ಆ್ಯಪ್ನಗರ

ಬೈ ಎಲೆಕ್ಷನ್‌ ಕ್ಷೇತ್ರಗಳಲ್ಲಿ ಬೀಡು ಬಿಡಲು ಸೂಚನೆ

ಉಪ ಚುನಾವಣೆ ನಡೆಯುವ ಕ್ಷೇತ್ರಗಳಿಗೆ ತಕ್ಷಣವೇ ತೆರಳುವಂತೆ ಸಚಿವರು ಹಾಗೂ ಪಕ್ಷದ ಮುಖಂಡರಿಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಸೂಚಿಸಿದ್ದಾರೆ.

Vijaya Karnataka 29 Apr 2019, 5:00 am
ಬೆಂಗಳೂರು : ಉಪ ಚುನಾವಣೆ ನಡೆಯುವ ಕ್ಷೇತ್ರಗಳಿಗೆ ತಕ್ಷಣವೇ ತೆರಳುವಂತೆ ಸಚಿವರು ಹಾಗೂ ಪಕ್ಷದ ಮುಖಂಡರಿಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಸೂಚಿಸಿದ್ದಾರೆ.
Vijaya Karnataka Web venugopal instruct leaders to go by election campaign
ಬೈ ಎಲೆಕ್ಷನ್‌ ಕ್ಷೇತ್ರಗಳಲ್ಲಿ ಬೀಡು ಬಿಡಲು ಸೂಚನೆ


ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರೊಂದಿಗೆ ಭಾನುವಾರ ಮಾತುಕತೆ ನಡೆಸಿರುವ ಅವರು, ಈ ಸಂಬಂಧ ನಿರ್ದೇಶನ ನೀಡುವಂತೆ ಸೂಚಿಸಿದ್ದಾರೆ.

ಚಿಂಚೋಳಿಯ ಉಸ್ತುವಾರಿಯನ್ನು ಈಗಾಗಲೇ ಡಿಸಿಎಂ ಡಾ.ಜಿ.ಪರಮೇಶ್ವರ ಅವರಿಗೆ ವಹಿಸಲಾಗಿದೆ. ಕ್ಷೇತ್ರದಲ್ಲಿ ಲಂಬಾಣಿ ಮತ್ತು ದಲಿತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಈ ಸಮಾಜ ಪ್ರತಿನಿಧಿಸುವ ಸಚಿವರು ಹಾಗೂ ಇತರರು ಡಿಸಿಎಂ ಅವರಿಗೆ ಸಹಕರಿಸುವಂತೆ ಸೂಚಿಸಲಾಗಿದೆ.

ಹಾಗೆಯೇ ಕುಂದಗೋಳದ ಹೊಣೆಯನ್ನು ಸಚಿವ ಡಿ.ಕೆ.ಶಿವಕುಮಾರ್‌ ಅವರಿಗೆ ನೀಡಲಾಗಿದೆ. ಕ್ಷೇತ್ರದಲ್ಲಿ ಲಿಂಗಾಯತರು, ಕುರುಬರು ನಿರ್ಣಾಯಕರಾದ್ದರಿಂದ ಗೃಹ ಸಚಿವ ಎಂ.ಬಿ.ಪಾಟೀಲ್‌, ಪ್ರಮುಖ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಜತೆಗೆ ಸಚಿವರಾದ ಶಿವಾನಂದ ಪಾಟೀಲ್‌, ಎಂ.ಟಿ.ಬಿ.ನಾಗರಾಜ್‌ ಇರುತ್ತಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ