ಆ್ಯಪ್ನಗರ

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಿಂದ 79 ಕೈದಿಗಳ ಬಿಡುಗಡೆ

ರಾಜ್ಯದ ವಿವಿಧ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ 79 ಸಜಾಬಂಧಿಗಳು ಸನ್ನಡತೆ ಆಧಾರದ ಮೇಲೆ ಭಾನುವಾರ ಬಿಡುಗಡೆಯಾಗಲಿದ್ದಾರೆ.

Vijaya Karnataka 9 Sep 2018, 7:57 am
ಬೆಂಗಳೂರು: ರಾಜ್ಯದ ವಿವಿಧ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ 79 ಸಜಾಬಂಧಿಗಳು ಸನ್ನಡತೆ ಆಧಾರದ ಮೇಲೆ ಭಾನುವಾರ ಬಿಡುಗಡೆಯಾಗಲಿದ್ದಾರೆ.
Vijaya Karnataka Web prison


ಬಿಡುಗಡೆ ಕಾರ್ಯಕ್ರಮವನ್ನು ಭಾನುವಾರ(ಸೆ.9) ಬೆಳಗ್ಗೆ 11.30ರಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಆಯೋಜಿಸಲಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಭಾಗವಹಿಸಲಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ 28 ಕೈದಿಗಳು, ವಿಜಯಪುರದ 4, ಮೈಸೂರು 18, ಬಳ್ಳಾರಿ 5, ಬೆಳಗಾವಿ 9, ಕಲಬುರಗಿ 13 ಹಾಗೂ ಧಾರವಾಡ ಕಾರಾಗೃದಲ್ಲಿನ ಇಬ್ಬರು ಕೈದಿಗಳಿಗೆ ಬಿಡುಗಡೆ ಭಾಗ್ಯ ದೊರಕಲಿದೆ. ರಾಜ್ಯದ ವಿವಿಧ ಕಾರಾಗೃಹದಲ್ಲಿ ಬಿಡುಗಡೆ ಆಗಲು ಸಿದ್ಧವಾಗಿರುವ ಕೈದಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಕರೆಸಿ ಕಾರ್ಯಕ್ರಮ ನಡೆಸಿ ಅಲ್ಲಿಂದಲೇ ಬಿಡುಗಡೆ ಮಾಡಲಾಗುತ್ತಿದೆ ಎಂದು ಕಾರಾಗೃಹ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ