ಆ್ಯಪ್ನಗರ

ವಾಲ್ಮೀಕಿ ಶ್ರೀ ಹೇಳಿಕೆಗೆ ಜೆಡಿಎಸ್‌ ಖಂಡನೆ

ಮೀಸಲಾತಿ ಹೋರಾಟದ ನೇತೃತ್ವ ವಹಿಸಿದ್ದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್‌ಡಿ...

Vijaya Karnataka 27 Jun 2019, 5:00 am
ಬೆಂಗಳೂರು: ಮೀಸಲಾತಿ ಹೋರಾಟದ ನೇತೃತ್ವ ವಹಿಸಿದ್ದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಕುರಿತು ಲಘುವಾಗಿ ಮಾತನಾಡಿರುವುದನ್ನು ಜೆಡಿಎಸ್‌ನ ಎಸ್‌ಟಿ ಘಟಕ ಖಂಡಿಸಿದೆ.
Vijaya Karnataka Web valmiki sree statement
ವಾಲ್ಮೀಕಿ ಶ್ರೀ ಹೇಳಿಕೆಗೆ ಜೆಡಿಎಸ್‌ ಖಂಡನೆ


''ವಾಲ್ಮೀಕಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಲ್ಲಿ 1991ರಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಪ್ರಮುಖ ಪಾತ್ರ ವಹಿಸಿದ್ದರು. ಅದೇ ರೀತಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರೂ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಹೀಗಿರುವಾಗ ಅವರ ವಿರುದ್ಧ ಲಘುವಾಗಿ ಮಾತನಾಡಿರುವುದು ಸರಿಯಲ್ಲ'' ಎಂದು ಜೆಡಿಎಸ್‌ ಪರಿಶಿಷ್ಟ ಪಂಗಡ ಘಟಕದ ರಾಜ್ಯಾಧ್ಯಕ್ಷ ಹೊದಿಗೆರೆ ರಮೇಶ್‌ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಆಕ್ರೋಶ ವ್ಯಕ್ತಪಡಿಸಿದರು.

'' ಸಮಾಜವನ್ನು ಸನ್ಮಾರ್ಗದಲ್ಲಿ ಮುನ್ನಡೆಸಬೇಕಾದ ಸ್ವಾಮೀಜಿ ಅವರೇ ಈ ರೀತಿ ಮಾತನಾಡಿದರೆ ಹೇಗೆ. ಅದರಲ್ಲೂ ಮುಖ್ಯಮಂತ್ರಿಗಳಿಗೆ 'ಗೊಟಕ್‌' ಎಂಬ ಪದ ಬಳಕೆ ಮಾಡಿದ್ದು ಸೂಕ್ತವಲ್ಲ. ಅರಿಷಡ್ವರ್ಗಗಳನ್ನು ಮೀರಿ ನಿಂತ ಸ್ವಾಮೀಜಿಗಳಿಂದ ಇಂತಹ ಕ್ರೋಧದ ಮಾತು ಬಂದರೆ ಸಮಾಜದ ಗತಿ ಏನು'' ಎಂದು ಪ್ರಶ್ನಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ