ಆ್ಯಪ್ನಗರ

ಡಾ.ರಾಜ್ ಸಮಾಧಿ ಬಳಿ ಸೋಮವಾರ ಅಂಬಿ ಅಂತ್ಯಕ್ರಿಯೆ

ಮಾಹಿತಿ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

Vijaya Karnataka Web 25 Nov 2018, 8:12 am
ಬೆಂಗಳೂರು: ಮಾಜಿ ಸಚಿವ, ಹಿರಿಯ ಚಲನಚಿತ್ರ ನಟ ಅಂಬರೀಶ್ ಅಂತ್ಯಕ್ರಿಯೆ ಸೋಮವಾರ ಕಂಠೀರವ ಸ್ಟುಡಿಯೋದಲ್ಲಿ ಜರುಗಲಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
Vijaya Karnataka Web ಅಂಬಿ
ಅಂಬಿ


ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಕುಮಾರ್ ಸಮಾಧಿ ಸ್ಮಾರಕದ ಬಳಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಕುಟುಂಬ ಸದಸ್ಯರ ಜತೆ ಚರ್ಚಿಸಿ, ಸಲಹೆ ಸೂಚನೆ ಪಡೆದು ಕ್ರಮ ಕೈಗೊಳ್ಳಲಾಗಿದೆ ಎಂದರು.

ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಅಂಬರೀಶ್ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಲಾಯಿತು. ಬಳಿಕ ಪಾರ್ಥಿಯ ಶರೀರವನ್ನು ಕಂಠೀರವ ಸ್ಟೇಡಿಯಂಗೆ ತರಲಾಯಿತು.

ಭಾನುವಾರ ಇಡೀ ದಿನ ಪಾರ್ಥೀವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಕಂಠೀರವ ಇರಿಸಲಾಗುತ್ತಿದೆ. ಅಂತಿಮ‌ ದರ್ಶನಕ್ಕೆ ಆಗಮಿಸಲು ಮಂಡ್ಯ ಜಿಲ್ಲೆಯಿಂದ ವಿಶೇಷ ಸಾರಿಗೆ ಬಸ್ ವ್ಯವಸ್ಥೆಗೊಳಿಸಲಾಗಿದೆ.

ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಅಂಬಿ ಅಭಿಮಾನಿಗಳು ಶಾಂತಿಯಿಂದ ವರ್ತಿಸಬೇಕು. ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದೆ. ಬಿಗಿ ಬಂದೋಬಸ್ತ್‌ ಕೂಡ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ