ಆ್ಯಪ್ನಗರ

ರಾಜ್ಯದಲ್ಲಿ ಹೂಡಿಕೆಗೆ ಯುಎಇ ಆಸಕ್ತಿ

ರಾಜ್ಯದಲ್ಲಿ ಆಹಾರ ಸಂಸ್ಕರಣೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಕಡಿಮೆ ವೆಚ್ಚದ ವಸತಿ ನಿರ್ಮಾಣ ಯೋಜನೆಗಳಲ್ಲಿ ಬಂಡವಾಳ ಹೂಡಿಕೆಗೆ ಯುಎಇ ಆಸಕ್ತಿ ...

Vijaya Karnataka 19 Feb 2019, 5:00 am
ಬೆಂಗಳೂರು: ರಾಜ್ಯದಲ್ಲಿ ಆಹಾರ ಸಂಸ್ಕರಣೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಕಡಿಮೆ ವೆಚ್ಚದ ವಸತಿ ನಿರ್ಮಾಣ ಯೋಜನೆಗಳಲ್ಲಿ ಬಂಡವಾಳ ಹೂಡಿಕೆಗೆ ಯುಎಇ ಆಸಕ್ತಿ ವಹಿಸಿದೆ.
Vijaya Karnataka Web 1802-2-2-113


ಭಾರತದಲ್ಲಿನ ಯುಎಇ ರಾಯಭಾರಿ ಡಾ.ಅಹಮದ್‌ ಎ.ಆರ್‌.ಅಲ್‌ಬನ್ನಾ ಅವರು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಭೇಟಿಯಾಗಿ ಮಾತುಕತೆ ನಡೆಸಿದರು.

ಆಲ್‌ಬನ್ನಾ ಪ್ರಸ್ತಾವನೆಯನ್ನು ಸ್ವಾಗತಿಸಿದ ಸಿಎಂ, ''ರಾಜ್ಯದಲ್ಲಿ ಯುಎಇ ಹಲವು ವರ್ಷಗಳಿಂದ ಕೃಷಿ, ನೀರಾವರಿ, ಆಟೊಮೊಬೈಲ್‌ ಮತ್ತಿತರ ವಲಯಗಳಲ್ಲಿ ಹೂಡಿಕೆಯಲ್ಲಿ ತೊಡಗಿದೆ. ಇದೀಗ ಮೂಲಭೂತ ಸೌಕರ್ಯ ಅಭಿವೃದ್ಧಿ, ಆಹಾರ ಪಾರ್ಕ್‌ ಮತ್ತು ಕಡಿಮೆ ವೆಚ್ಚದ ಮನೆಗಳ ನಿರ್ಮಾಣ ಯೋಜನೆಗಳಲ್ಲಿ ಬಂಡವಾಳ ತೊಡಗಿಸಲು ಮುಂದೆ ಬಂದಿದೆ. ಅಂತೆಯೇ ರಾಜ್ಯದಿಂದ ಉತ್ತಮ ಗುಣಮಟ್ಟದ ಹೂವು, ಹಣ್ಣು ಮತ್ತು ತರಕಾರಿ ಯೂರೋಪಿಯನ್‌ ರಾಷ್ಟ್ರಗಳಿಗೆ ರಫ್ತಾಗುತ್ತಿದ್ದು, ಈ ವಲಯಗಳಲ್ಲಿಯೂ ಹೂಡಿಕೆಗೆ ಯುಎಇ ಆಸಕ್ತಿ ತೋರಿದೆ. ಈ ತೀರ್ಮಾನವನ್ನು ರಾಜ್ಯ ಸರಕಾರ ಸ್ವಾಗತಿಸಲಿದ್ದು, ಬಂಡವಾಳ ತೊಡಗಿಸಲು ಅಗತ್ಯ ಬೆಂಬಲ ಮತ್ತು ಸಹಕಾರವನ್ನು ನೀಡಲಾಗುವುದು,'' ಎಂದು ತಿಳಿಸಿದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತಾ, ಸಿಎಂ ಕಾರ್ಯದರ್ಶಿ ಸೆಲ್ವಕುಮಾರ್‌ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ