ಆ್ಯಪ್ನಗರ

ಗೌಡರಿಗೆ ವಾಲ್ಮೀಕಿ ಪ್ರಶಸ್ತಿ-ಬಿಜೆಪಿ ವಿರೋಧ

ವಾಲ್ಮೀಕಿ ಪ್ರಶಸ್ತಿಗೆ ಸಾಹಿತಿಗಳನ್ನು ಆಯ್ಕೆ ಮಾಡದೆ ಮಾಜಿ ಪ್ರಧಾನಿ ದೇವೇಗೌಡರನ್ನು ಆಯ್ಕೆ ಮಾಡಿದ್ದಾರೆ...

Vijaya Karnataka Web 25 Oct 2018, 5:00 am
ಬೆಂಗಳೂರು: ವಾಲ್ಮೀಕಿ ಪ್ರಶಸ್ತಿಗೆ ಸಾಹಿತಿಗಳನ್ನು ಆಯ್ಕೆ ಮಾಡದೆ ಮಾಜಿ ಪ್ರಧಾನಿ ದೇವೇಗೌಡರನ್ನು ಆಯ್ಕೆ ಮಾಡಿದ್ದಾರೆ. ಸಮಾಜಕ್ಕೆ ಅವರ ಕೊಡುಗೆ ಏನು? ಎಂದು ಬಿಜೆಪಿ ವಕ್ತಾರ ಗೋ.ಮಧುಸೂದನ್‌ ಪ್ರಶ್ನಿಸಿದ್ದಾರೆ.
Vijaya Karnataka Web go madhusudan1


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಅಯೋಧ್ಯೆಯಲ್ಲಿ ರಾಮ ಮಂದಿರ ಬೇಡ ಎಂದು ದೇವೇಗೌಡರು ಹೇಳಿದ್ದರು. ಇಂತಹ ವ್ಯಕ್ತಿಗೆ ವಾಲ್ಮೀಕಿ ಪ್ರಶಸ್ತಿ ನೀಡಿದರೆ ವಾಲ್ಮೀಕಿ ಸಮುದಾಯ ಒಪ್ಪುವುದಿಲ್ಲ. ಮಗ (ಎಚ್‌.ಡಿ.ಕುಮಾರಸ್ವಾಮಿ) ಅಪ್ಪನಿಗೆ (ಎಚ್‌.ಡಿ.ದೇವೇಗೌಡ) ಪ್ರಶಸ್ತಿ ಕೊಟ್ಟಿದ್ದಾರೆ. ದೇವೇಗೌಡರು ಪ್ರಶಸ್ತಿ ಸ್ವೀಕರಿಸದೇ ಇದ್ದರೂ ಬೆಂಗಳೂರಿಗೆ ಬಂದ ಮೇಲೆ ಸ್ವೀಕರಿಸುತ್ತಾರೆ. ಸಮಾಜ ಒಡೆದು ಆಳುವ ಅವರಿಗೆ ಸಾಮಾಜಿಕ ಬದ್ಧತೆ ಇಲ್ಲ ,'' ಎಂದು ವ್ಯಂಗ್ಯವಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ