ಆ್ಯಪ್ನಗರ

ರಾಜ್ಯಪಾಲರು ಯಾವ ಆಧಾರದಲ್ಲಿ ಸರ್ವಪಕ್ಷ ಸಭೆ ಕರೆದಿದ್ದಾರೆ? ಡಿ.ಕೆ. ಶಿವಕುಮಾರ್ ಪ್ರಶ್ನೆ

ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಮಂಗಳವಾರ ರಾಜ್ಯಪಾಲ ವಜೂಭಾಯಿ ವಾಲಾ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಆದರೆ ಯಾವ ಆಧಾರದಲ್ಲಿ ರಾಜ್ಯಪಾಲರು ಸಭೆ ಕರೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

Vijaya Karnataka Web 20 Apr 2021, 4:25 pm
ಬೆಂಗಳೂರು: ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಮಂಗಳವಾರ ರಾಜ್ಯಪಾಲ ವಜೂಭಾಯಿ ವಾಲಾ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಆದರೆ ಯಾವ ಆಧಾರದಲ್ಲಿ ರಾಜ್ಯಪಾಲರು ಸಭೆ ಕರೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
Vijaya Karnataka Web DK Shivakumar


ಮಂಗಳವಾರ ನಮ್ಮ ನಿವಾಸದಲ್ಲಿ ಮಾತನಾಡಿದ ಅವರು, ರಾಜ್ಯಪಾಲರ ಆಹ್ವಾನದ ಮೇರೆ ಅವರಿಗೆ ಗೌರವ ಕೊಟ್ಟು ನಮ್ಮ ಪಕ್ಷ ಸಭೆಯಲ್ಲಿ ಭಾಗಿಯಾಗುತ್ತಿದೆ. ಸರ್ಕಾರದ ಬಳಿ ಮಾಹಿತಿ ಪಡೆದುಕೊಳ್ಳಬಹುದು.ಸರ್ವ ಪಕ್ಷಗಳ ಸಭೆಗೆ ನಮ್ಮನ್ನು ಕರೆದಿದ್ದಾರೆ ಆದರೆ ಸಂವಿಧಾನದ ಯಾವ ಅಡಿಯಲ್ಲಿ ಕರೆದಿದ್ದಾರೆ ಎಂದು ಗೊತ್ತಿಲ್ಲ , ಕರೆಯಬಹುದಾ ಅಂತ ಗೊತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಆರೋಗ್ಯ ಕ್ಷೇತ್ರಕ್ಕೆ 30 ಸಾವಿರ ಕೋಟಿ ರುಪಾಯಿ ಮೀಸಲಿಡಬೇಕು: ಡಿ.ಕೆ. ಶಿವಕುಮಾರ್ ಆಗ್ರಹ

ಮುಖ್ಯಮಂತ್ರಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯಪಾಲರು ಚೇರ್ ಮಾಡುತ್ತಾರೆ ಎಂದು ನಮಗೆ ನೋಟಿಸ್ ಬಂದಿದೆ ಆದರೆ, ರಾಜ್ಯಪಾಲರು ಯಾವ ನಿಯಮದ ಅಡಿಯಲ್ಲಿ ಸಭೆ ಕರೆದಿದ್ದಾರೆ ಎಂದು ಗೊತ್ತಿಲ್ಲ. ಇದನ್ನು ಕಾನೂನು ಸಚಿವರು ಹೇಳಬೇಕು ಎಂದರು.

ಇವರು ಹೇಳಿದ ಹಾಗೆ ಎಲ್ಲವನ್ನು ಮಾಡಿದ್ದೇವೆ. 1,20,000 ಜನರಿಗೆ ಮುಂಜಾಗ್ರತೆಯ ಕ್ರಮ ಮಾಡಬೇಕು ಎಂದು ತಜ್ಞರು ಹೇಳಿದ್ದರೂ ಕೇಳಿಲ್ಲ. ರಾಜ್ಯದಲ್ಲಿ ಸರ್ಕಾರ ಸರಿಯಾಗಿ ಕೆಲಸ ಮಾಡ್ತಿಲ್ಲ ಎಂದು ರಾಜ್ಯಪಾಲರು ಬಂದಿದ್ದಾರೆ ಎಂದರು.

ಆರೋಗ್ಯ ಸಚಿವರು ಕೇವಲ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟರೆ ಸಾಲದು. ಎಷ್ಟು ಜನ ಐಎಎಸ್, ಕೆಎಎಸ್ ಅಧಿಕಾರಿಗಳು ಇದ್ದಾರೋ, ಅವರನ್ನೆಲ್ಲ ಬಳಸಿಕೊಂಡು ವಾರ್ ಫೂಟ್ ನಲ್ಲಿ ಕೆಲಸ ಮಾಡಬೇಕು‌.

ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವ ಬಗ್ಗೆ ಚರ್ಚಿಸಿ ತೀರ್ಮಾನ: ಡಿಕೆ ಶಿವಕುಮಾರ್‌

ಹೆಣ ಸುಡಲು ಜಾಗ ನಿಗದಿ ಮಾಡಿ
ಹೆಣ ಸುಡಲು ತೊಂದರೆ ಆಗ್ತಿದೆ, ಕಂದಾಯ ಸಚಿವರಿಗೆ ಇದು ಅರ್ಥವಾಗಬೇಕು. ಬೆಂಗಳೂರು ಸುತ್ತಲಿನ ಪ್ರದೇಶಗಳಲ್ಲಿ 5 ರಿಂದ 6 ಎಕರೆ ಜಾಗದಲ್ಲಿ ಹೆಣ ಸುಡುವುದಕ್ಕೆ ವ್ಯವಸ್ಥೆ ಮಾಡಿ. ಸರ್ಕಾರಿ ಜಾಗವನ್ನೇ ನಿಗದಿ ಮಾಡಿ. ಗೌರವ ಯುತವಾಗಿ ಅವರನ್ನು ಕಳಿಸಿಕೊಡಿ. ಅವರನ್ನು ಕ್ಯೂನಲ್ಲಿ ನಿಲ್ಲಿಸಿ ಹೆಣ ಸುಡುವಂತೆ ಮಾಡುತ್ತಿದ್ದಾರೆ. ಕೊರೊನಾದಿಂದ ಎಷ್ಟು ಜನ ಸತ್ತರು ಅಂತ ಆಡಿಟ್ ಮಾಡಿಸಿ, ಹಳ್ಳಿ ಜನ ನಿಮ್ಮ ಆಡಳಿತ ನೋಡಿ ನಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾವು ಸರಿ ಮಾಡುತ್ತೇವೆ ಅಂದರೆ ಸಾಲದು. ನೀವು ಬರಿ ಮೀಟಿಂಗ್ ಮಾಡುವುದೇ ಆಯ್ತು. ಪಿಎಂ , ಸಿಎಂ ಕೇರ್ ನಲ್ಲಿ ಹಣ ಎಷ್ಟು ಬಂತು ಎಂಬ ಲೆಕ್ಕವನ್ನು ಜನರಿಗೆ ಕೊಡಿ ಎಂದು ಡಿ.ಕೆ. ಶಿವಕುಮಾರ್‌ ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ