ಆ್ಯಪ್ನಗರ

2 ವಿಮಾನಗಳಲ್ಲಿ ದೇವೇಗೌಡ-ಕುಮಾರಸ್ವಾಮಿ ಕುಟುಂಬದ ತಿರುಪತಿ ಯಾತ್ರೆ

ನಾಳೆ ಮಾಜಿ ಪ್ರಧಾನಿ ದೇವೇಗೌಡರು 87 ನೇ ವಸಂತಕ್ಕೆ ಕಾಲಿಡಲಿರುವ ಹಿನ್ನೆಲೆ ದೇವೇಗೌಡರ ಕುಟುಂಬ ಆಂಧ್ರ ಪ್ರದೇಶದ ತಿರುಪತಿಗೆ ಪ್ರಯಾಣ ಬೆಳೆಸಿದ್ದು, ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

Vijaya Karnataka Web 17 May 2019, 5:48 pm
ಬೆಂಗಳೂರು: ಸಿಎಂ ಕುಮಾರಸ್ವಾಮಿ ಹಾಗೂ ದೇವೇಗೌಡ ಸೇರಿದಂತೆ ಒಟ್ಟು 23 ಕುಟುಂಬ ಸದಸ್ಯರು ತಿರುಪತಿಗೆ ತೆರಳಿದ್ದಾರೆ. ಎಚ್ಎಎಲ್ ವಿಮಾನ ನಿಲ್ದಾಣದಿಂದ 2 ವಿಶೇಷ ವಿಮಾನಗಳಲ್ಲಿ ದೇವೇಗೌಡ ಕುಟುಂಬ ಪ್ರಯಾಣ ಬೆಳೆಸಿದ್ದಾರೆ.
Vijaya Karnataka Web devegowda kumaraswamy


ಸಿಎಂ ಕುಮಾರಸ್ವಾಮಿ, ದೇವೇಗೌಡರು, ಚೆನ್ನಮ್ಮ, ಅನಿತಾ ಕುಮಾರಸ್ವಾಮಿ, ಡಾ ರಮೇಶ್, ಸೌಮ್ಯ ರಮೇಶ್, ಎಚ್.ಡಿ.ರೇವಣ್ಣ ದಂಪತಿ, ಪುತ್ರಿಯರಾದ ಅನುಸೂಯ, ಶೈಲಜಾ, ಚನ್ನರಾಯಪಟ್ಟಣ ಶಾಸಕ ಸಿ.ಎನ್. ಬಾಲಕೃಷ್ಣ ಸೇರಿದಂತೆ ಒಟ್ಟು 23 ಮಂದಿ ತಿರುಪತಿಗೆ ಪ್ರಯಾಣ ಬೆಳೆಸಿದ್ದಾರೆ.

ಇನ್ನು, ದೇವೇಗೌಡರ ಕುಟುಂಬ ನಾಳೆ ಬೆಳಗ್ಗೆ 5 ಗಂಟೆಗೆ ತಿರುಪತಿ ತಿಮ್ಮಪ್ಪನಿಗೆ ಸುಪ್ರಭಾತ ಸೇವೆ ಸಲ್ಲಿಸಲಿದ್ದಾರೆ. ನಾಳೆ ಮಾಜಿ ಪ್ರಧಾನಿ ದೇವೇಗೌಡರ ಜನುಮದಿನ. ಅವರು 87 ನೇ ವಸಂತಕ್ಕೆ ಕಾಲಿಡಲಿರುವ ಹಿನ್ನೆಲೆ ದೇವೇಗೌಡರ ಕುಟುಂಬ ಆಂಧ್ರ ಪ್ರದೇಶದ ತಿರುಪತಿಗೆ ಪ್ರಯಾಣ ಬೆಳೆಸಿದ್ದು, ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲದೆ, ನಾಳೆ ಮಧ್ಯಾಹ್ನ ತಿರುಪತಿಯಿಂದ ಹಿಂದಿರುಗಿ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಕುಟುಂಬ ಸಮೇತರಾಗಿ ಬೆಂಗಳೂರಿಗೆ ಬರಲಿದ್ದಾರೆ ಎಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ