ಬೆಂಗಳೂರು: ಭಾರತ ಐಕ್ಯತಾ ಯಾತ್ರೆ ಸಿದ್ಧತೆ ಹಂತದಲ್ಲೇ ಕಾಂಗ್ರೆಸ್ನ ಬಣ ರಾಜಕೀಯ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನೀಡಿದ್ದ ಎಚ್ಚರಿಕೆಗೆ ಪಕ್ಷದ ಹಿರಿಯ ಮುಖಂಡರು ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ನಡೆದ 'ಸಿದ್ದರಾಮಯ್ಯ ಅಮೃತ ಮಹೋತ್ಸವ' ವೇದಿಕೆಯಲ್ಲಿ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಪರಸ್ಪರ ಆಲಿಂಗನ ಮಾಡಿಕೊಳ್ಳುವಂತೆ ರಾಹುಲ್ ಗಾಂಧಿ ನೋಡಿಕೊಂಡಿದ್ದರು. ಅದರಿಂದ ಕರ್ನಾಟಕ ಕಾಂಗ್ರೆಸ್ನ ಎಲ್ಲ ಬಿಕ್ಕಟ್ಟಿಗೆ ಪರಿಹಾರವಾಗಲಿದೆ. ರಾಹುಲ್ ಸೂಚನೆಯಂತೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಪಕ್ಷವನ್ನು ಮುನ್ನಡೆಸಿಕೊಂಡು ಹೋಗಲಿದ್ದಾರೆ ಎಂದು ಭಾವಿಸಲಾಗಿತ್ತು.
ಆದರೆ, ಐಕ್ಯತಾ ಯಾತ್ರೆಗೆ ತಯಾರಿ ಕೈಗೊಳ್ಳುತ್ತಿರುವಾಗ ಡಿ. ಕೆ. ಶಿವಕುಮಾರ್ ನೀಡಿದ ಹೇಳಿಕೆಯೊಂದು ಸಂಚಲನ ಮೂಡಿಸಿದೆ. ಮಾಜಿ ಸಚಿವರು, ಹಾಲಿ ಶಾಸಕರಲ್ಲಿ ಒಂದಷ್ಟು ಮಂದಿ ಈ ಕಾರ್ಯಕ್ರಮಕ್ಕೆ ಸಹಕರಿಸುತ್ತಿಲ್ಲ ಎಂದಿರುವ ಶಿವಕುಮಾರ್, ಈ ಯಾತ್ರೆಯಲ್ಲಿ ಸರಿಯಾಗಿ ತೊಡಗಿಸಿಕೊಳ್ಳದವರಿಗೆ ಈ ಬಾರಿ ಟಿಕೆಟ್ ಇಲ್ಲ ಎಂದು ಎಚ್ಚರಿಸಿದ್ದಾರೆ.
ಸಿದ್ದರಾಮಯ್ಯ ಬೆಂಬಲಿಗರಿಗೇ ಶಿವಕುಮಾರ್ ಈ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಸಿದ್ದರಾಮೋತ್ಸವದ ಬಳಿಕ ಭಾರಿ ಉತ್ಸಾಹದಲ್ಲಿರುವ ಅವರ ಬೆಂಬಲಿಗರು, ಶಿವಕುಮಾರ್ ಸೂಚನೆಗೆ ಅಷ್ಟಾಗಿ ಕಿವಿಗೊಡುತ್ತಿಲ್ಲ. ಹಾಗೆಯೇ ಕರ್ನಾಟಕದಲ್ಲಿ ಐಕ್ಯತಾ ಯಾತ್ರೆಯನ್ನು ತಾವೇ ಮುಂದೆ ನಿಂತು ಆಯೋಜಿಸುವುದು ಶಿವಕುಮಾರ್ ಉದ್ದೇಶ. ಈ ಕಾರ್ಯಸೂಚಿ ಇರುವುದರಿಂದ ಕೆಲ ಸಭೆಗಳಿಗೆ ಸಿದ್ದರಾಮಯ್ಯ ಅವರನ್ನು ಕರೆದಿಲ್ಲ. ಹಾಗಂತ ಸಿದ್ದರಾಮಯ್ಯ ಕೂಡ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು.
ಸಮಿತಿಯಲ್ಲಿ ಪ್ರಮುಖರು
ಇದರ ನಡುವೆಯೇ ಐಕ್ಯತಾ ಯಾತ್ರೆ ಸಂಬಂಧ ಸಮಿತಿಗಳನ್ನು ಕೆಪಿಸಿಸಿ ಅಧ್ಯಕ್ಷರು ರಚಿಸಿದ್ದಾರೆ. ಅದರಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ್, ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಆರ್. ಧ್ರುವನಾರಾಯಣ, ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್, ಈಶ್ವರ ಖಂಡ್ರೆ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಮಾಜಿ ಸಚಿವರಾದ ಕೆ. ಜೆ. ಜಾರ್ಜ್, ಕೆ. ಆರ್. ರಮೇಶ್ ಕುಮಾರ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಮುಂತಾದವರನ್ನು ನೇಮಿಸಲಾಗಿದೆ. ಇದರ ಹೊರತಾಗಿಯೂ ಕೆಪಿಸಿಸಿ ಅಧ್ಯಕ್ಷರ ಹೇಳಿಕೆ ಕಾಂಗ್ರೆಸ್ನ ಆಂತರಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಇದನ್ನು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಬಣದ ನಡುವಿನ ಸಂಘರ್ಷದ ಮುಂದುವರಿದ ಭಾಗವೆಂದೇ ಹೇಳಲಾಗುತ್ತಿದೆ.
ಟಿಕೆಟ್ ಹೇಳಿಕೆಗೆ ಫೈಟ್
ಇದಕ್ಕೆ ಪುಷ್ಟಿ ನೀಡುವಂತೆ ಹಿರಿಯ ನಾಯಕ ಆರ್. ವಿ. ದೇಶಪಾಂಡೆ ಸೇರಿದಂತೆ ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ನಲ್ಲಿ ಯಾವುದೇ ಒಬ್ಬರು ನಾಯಕರಿಂದ ಟಿಕೆಟ್ ಹಂಚಿಕೆ ಪ್ರಕ್ರಿಯೆ ನಡೆಯುವುದಿಲ್ಲ ಎಂದು ಇವರು ಹೇಳುತ್ತಿರುವುದು ಮಹತ್ವ ಪಡೆದುಕೊಂಡಿದೆ.
'ಕೆಪಿಸಿಸಿ ಅಧ್ಯಕ್ಷರು ಮತ್ತು ಸಿಎಲ್ಪಿ ನಾಯಕರೊಂದಿಗೆ ಚರ್ಚಿಸುವ ಹೈಕಮಾಂಡ್ ಟಿಕೆಟ್ ಹಂಚಿಕೆ ಅಂತಿಮಗೊಳಿಸುತ್ತದೆ. ಇಲ್ಲಿ ಯಾರೋ ಒಬ್ಬರು ಟಿಕೆಟ್ ನಿರ್ಧರಿಸುವುದಿಲ್ಲ. ಒಗ್ಗಟ್ಟಿನಿಂದ ಚುನಾವಣೆಗೆ ಹೋಗಬೇಕು. ನಮ್ಮ ಸರಕಾರ ಬರಬೇಕು ಎನ್ನುವುದು ನನ್ನ ಆಶಯ' ಎಂದು ಮಾಜಿ ಸಚಿವ ಆರ್. ವಿ. ದೇಶಪಾಂಡೆ ಹೇಳಿದ್ದಾರೆ.
'ಟಿಕೆಟ್ ವಿಚಾರದಲ್ಲಿ ಒಬ್ಬರು ತೀರ್ಮಾನಿಸಲು ಸಾಧ್ಯವಿಲ್ಲ. ಅದಕ್ಕಾಗಿ ಚುನಾವಣಾ ಸಮಿತಿ, ಪರಿಶೀಲನಾ ಸಮಿತಿಯಿರುತ್ತವೆ. ಎಲ್ಲರ ಅಭಿಪ್ರಾಯ ಪಡೆಯಲಾಗುತ್ತದೆ. ಸ್ಥಳೀಯ ಮಟ್ಟದಲ್ಲೂ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ' ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
'ಕಾಂಗ್ರೆಸ್ನಲ್ಲಿ ಟಿಕೆಟ್ ಹಂಚಿಕೆ ಗೌಪ್ಯವಾಗಿ ನಡೆಯುವುದಿಲ್ಲ. ಯಾರಿಗೆ ಟಿಕೆಟ್ ಎಂಬ ಬಗ್ಗೆ ಚುನಾವಣಾ ಸಮಿತಿಯಲ್ಲಿ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಹೈಕಮಾಂಡ್ಗೆ ಶಿಫಾರಸು ಮಾಡಲಾಗುತ್ತದೆ. ಸಿಎಲ್ಪಿ ನಾಯಕರು, ಕೆಪಿಸಿಸಿ ಅಧ್ಯಕ್ಷರು, ಪ್ರಮುಖರೊಂದಿಗೆ ಚರ್ಚಿಸಿದ ಬಳಿಕವೇ ಹೈಕಮಾಂಡ್ ಟಿಕೆಟ್ ಘೋಷಿಸುತ್ತದೆ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಆದರೆ, ಐಕ್ಯತಾ ಯಾತ್ರೆಗೆ ತಯಾರಿ ಕೈಗೊಳ್ಳುತ್ತಿರುವಾಗ ಡಿ. ಕೆ. ಶಿವಕುಮಾರ್ ನೀಡಿದ ಹೇಳಿಕೆಯೊಂದು ಸಂಚಲನ ಮೂಡಿಸಿದೆ. ಮಾಜಿ ಸಚಿವರು, ಹಾಲಿ ಶಾಸಕರಲ್ಲಿ ಒಂದಷ್ಟು ಮಂದಿ ಈ ಕಾರ್ಯಕ್ರಮಕ್ಕೆ ಸಹಕರಿಸುತ್ತಿಲ್ಲ ಎಂದಿರುವ ಶಿವಕುಮಾರ್, ಈ ಯಾತ್ರೆಯಲ್ಲಿ ಸರಿಯಾಗಿ ತೊಡಗಿಸಿಕೊಳ್ಳದವರಿಗೆ ಈ ಬಾರಿ ಟಿಕೆಟ್ ಇಲ್ಲ ಎಂದು ಎಚ್ಚರಿಸಿದ್ದಾರೆ.
ಸಿದ್ದರಾಮಯ್ಯ ಬೆಂಬಲಿಗರಿಗೇ ಶಿವಕುಮಾರ್ ಈ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಸಿದ್ದರಾಮೋತ್ಸವದ ಬಳಿಕ ಭಾರಿ ಉತ್ಸಾಹದಲ್ಲಿರುವ ಅವರ ಬೆಂಬಲಿಗರು, ಶಿವಕುಮಾರ್ ಸೂಚನೆಗೆ ಅಷ್ಟಾಗಿ ಕಿವಿಗೊಡುತ್ತಿಲ್ಲ. ಹಾಗೆಯೇ ಕರ್ನಾಟಕದಲ್ಲಿ ಐಕ್ಯತಾ ಯಾತ್ರೆಯನ್ನು ತಾವೇ ಮುಂದೆ ನಿಂತು ಆಯೋಜಿಸುವುದು ಶಿವಕುಮಾರ್ ಉದ್ದೇಶ. ಈ ಕಾರ್ಯಸೂಚಿ ಇರುವುದರಿಂದ ಕೆಲ ಸಭೆಗಳಿಗೆ ಸಿದ್ದರಾಮಯ್ಯ ಅವರನ್ನು ಕರೆದಿಲ್ಲ. ಹಾಗಂತ ಸಿದ್ದರಾಮಯ್ಯ ಕೂಡ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು.
ಸಮಿತಿಯಲ್ಲಿ ಪ್ರಮುಖರು
ಇದರ ನಡುವೆಯೇ ಐಕ್ಯತಾ ಯಾತ್ರೆ ಸಂಬಂಧ ಸಮಿತಿಗಳನ್ನು ಕೆಪಿಸಿಸಿ ಅಧ್ಯಕ್ಷರು ರಚಿಸಿದ್ದಾರೆ. ಅದರಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ್, ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಆರ್. ಧ್ರುವನಾರಾಯಣ, ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್, ಈಶ್ವರ ಖಂಡ್ರೆ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಮಾಜಿ ಸಚಿವರಾದ ಕೆ. ಜೆ. ಜಾರ್ಜ್, ಕೆ. ಆರ್. ರಮೇಶ್ ಕುಮಾರ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಮುಂತಾದವರನ್ನು ನೇಮಿಸಲಾಗಿದೆ. ಇದರ ಹೊರತಾಗಿಯೂ ಕೆಪಿಸಿಸಿ ಅಧ್ಯಕ್ಷರ ಹೇಳಿಕೆ ಕಾಂಗ್ರೆಸ್ನ ಆಂತರಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಇದನ್ನು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಬಣದ ನಡುವಿನ ಸಂಘರ್ಷದ ಮುಂದುವರಿದ ಭಾಗವೆಂದೇ ಹೇಳಲಾಗುತ್ತಿದೆ.
ಟಿಕೆಟ್ ಹೇಳಿಕೆಗೆ ಫೈಟ್
ಇದಕ್ಕೆ ಪುಷ್ಟಿ ನೀಡುವಂತೆ ಹಿರಿಯ ನಾಯಕ ಆರ್. ವಿ. ದೇಶಪಾಂಡೆ ಸೇರಿದಂತೆ ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ನಲ್ಲಿ ಯಾವುದೇ ಒಬ್ಬರು ನಾಯಕರಿಂದ ಟಿಕೆಟ್ ಹಂಚಿಕೆ ಪ್ರಕ್ರಿಯೆ ನಡೆಯುವುದಿಲ್ಲ ಎಂದು ಇವರು ಹೇಳುತ್ತಿರುವುದು ಮಹತ್ವ ಪಡೆದುಕೊಂಡಿದೆ.
'ಕೆಪಿಸಿಸಿ ಅಧ್ಯಕ್ಷರು ಮತ್ತು ಸಿಎಲ್ಪಿ ನಾಯಕರೊಂದಿಗೆ ಚರ್ಚಿಸುವ ಹೈಕಮಾಂಡ್ ಟಿಕೆಟ್ ಹಂಚಿಕೆ ಅಂತಿಮಗೊಳಿಸುತ್ತದೆ. ಇಲ್ಲಿ ಯಾರೋ ಒಬ್ಬರು ಟಿಕೆಟ್ ನಿರ್ಧರಿಸುವುದಿಲ್ಲ. ಒಗ್ಗಟ್ಟಿನಿಂದ ಚುನಾವಣೆಗೆ ಹೋಗಬೇಕು. ನಮ್ಮ ಸರಕಾರ ಬರಬೇಕು ಎನ್ನುವುದು ನನ್ನ ಆಶಯ' ಎಂದು ಮಾಜಿ ಸಚಿವ ಆರ್. ವಿ. ದೇಶಪಾಂಡೆ ಹೇಳಿದ್ದಾರೆ.
'ಟಿಕೆಟ್ ವಿಚಾರದಲ್ಲಿ ಒಬ್ಬರು ತೀರ್ಮಾನಿಸಲು ಸಾಧ್ಯವಿಲ್ಲ. ಅದಕ್ಕಾಗಿ ಚುನಾವಣಾ ಸಮಿತಿ, ಪರಿಶೀಲನಾ ಸಮಿತಿಯಿರುತ್ತವೆ. ಎಲ್ಲರ ಅಭಿಪ್ರಾಯ ಪಡೆಯಲಾಗುತ್ತದೆ. ಸ್ಥಳೀಯ ಮಟ್ಟದಲ್ಲೂ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ' ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
'ಕಾಂಗ್ರೆಸ್ನಲ್ಲಿ ಟಿಕೆಟ್ ಹಂಚಿಕೆ ಗೌಪ್ಯವಾಗಿ ನಡೆಯುವುದಿಲ್ಲ. ಯಾರಿಗೆ ಟಿಕೆಟ್ ಎಂಬ ಬಗ್ಗೆ ಚುನಾವಣಾ ಸಮಿತಿಯಲ್ಲಿ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಹೈಕಮಾಂಡ್ಗೆ ಶಿಫಾರಸು ಮಾಡಲಾಗುತ್ತದೆ. ಸಿಎಲ್ಪಿ ನಾಯಕರು, ಕೆಪಿಸಿಸಿ ಅಧ್ಯಕ್ಷರು, ಪ್ರಮುಖರೊಂದಿಗೆ ಚರ್ಚಿಸಿದ ಬಳಿಕವೇ ಹೈಕಮಾಂಡ್ ಟಿಕೆಟ್ ಘೋಷಿಸುತ್ತದೆ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದ್ದಾರೆ.