ಆ್ಯಪ್ನಗರ

ಕೇಂದ್ರ ಸರಕಾರಿ ಕಚೇರಿಗಳಲ್ಲಿ ತ್ರಿಭಾಷಾ ಸೂತ್ರ ಕಡ್ಡಾಯ

ರಾಜ್ಯದಲ್ಲಿರುವ ಕೇಂದ್ರ ಸರಕಾರದ ಎಲ್ಲಾ ಸರಕಾರಿ ಕಚೇರಿಗಳಲ್ಲಿ ತ್ರಿಭಾಷಾ ಸೂತ್ರ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್‌.ಜಿ. ಸಿದ್ದರಾಮಯ್ಯ ಪ್ರತಿಪಾದಿಸಿದರು.

Vijaya Karnataka 22 Dec 2018, 5:00 am
ಬೆಂಗಳೂರು: ರಾಜ್ಯದಲ್ಲಿರುವ ಕೇಂದ್ರ ಸರಕಾರದ ಎಲ್ಲಾ ಸರಕಾರಿ ಕಚೇರಿಗಳಲ್ಲಿ ತ್ರಿಭಾಷಾ ಸೂತ್ರ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಪ್ರತಿಪಾದಿಸಿದರು.
Vijaya Karnataka Web Siddaramaiah S G


ಭಾರತೀಯ ಸಾಂಖ್ಯಿಕ ಸಂಸ್ಥೆಯಲ್ಲಿ ಶುಕ್ರವಾರ ಕನ್ನಡ ಅನುಷ್ಠಾನ ಕುರಿತು ಪರಿಶೀಲನೆ ನಡೆಸಿದ ಅವರು ''ಕೇಂದ್ರೀಯ ಉದ್ದಿಮೆಗಳು ಹಾಗೂ ಪ್ರಾದೇಶಿಕ ಕಚೇರಿಗಳಲ್ಲಿ ಭಾಷಾ ನೀತಿ ಅನ್ವಯ ತ್ರಿಭಾಷಾ ಸೂತ್ರ ಪಾಲನೆ ಹಾಗೂ ಸ್ಥಳೀಯ ಭಾಷೆಗೆ ಪ್ರಾತಿನಿಧ್ಯ ನೀಡಬೇಕಿದೆ. ಇದನ್ನು ಕೇಂದ್ರ ಗೃಹ ಸಚಿವಾಲಯ 1995ರ ಆದೇಶದಲ್ಲಿ ಸ್ಪಷ್ಟಪಡಿಸಿರುವುದರಿಂದ ಕೆಲ ಕಚೇರಿಗಳು ಕೇವಲ ಹಿಂದಿ ಹಾಗೂ ಇಂಗ್ಲಿಷ್‌ ಭಾಷೆಗೆ ಮಾತ್ರ ಮಣೆ ಹಾಕಿರುವುದು ಸರಿಯಲ್ಲ,'' ಎಂದು ಆಕ್ಷೇಪಿಸಿದರು.

''ಸಂವಿಧಾನವು ಮಾನ್ಯ ಮಾಡಿರುವಂತೆ ಕನ್ನಡ ಸೇರಿ 22 ಭಾಷೆಗಳನ್ನು ರಾಷ್ಟ್ರ ಭಾಷೆಗಳೆಂದು ಪರಿಗಣಿಸಬೇಕು. ಆದರೆ, ಹಿಂದಿ ವ್ಯಾಮೋಹದಿಂದ ಆ ಭಾಷೆಯೊಂದನ್ನು ಮಾತ್ರ ಬಳಸುವುದು ನಿಯಮ ಉಲ್ಲಂಘನೆಯಾಗುತ್ತದೆ. ಜತೆಗೆ ಗೂಗಲ್‌ ಮೂಲಕ ಕನ್ನಡಕ್ಕೆ ಭಾಷಾಂತರ ಮಾಡುತ್ತಿರುವುದು ವಾಕ್ಯಗಳ ರಚನೆಯು ಅಪಾರ್ಥ ಕಲ್ಪಿಸುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಶುದ್ಧ ಕನ್ನಡದಲ್ಲಿಯೇ ವ್ಯವಹಾರ ಮಾಡಲು ಸಿಬ್ಬಂದಿಗಳಿಗೆ ಸೂಚಿಸಬೇಕಿದೆ,'' ಎಂದು ಇಲಾಖೆಯ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

''ಸಂಸ್ಥೆಯ ಸೂಚನಾ ಫಲಕಗಳಲ್ಲಿ, ಸ್ಥಳೀಯ ಜಾಹೀರಾತು, ಪತ್ರಗಳ ತಲೆಬರಹ, ಮೊಹರುಗಳಲ್ಲಿ ಕನ್ನಡವನ್ನು ಬಳಕೆ ಮಾಡಬೇಕು. ಇದನ್ನು ಜಾರಿಗೆ ತರಲು ಸ್ಥಳೀಯ ಮುಖ್ಯಸ್ಥರಿಗೆ ಅಧಿಕಾರ ಇರುವುದರಿಂದ ತ್ರಿಭಾಷಾ ಸೂತ್ರದಡಿ ಕನ್ನಡಕ್ಕೆ ಸಿಗಬೇಕಾದ ಮಾನ್ಯತೆ ದೊರಕಿಸಿಡಲು ತಕ್ಷಣವೇ ಕ್ರಮ ಕೈಗೊಳ್ಳಬೇಕು,'' ಎಂದು ಸಂಸ್ಥೆಯ ಮುಖ್ಯಸ್ಥರಿಗೆ ಸಿದ್ದರಾಮಯ್ಯ ಸೂಚಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ