ಆ್ಯಪ್ನಗರ

ಟಿಪ್ಪು ಪಠ್ಯ ವಿವಾದ: ತಿಂಗಳೊಳಗೆ ವರದಿ ನೀಡುವಂತೆ ಸಮಿತಿಗೆ ಸೂಚನೆ

ಟಿಪ್ಪುಇತಿಹಾಸವನ್ನು ಪಠ್ಯದಿಂದ ಕೈ ಬಿಡುವ ಕುರಿತಾಗಿ ಒಂದು ತಿಂಗಳೊಳಗೆ ವರದಿ ನೀಡುವಂತೆ ಸರಕಾರ ಪಠ್ಯಪುಸ್ತಕ ರಚನಾ ಸಮಿತಿಗೆ ಸೂಚನೆ ನೀಡಿದೆ. ಗುರುವಾರ ನಡೆದ ಸಭೆಯಲ್ಲಿ ಈ ಕರಿತಾಗಿ ಚರ್ಚೆ ನಡೆದಿದೆ.

Vijaya Karnataka Web 7 Nov 2019, 9:22 pm
ಬೆಂಗಳೂರು: ಟಿಪ್ಪು ಇತಿಹಾಸವನ್ನು ಪಠ್ಯದಿಂದ ಕೈ ಬಿಡುವ ಕುರಿತಾಗಿ ಒಂದು ತಿಂಗಳಲ್ಲಿ ವರದಿ ನೀಡುವಂತೆ ಪಠ್ಯ ಪುಸ್ತಕ ರಚನಾ ಸಮಿತಿಗೆ ರಾಜ್ಯ ಸರಕಾರ ಸೂಚಿಸಿದೆ. ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಸದಸ್ಯರೊಂದಿಗೆ ಗುರುವಾರ ಸಭೆ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಸೂಚನೆ ನೀಡಿದ್ದಾರೆ.
Vijaya Karnataka Web tipu sultan history text book controversy committee will submit report soon
ಟಿಪ್ಪು ಪಠ್ಯ ವಿವಾದ: ತಿಂಗಳೊಳಗೆ ವರದಿ ನೀಡುವಂತೆ ಸಮಿತಿಗೆ ಸೂಚನೆ


ಟಿಪ್ಪು ಜಯಂತಿ ರದ್ದು: ಸರಕಾರದ ನಿರ್ಧಾರಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

ಟಿಪ್ಪು ಸುಲ್ತಾನ್ ಜಯಂತಿ ರದ್ದು ಆದೇಶದ ಬಳಿಕ ಟಿಪ್ಪು ಇತಿಹಾಸವನ್ನು ಪಠ್ಯದಿಂದ ತೆಗೆದುಹಾಕಲು ಸರಕಾರ ಚಿಂತನೆ ನಡೆಸಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದರು. ಸರಕಾರದ ನಿಲುವು ಪರ ಹಾಗೂ ವಿರೋಧ ಚರ್ಚೆಗೆ ಗ್ರಾಸವಾಗಿತ್ತು. ಸಿಎಂ ನಿಲುವನ್ನು ಬಿಜೆಪಿ ಹಾಗೂ ಸಂಘಪರಿವಾರ ಸ್ವಾಗತಿಸಿದರೆ ಕಾಂಗ್ರೆಸ್, ಜೆಡಿಎಸ್ ಹಾಗೂ ಪ್ರಗತಿಪರರು ವಿರೋಧ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಗುರುವಾರ ಪಠ್ಯ ಪುಸ್ತಕ ರಚನಾ ಸಮಿತಿ ಸಭೆಯನ್ನು ಶಿಕ್ಷಣ ಸಚಿವರು ನಡೆಸಿದ್ದು ಸರಕಾರದ ನಿರ್ಧಾರದ ಸಾಧಕ ಬಾಧಕಗಳ ಕುರಿತಾಗಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.

ಇದರ ಬೆನ್ನಲ್ಲೇ ಟಿಪ್ಪು ಜಯಂತಿ ರದ್ದು ಪ್ರಶ್ನಿಸಿದ ಸಾರ್ವಜನಿಕ ಹಿತಾಸಕ್ತಿ ದೂರಿನ ವಿಚಾರಣೆಯನ್ನು ಕೈಗೆತ್ತಿಕೊಂಡ ಹೈ ಕೋರ್ಟ್ ಸರಕಾರದ ನಿರ್ಧಾರವನ್ನು ಮರುಪರಿಶೀಲನೆ ನಡೆಸುವಂತೆ ಸೂಚಿಸಿದೆ.

ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸಿರುವ ಸರಕಾರದ ನಿರ್ಧಾರಕ್ಕೆ ಈ ಹಂತದಲ್ಲಿ ತಡೆ ನೀಡಲು ಸಾಧ್ಯವಿಲ್ಲ ಎಂದಿರುವ ಹೈ ಕೋರ್ಟ್ ಟಿಪ್ಪು ಜಯಂತಿ ರದ್ದುಗೊಳಿಸಿರುವ ತನ್ನ ನಿರ್ಧಾರವನ್ನು ಮರು ಪರಿಶೀಲನೆ ನಡೆಸುವಂತೆ ಸರಕಾರಕ್ಕೆ ನಿರ್ದೇಶನ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ