ಆ್ಯಪ್ನಗರ

ಟಿಪ್ಪು ಜಯಂತಿ ಆಚರಣೆಗೆ ಸಿದ್ಧತೆ, ಇಂದು ಡಿಸಿಎಂ ಸಭೆ

ಟಿಪ್ಪು ಜಯಂತಿ ಆಚರಣೆಗೆ ದೋಸ್ತಿ ಸರಕಾರ ಸಿದ್ಧತೆಗಾಗಿ ಗೃಹ ಖಾತೆ ಹೊಂದಿರುವ ಡಿಸಿಎಂ ಜಿ ಪರಮೇಶ್ವರ್‌ ಅವರು ಸೋಮವಾರ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ...

Vijaya Karnataka 5 Nov 2018, 5:00 am
ಬೆಂಗಳೂರು: ಟಿಪ್ಪು ಜಯಂತಿ ಆಚರಣೆಗೆ ದೋಸ್ತಿ ಸರಕಾರ ಸಿದ್ಧತೆಗಾಗಿ ಗೃಹ ಖಾತೆ ಹೊಂದಿರುವ ಡಿಸಿಎಂ ಜಿ. ಪರಮೇಶ್ವರ್‌ ಅವರು ಸೋಮವಾರ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.
Vijaya Karnataka Web tippu


ಜಯಂತಿಗೆ ಪ್ರತಿಪಕ್ಷ ಬಿಜೆಪಿ, ಹಿಂದೂ ಸಂಘಟನೆಗಳೂ ಆಕ್ಷೇಪಿಸಿವೆ. ಈ ನಡುವೆಯೂ ಜಯಂತಿ ಆಚರಿಸುವುದು ಸಿದ್ಧವೆಂದು ಸರಕಾರ ಸ್ಪಷ್ಟಪಡಿಸಿದೆ.

ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಡಿಸಿಎಂ ಪರಮೇಶ್ವರ್‌, ''ಟಿಪ್ಪು ಜಯಂತಿ ವೇಳೆ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ಬಗ್ಗೆ ಉನ್ನತ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು,'' ಎಂದು ತಿಳಿಸಿದ್ದಾರೆ.

''ಬಿಜೆಪಿಯವರು ಕೋಮುವಾದಿಗಳು. ಇದೇ ಕಾರಣಕ್ಕೆ ಟಿಪ್ಪು ಜಯಂತಿ ವಿರೋಧಿಸುತ್ತಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸಿದ್ದರಿಂದ ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗುತ್ತಿದ್ದಾರೆ,'' ಎಂದು ಆರೋಪಿಸಿದ್ದಾರೆ.

ಆಹ್ವಾನ ಪತ್ರಿಕೆಯಲ್ಲಿ ಹೆಸರು ಮುದ್ರಿಸದಂತೆ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಮನವಿಗೆ ಪ್ರತಿಕ್ರಿಯಿಸಿ,''ಶಿಷ್ಟಾಚಾರ ರೀತ್ಯ ಆಮಂತ್ರಣ ಪತ್ರಿಕೆ ಮುದ್ರಿಸಲಾಗುತ್ತದೆ,'' ಎಂದು ಸ್ಪಷ್ಟ ಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ