ಆ್ಯಪ್ನಗರ

ಪಾರ್ಲಿಮೆಂಟ್‌ ಫೈಟ್‌: ಇಂದು ಜೆಡಿಎಸ್‌ ಪ್ರಮುಖರ ಸಭೆ

ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ಸಂಬಂಧ ಜೆಡಿಎಸ್‌ ಪ್ರಮುಖರ ಮಹತ್ವದ ಸಭೆ ಗುರುವಾರ ನಡೆಯಲಿದೆ.

Vijaya Karnataka 3 Jan 2019, 6:30 am
ಬೆಂಗಳೂರು:ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ಸಂಬಂಧ ಜೆಡಿಎಸ್‌ ಪ್ರಮುಖರ ಮಹತ್ವದ ಸಭೆ ಗುರುವಾರ ನಡೆಯಲಿದೆ.
Vijaya Karnataka Web ದೇವೇಗೌಡ, ಕುಮಾರಸ್ವಾಮಿ
ದೇವೇಗೌಡ, ಕುಮಾರಸ್ವಾಮಿ


ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಸಮ್ಮುಖದಲ್ಲಿ ಪಕ್ಷದ ಕಚೇರಿಯಲ್ಲಿ ಈ ಸಭೆ ನಡೆಯಲಿದೆ.

ಪಕ್ಷದ ಎಲ್ಲ ಶಾಸಕರು, ಮೇಲ್ಮನೆ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು, ರಾಜ್ಯ ಪದಾಧಿಕಾರಿಗಳು, ನಾನಾ ವಿಭಾಗಗಳ ಅಧ್ಯಕ್ಷರು, ಜಿಲ್ಲಾ ಘಟಕಗಳ ಪದಾಧಿಕಾರಿಗಳು, 2014ರ ಸಾರ್ವತ್ರಿಕ ಚುನಾವಣೆ ಹಾಗೂ 2018ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡವರು, ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಸೇರಿದಂತೆ ಎಲ್ಲ ಮುಖಂಡರನ್ನು ಸಭೆಗೆ ಆಹ್ವಾನಿಸಲಾಗಿದೆ.

ಅನಾರೋಗ್ಯದ ಕಾರಣ ನೀಡಿ ರಾಜ್ಯಾಧ್ಯಕ್ಷ ಸ್ಥಾನದಿಂದ ತಮ್ಮನ್ನು ಬಿಡುಗಡೆ ಮಾಡುವಂತೆ ಎಚ್‌.ವಿಶ್ವನಾಥ್‌ ಈಗಾಗಲೇ ಮನವಿ ಮಾಡಿಕೊಂಡಿದ್ದು, ಈ ಸಂಬಂಧ ದೇವೇಗೌಡರ ತೀರ್ಮಾನ ಗುರುವಾರದ ಸಭೆಯಲ್ಲಿ ಪ್ರಕಟವಾಗುವ ನಿರೀಕ್ಷೆಯಿದೆ. ಜತೆಗೆ, ವಿಭಾಗವಾರು ಕಾರ್ಯಾಧ್ಯಕ್ಷರ ನೇಮಕ, ರಾಜ್ಯ ಘಟಕ ಪುನಾರಚನೆ, ಜಿಲ್ಲಾ ಘಟಕಗಳ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ನಾಳಿನ ಸಭೆಯ ಬಳಿಕ ತೀರ್ಮಾನಗಳು ಹೊರಬೀಳುವ ಸಾಧ್ಯತೆಗಳಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ