ಆ್ಯಪ್ನಗರ

ಕೋರ್‌ ಕಮಿಟಿ ಸಭೆಯಲ್ಲಿ ಅನರ್ಹರಿಗೆ ಟಿಕೆಟ್‌ ತೀರ್ಮಾನ: ಯಡಿಯೂರಪ್ಪ

“ಇವತ್ತು ಕೋರ್ ಕಮಿಟಿ ಸಭೆ ಇದೆ. ಸಭೆಯಲ್ಲಿ ಟಿಕೆಟ್ ಯಾರಿಗೆ ಕೊಡಬೇಕು ಅಂತ ಚರ್ಚೆ ಮಾಡ್ತೇವೆ. ಈ ಬಗ್ಗೆ ರಾಷ್ಟ್ರೀಯ ನಾಯಕರ ಜೊತೆಗೂ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ,” - ಬಿಎಸ್‌ ಯಡಿಯೂರಪ್ಪ.

Vijaya Karnataka Web 13 Nov 2019, 2:23 pm

ಬೆಂಗಳೂರು: ಬುಧವಾರ ಸಂಜೆ ಬಿಜೆಪಿ ಕೋರ್‌ ಕಮಿಟಿ ಸಭೆ ನಡೆಯಲಿದ್ದು, ಇದರಲ್ಲಿ ಅನರ್ಹ ಶಾಸಕರಿಗೆ ಟಿಕೆಟ್‌ ನೀಡುವ ಬಗ್ಗೆ ತೀರ್ಮಾನ ಮಾಡುವುದಾಗಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ತಿಳಿಸಿದರು.
Vijaya Karnataka Web Karnataka Chief Minister B S Yediyurappa


ಅನರ್ಹ ಶಾಸಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂ ಕೋರ್ಟ್‌ ಅವಕಾಶ ನೀಡಿದ ನಂತರ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು “ಇವತ್ತು ಕೋರ್ ಕಮಿಟಿ ಸಭೆ ಇದೆ. ಸಭೆಯಲ್ಲಿ ಟಿಕೆಟ್ ಯಾರಿಗೆ ಕೊಡಬೇಕು ಅಂತ ಚರ್ಚೆ ಮಾಡ್ತೇವೆ. ಈ ಬಗ್ಗೆ ರಾಷ್ಟ್ರೀಯ ನಾಯಕರ ಜೊತೆಗೂ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ,” ಎಂದರು.

ಅನರ್ಹರಿಗೆ ಬಿ ಫಾರಂ ನೀಡುವುದು ದೊಡ್ಡವರಿಗೆ ಬಿಟ್ಟ ವಿಚಾರ: ಮಾಧುಸ್ವಾಮಿ

“ಇಂದು ಸಂಜೆ ಅನರ್ಹ ಶಾಸಕರು ವಾಪಸ್ ಬೆಂಗಳೂರಿಗೆ ಬರ್ತಾರೆ. ಅವರ ಜೊತೆಗೂ ನಾವು ಸಮಾಲೋಚನೆ ಮಾಡ್ತೇವೆ,” ಎಂಬುದಾಗಿ ಬಿಎಸ್‌ವೈ ಮಾಹಿತಿ ನೀಡಿದರು. ಸುಪ್ರೀಂಕೋರ್ಟ್ ಆದೇಶಕ್ಕೆ ಇಡೀ ದೇಶ ಕಾಯ್ತಿತ್ತು. ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ಸಿದ್ದರಾಮಯ್ಯ ಜತೆ ಸೇರಿ ಷಡ್ಯಂತ್ರ ಮಾಡಿದ್ರು ಎಂಬುದಾಗಿ ಅವರು ಇದೇ ಸಂದರ್ಭದಲ್ಲಿ ದೂರಿದರು.



ಇದೇ ವೇಳೆ ಯಡಿಯೂರಪ್ಪ ನಿವಾಸದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಬೊಮ್ಮಾಯಿ, “ಶಾಸಕರ ಸ್ಪರ್ಧೆಗೆ ಅವಕಾಶ ಸಿಕ್ಕಿದೆ. ಇದು ಶಾಸಕರಿಗೆ ದೊರೆತ ಜಯ. ಕಾಂಗ್ರೆಸ್ ಷಡ್ಯಂತ್ರ ವಿಫಲವಾಗಿದ್ದು, ಚುನಾವಣೆಗೆ ಬಿಜೆಪಿ ಸಿದ್ಧವಿದೆ,” ಎಂದು ಹೇಳಿದರಲ್ಲದೆ, ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದ್ದು ಉಳಿದ ಅವಧಿಗೆ ಯಡಿಯೂರಪ್ಪ ಸಿಎಂ‌ ಆಗಿರ್ತಾರೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ