ಆ್ಯಪ್ನಗರ

ಸಂವಿಧಾನ, ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ನಾವೆಲ್ಲರೂ ಸಂಕಲ್ಪ ಮಾಡುವ ಅಗತ್ಯವಿದೆ: ಸಿದ್ದರಾಮಯ್ಯ

ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಆಧುನಿಕ ಭಾರತ ಕಟ್ಟುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ದೇಶದಲ್ಲಿ ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು ಅಧಿಕಾರಕ್ಕಾಗಿ ಹೋರಾಟ ಮಾಡಿಲ್ಲ. ಇಷ್ಟೆಲ್ಲಾ ಸಾಧನೆ ಮಾಡಿದರೂ ರಾಜಕೀಯ, ಆರ್ಥಿಕ ಅಸಮಾನತೆ ಇದೆ. ಸಂಪತ್ತಿನಲ್ಲಿ ಒಬ್ಬ ವ್ಯಕ್ತಿಗೆ ಒಂದು ಮೌಲ್ಯ ಎಂದು ಹೇಳಲು ಸಾಧ್ಯವಿಲ್ಲ. ಅಸಮಾನತೆ ಇದೆ. ಇದನ್ನು ತೆಗೆದುಹಾಕದೆ ಇದ್ದರೆ ಸ್ವಾತಂತ್ರ ಬಂದರೂ ಸಾರ್ಥಕವಾಗಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka Web 15 Aug 2022, 7:33 pm
ಬೆಂಗಳೂರು: ಸಂವಿಧಾನ, ಪ್ರಜಾಪ್ರಭುತ್ವ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಅದಕ್ಕಾಗಿ ನಾವೆಲ್ಲರೂ ಸಂಕಲ್ಪ ಮಾಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕರೆ ನೀಡಿದರು.
Vijaya Karnataka Web Siddaramaiah


ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ನಡಿಗೆ ಸಮಾವೇಶದಲ್ಲಿ ಮಾತನಾಡಿದ ಅವರು,‌ ಸ್ವಾತಂತ್ರ್ಯ ತಂದು ಕೊಡಲು ಹೋರಾಟ ಮಾಡಿದವರನ್ನು ಸ್ಮರಿಸಿಕೊಳ್ಳಬೇಕು. ಅವರ ಹೋರಾಟದ ಫಲವಾಗಿ ಸ್ವಾತಂತ್ರ್ಯದ ಗಾಳಿಯನ್ನು ಉಸಿರಾಟ ಮಾಡುತ್ತಿದ್ದೇವೆ ಎಂದರು. ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಆಧುನಿಕ ಭಾರತ ಕಟ್ಟುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ದೇಶದಲ್ಲಿ ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು ಅಧಿಕಾರಕ್ಕಾಗಿ ಹೋರಾಟ ಮಾಡಿಲ್ಲ. ಇಷ್ಟೆಲ್ಲಾ ಸಾಧನೆ ಮಾಡಿದರೂ ರಾಜಕೀಯ, ಆರ್ಥಿಕ ಅಸಮಾನತೆ ಇದೆ. ಸಂಪತ್ತಿನಲ್ಲಿ ಒಬ್ಬ ವ್ಯಕ್ತಿಗೆ ಒಂದು ಮೌಲ್ಯ ಎಂದು ಹೇಳಲು ಸಾಧ್ಯವಿಲ್ಲ. ಅಸಮಾನತೆ ಇದೆ. ಇದನ್ನು ತೆಗೆದುಹಾಕದೆ ಇದ್ದರೆ ಸ್ವಾತಂತ್ರ ಬಂದರೂ ಸಾರ್ಥಕವಾಗಲ್ಲ ಎಂದರು.
ನಕಲಿ ದೇಶ ಪ್ರೇಮಿಗಳ‌ ಬಾಯಿ ಮುಚ್ಚಿಸುವ ಕೆಲಸ ಮಾಡಬೇಕಿದೆ: ಸಿದ್ದರಾಮಯ್ಯ
ಆರ್ಥಿಕ ಹಾಗೂ ಸಾಮಾಜಿಕ ಪ್ರಜಾಪ್ರಭುತ್ವ ಎಲ್ಲ ಪ್ರಜೆಗಳಿಗೆ ಸಿಗುವುದಿಲ್ಲವೋ ಅಲ್ಲಿಯವರೆಗೆ ಸ್ವಾತಂತ್ರ್ಯ ಸಾರ್ಥಕ ಅಲ್ಲ ಎಂದು ಅಂಬೇಡ್ಕರ್ ಭಾಷಣದಲ್ಲಿ ಉಲ್ಲೇಖ ಮಾಡಿದ್ದಾರೆ. ಸಾಮಾಜಿಕ ಹಾಗೂ ಆರ್ಥಿಕ ಪ್ರಜಾಪ್ರಭುತ್ವ ಕೊಡಿಸುವ ನಿಟ್ಟಿನಲ್ಲಿ ನಾವೆಲ್ಲಾ ಸಂಕಲ್ಪ ಮಾಡಬೇಕು ಎಂದು ಹೇಳಿದ ಸಿದ್ದರಾಮಯ್ಯ ಹೇಳಿದರು.

ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದ ದಿನವಿದು. ಪಾದಯಾತ್ರೆಗೆ ಎಲ್ಲರೂ ಬೆಂಬಲ ನೀಡಿ ಯಶಸ್ವಿಯಾಗಿ ನಡೆಸಿದ್ದಾರೆ. ವಿಶ್ವಗುರು ದೆಹಲಿಯಲ್ಲಿ ಕೂತುಕೊಂಡು ಸ್ವಾತಂತ್ರ್ಯ ಹತ್ತಿಕ್ಕಲು, ಪ್ರಜಾಪ್ರಭುತ್ವ ಧ್ವಂಸ ಮಾಡಲು ಪ್ರಯತ್ನ ಪಡುತ್ತಿದ್ದಾರೆ. ಹಾಗಾಗಿ ತ್ರಿವರ್ಣ ಧ್ವಜಕ್ಕೆ ಅಗೌರವ ಸೂಚಿಸುವ ಶಕ್ತಿಗಳ ವಿರುದ್ಧ ಹೋರಾಟ ಮಾಡಬೇಕಿದೆ ಎಂದರು.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಕಾಂಗ್ರೆಸ್, ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡುವವರು, ಸಂವಿಧಾನಕ್ಕೆ ಅವಮಾನ ಮಾಡುವವರು ದೇಶದ್ರೋಹಿಗಳು. ದೇಶಕ್ಕೆ ಗುಜರಾತ್ ಮಾಡೆಲ್ ಅಲ್ಲ ಬೆಂಗಳೂರು ಮಾಡೆಲ್ ಅಗತ್ಯವಿದೆ. ನೆಹರೂ ಅವರಿಗೆ ಅವಮಾನ ಮಾಡಿದ ಪಕ್ಷ ಬಿಜೆಪಿ, ಸಂವಿಧಾನ, ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡುವವರನ್ನು ಮನೆಗೆ ಕೆಲಸಬೇಕು ಎಂದು ಹೇಳಿದರು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ