ಬೆಂಗಳೂರು : ಕ್ಷಯ ರೋಗ ನಿಯಂತ್ರಣಕ್ಕಾಗಿ ಕೇಂದ್ರದ ಸೂಚನೆ ಮೇರೆಗೆ ಕರ್ನಾಟಕದಲ್ಲಿ 'ರಾಜ್ಯ ಕ್ಷಯ ವೇದಿಕೆ' ರಚಿಸಿದೆ.
ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ರಚಿಸಿರುವ ರಾಜ್ಯ ಕ್ಷಯ ವೇದಿಕೆ ಕಾರ್ಯನಿರ್ವಹಿಸಲಿದೆ. ಕ್ಷಯ ರೋಗಿಗಳಿಗೆ ಸರಕಾರಿ ಸೌಲಭ್ಯ ತಲುಪಿಸುವುದು, ಕಾರ್ಯನೀತಿ ರಚನೆ, ಚಿಕಿತ್ಸೆ ಬಗ್ಗೆ ತಿಳುವಳಿಕೆ, ಸ್ನೇಹಯುತವಾದ ಕಾನೂನು ಹಾಗೂ ನೀತಿ ಅನುಷ್ಠಾನ, ರೋಗಿಗಳ ಕುಟುಂಬಕ್ಕೆ ಅಂಟಿರುವ ಕಳಂಕ ದೂರ ಮಾಡುವುದು, ಸರಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿ ಮಾಡುವ ಹೊಣೆಯನ್ನು ವೇದಿಕೆಗೆ ವಹಿಸಲಾಗಿದೆ.
ರಾಜ್ಯ ಮಟ್ಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ವೇದಿಕೆಯ ಅಧ್ಯಕ್ಷರು, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಸಹ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ನಿರ್ದೇಶಕ, ರಾಷ್ಟ್ರೀಯ ಕ್ಷಯ ರೋಗ ಸಂಸ್ಥೆ ನಿರ್ದೇಶಕ, ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣಾ ಸಂಸ್ಥೆ ಯೋಜನಾ ನಿರ್ದೇಶಕ, ರಾಜ್ಯ ಔಷಧ ನಿಯಂತ್ರಕರು, ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ, ಕಿಮ್ಸ್ ಪಲ್ಮನೊಜಿ ವಿಭಾಗದ ಮುಖ್ಯಸ್ಥರು ಸೇರಿದಂತೆ 31 ಇಲಾಖೆ ಹಾಗೂ ಸಂಸ್ಥೆಗಳ ಪ್ರತಿನಿಧಿಗಳು ವೇದಿಕೆಯ ಸದಸ್ಯರಾಗಿರುತ್ತಾರೆ.
ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ರಚಿಸಿರುವ ರಾಜ್ಯ ಕ್ಷಯ ವೇದಿಕೆ ಕಾರ್ಯನಿರ್ವಹಿಸಲಿದೆ. ಕ್ಷಯ ರೋಗಿಗಳಿಗೆ ಸರಕಾರಿ ಸೌಲಭ್ಯ ತಲುಪಿಸುವುದು, ಕಾರ್ಯನೀತಿ ರಚನೆ, ಚಿಕಿತ್ಸೆ ಬಗ್ಗೆ ತಿಳುವಳಿಕೆ, ಸ್ನೇಹಯುತವಾದ ಕಾನೂನು ಹಾಗೂ ನೀತಿ ಅನುಷ್ಠಾನ, ರೋಗಿಗಳ ಕುಟುಂಬಕ್ಕೆ ಅಂಟಿರುವ ಕಳಂಕ ದೂರ ಮಾಡುವುದು, ಸರಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿ ಮಾಡುವ ಹೊಣೆಯನ್ನು ವೇದಿಕೆಗೆ ವಹಿಸಲಾಗಿದೆ.
ರಾಜ್ಯ ಮಟ್ಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ವೇದಿಕೆಯ ಅಧ್ಯಕ್ಷರು, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಸಹ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ನಿರ್ದೇಶಕ, ರಾಷ್ಟ್ರೀಯ ಕ್ಷಯ ರೋಗ ಸಂಸ್ಥೆ ನಿರ್ದೇಶಕ, ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣಾ ಸಂಸ್ಥೆ ಯೋಜನಾ ನಿರ್ದೇಶಕ, ರಾಜ್ಯ ಔಷಧ ನಿಯಂತ್ರಕರು, ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ, ಕಿಮ್ಸ್ ಪಲ್ಮನೊಜಿ ವಿಭಾಗದ ಮುಖ್ಯಸ್ಥರು ಸೇರಿದಂತೆ 31 ಇಲಾಖೆ ಹಾಗೂ ಸಂಸ್ಥೆಗಳ ಪ್ರತಿನಿಧಿಗಳು ವೇದಿಕೆಯ ಸದಸ್ಯರಾಗಿರುತ್ತಾರೆ.