ಆ್ಯಪ್ನಗರ

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ:ಸ್ಥಾಪನೆಗೆ ಕಾಂಗ್ರೆಸ್‌ ನಾಯಕರ ಸಭೆ ನಿರ್ಣಯ

ಸಮುದಾಯದ ಹಿತದೃಷ್ಟಿಯಿಂದ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರಕಾರಕ್ಕೆ ಮನವಿ ಸಲ್ಲಿಸಲು ಕಾಂಗ್ರೆಸ್‌ನ ವೀರಶೈವ-ಲಿಂಗಾಯತ ನಾಯಕರ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

Vijaya Karnataka 20 Jun 2019, 5:00 am
ಬೆಂಗಳೂರು : ಸಮುದಾಯದ ಹಿತದೃಷ್ಟಿಯಿಂದ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರಕಾರಕ್ಕೆ ಮನವಿ ಸಲ್ಲಿಸಲು ಕಾಂಗ್ರೆಸ್‌ನ ವೀರಶೈವ-ಲಿಂಗಾಯತ ನಾಯಕರ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
Vijaya Karnataka Web veerashyva lingayata development board congress leaders ready to urge
ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ:ಸ್ಥಾಪನೆಗೆ ಕಾಂಗ್ರೆಸ್‌ ನಾಯಕರ ಸಭೆ ನಿರ್ಣಯ


ಗೃಹ ಸಚಿವ ಎಂ.ಬಿ.ಪಾಟೀಲ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಸೇರಿದಂತೆ ಸಮುದಾಯದ ಮುಖಂಡರು ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಈ ಸಂಬಂಧ ಸಭೆ ನಡೆಸಿದರು. ಲಿಂಗಾಯತ ಧರ್ಮ ಹೊರಾಟ ಸಂದರ್ಭದಲ್ಲಿ ಭಿನ್ನ ನಿಲುವು ತಳೆದಿದ್ದ ಪಾಟೀಲ್‌ ಹಾಗೂ ಶಾಮನೂರು ಒಂದೇ ವೇದಿಕೆಗೆ ಬಂದು ಸಮುದಾಯದ ಅಭಿವೃದ್ಧಿಗಾಗಿ ಒಗ್ಗಟ್ಟು ತೋರಿದ್ದು ವಿಶೇಷವಾಗಿತ್ತು.

ವೀರಶೈವ-ಲಿಂಗಾಯತರ ಶೈಕ್ಷಣಿಕ ಅಭ್ಯುದಯಕ್ಕೆ ಸರಕಾರ ಸಹಕರಿಸಬೇಕು. ಈ ನಿಟ್ಟಿನಲ್ಲಿ ನಿಗಮ ಸ್ಥಾಪನೆಯಾಗಬೇಕು, ಲಿಂಗಾಯತರನ್ನು ಒಬಿಸಿ ಪಟ್ಟಿಗೆ ಸೇರಿಸಲು ಕೇಂದ್ರ ಸರಕಾರದ ಮೇಲೆ ಒತ್ತಡ ತರಬೇಕು ಎಂಬ ತೀರ್ಮಾನ ಕೈಗೊಳ್ಳಲಾಯಿತು.

ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟಕ್ಕೆ ಶಾಮನೂರು ಶಿವಶಂಕರಪ್ಪ ವಿರೋಧಿಸಿದ್ದರು. ಖಂಡ್ರೆ ಅಂಥವರು ತಟಸ್ಥರಾಗಿದ್ದರು. ಹಾಗಾಗಿ ಲಿಂಗಾಯತ ಧರ್ಮದ ವಿಚಾರದಲ್ಲಿ ಕಾಂಗ್ರೆಸ್‌ ಮುಖಂಡರ ನಡುವೆಯೇ ಕಂದಕ ಸೃಷ್ಟಿಯಾದಂತಾಗಿತ್ತು. ಸಮಾಜದ ಹಿತಕ್ಕಾಗಿ ಈ ಎಲ್ಲ ನಾಯಕರು ಒಂದಾಗಿರುವುದು ಹೊಸ ಬೆಳವಣಿಗೆಯಾಗಿದೆ.

ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಲಿಂಗಾಯತರ ಸೇರ್ಪಡೆಯಾಗಬೇಕು. ಸಮುದಾಯದ ಬಡವರ ಏಳಿಗೆ ಸಂಬಂಧ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗಿದೆ.

-ಎಂ.ಬಿ.ಪಾಟೀಲ್‌, ಗೃಹ ಸಚಿವ


ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಸಿಎಂ ಭೇಟಿಯಾಗಿ ಮನವಿ ಸಲ್ಲಿಸುತ್ತೇವೆ. ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಒತ್ತಡ ತರುತ್ತೇವೆ.

-ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ



ಶೈಕ್ಷಣಿಕ, ಆರ್ಥಿಕವಾಗಿ ಲಿಂಗಾಯತರು ಬಲಿಷ್ಠರಾಗಬೇಕಿದೆ. ಈ ನಿಟ್ಟಿನಲ್ಲಿ ನಿಗಮ ಸ್ಥಾಪನೆಯಾಗಬೇಕು ಎಂಬುದು ನಮ್ಮ ಒತ್ತಾಯವಾಗಿದೆ.

-ಈಶ್ವರ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ

=

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ