶ್ರೀಗಳಿಗೆ ಫಿಸಿಯೋಥೆರಪಿ ಅಗತ್ಯವಿದ್ದು, ಇದೀಗ ನಡೆದಾಡಿಸಲಾಗುತ್ತಿದೆ. ಶ್ರೀಗಳ ಆರೋಗ್ಯದಲ್ಲಿ ಬಹಳಷ್ಟು ಚೇತರಿಕೆ ಕಂಡಿದೆ. ಎಂದಿನಂತೆ ಪೂಜಾ ವಿಧಿಗಳನ್ನು ನೆರವೇರಿಸುತ್ತಿದ್ದಾರೆ,'' ಎಂದು ಮಾಹಿತಿ ನೀಡಿದರು.

ರಾಮಲಿಂಗಾ ರೆಡ್ಡಿ ಭೇಟಿ: ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರು ಭಾನುವಾರ ಶ್ರೀಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಶ್ರೀಗಳು ಚೆನ್ನಾಗಿದ್ದಾರೆ. ನನ್ನನ್ನು ಗುರುತು ಹಿಡಿದು ಮಾತನಾಡಿಸಿದರು. ಯಾವಾಗ ಬಂದಿದ್ದು, ಪ್ರಸಾದ ಸ್ವೀಕರಿಸಿದಿರಾ ಎಂದು ವಿಚಾರಿಸಿದರು,'' ಎಂದು ತಿಳಿಸಿದರು.

ವಿದ್ಯಾರ್ಥಿಗಳಿಂದ ಪ್ರಾರ್ಥನೆ: ಶ್ರೀಗಳು ಬೇಗ ಗುಣಮುಖರಾಗಿ ಮಠಕ್ಕೆ ಬರಲಿ ಎಂದು ಸಿದ್ಧಗಂಗಾ ಮಠದ ವಿದ್ಯಾರ್ಥಿಗಳು ಮಠದ ಆವರಣದಲ್ಲಿ ನಡೆಯುವ ಸಾಮೂಹಿಕ ಪ್ರಾರ್ಥನೆಯಲ್ಲಿ ನಿತ್ಯ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ