ಆ್ಯಪ್ನಗರ

ಶಕ್ತಿಸೌಧಕ್ಕೆ ಕೊರೊನಾಘಾತ: ಸೋಂಕಿಗೆ ಭದ್ರತಾ ಸಿಬ್ಬಂದಿ ಬಲಿ!

ಕೊರೊನಾ ಸೋಂಕಿಗೆ ತುತ್ತಾಗಿ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ಪಾಸಿಟಿವ್‌ ಆಗಿದ್ದ ವಿಧಾನಸೌಧದ ಭದ್ರತಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಎಎಸ್‌ಐ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ.

Vijaya Karnataka Web 6 Jul 2020, 12:16 pm
ಬೆಂಗಳೂರು: ಕೊರೊನಾಗೆ ತುತ್ತಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಇದೀಗ ವಿಧಾನಸೌಧದಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಎಎಸ್‌ಐ ಒಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.
Vijaya Karnataka Web corona tratment


ವಿಧಾನಸೌಧದ ಭದ್ರತಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ 57 ವರ್ಷದ ಎಎಸ್‌ಐ ಅವರಿಗೆ ಕೊರೊನಾ ಸೋಂಕು ಪಾಸಿಟಿವ್‌ ಆಗಿತ್ತು. ಅವರನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೇರಿಸಿ ಚಿಕಿತ್ಸೆ ನೀಡಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಎಎಸ್‌ಐ ಸೋಮವಾರ ಬೆಳಗ್ಗೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅವರಿಗೆ ಮದುಮೇಹ ಹಾಗೂ ಉಸಿರಾಟದ ಸಮಸ್ಯೆ ಇತ್ತು ಎನ್ನಲಾಗುತ್ತಿದೆ.

ರೋಗಿಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳ, ವೆಂಟಿಲೇಟರ್‌ ಕೊರತೆ ಆತಂಕ

ಬೆಂಗಳೂರಿನಲ್ಲಿ ಕೊರೊನಾ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿದೆ. ಅದರಲ್ಲೂ ಕೊರೊನಾ ವಾರಿಯರ್ಸ್‌ಗಳಾಗಿ ಕೆಲಸ ಮಾಡುತ್ತಿರುವ ಪೊಲೀಸರಿಗೂ ಕೊರೊನಾ ಕಾಡುತ್ತಿದೆ.

ವಿಧಾನಸೌಧ ಮೊದಲನೇ ಮಹಡಿಯಲ್ಲಿರುವ ವಿಧಾನಸಭಾ ಕಾವಲುಗಾರರ ಕೊಠಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಪೇದೆ ಯೊಬ್ಬರಿಗೆ ದಿನಾಂಕ 05.07.2020ರಂದು ಕರೋನ ಕಾಯಿಲೆ ಪಾಸಿಟಿವ್ ಬಂದಿದೆ. ಆದುದರಿಂದ ವಿಧಾನಸೌಧ ದಲ್ಲಿ ಸೋಮವಾರ ಸ್ಯಾನಿಟೈಸ್ ಮಾಡಲಾಗುತ್ತಿದೆ.

ಕೊರೊನಾ ಎಫೆಕ್ಟ್: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಯುವಕರ ನಡೆ ‘ದುಷ್ಕೃತ್ಯ’ ಎಂದ ಸುಧಾಕರ್!

ಈ ನಿಟ್ಟಿನಲ್ಲಿ ವಿಧಾನ ಸೌಧದಲ್ಲಿರುವ ವಿಧಾನಸಭೆ ಸಚಿವಾಲಯದ ಪ್ರತಿ ಶಾಖೆಯಲ್ಲಿ ಒಬ್ಬರು ಮಾತ್ರ ಬಂದು ಶಾಖೆಯ ಒಳಗೆ ಸ್ಯಾನಿಟೈಸ್ ಮಾಡುವಾಗ ನೋಡಿಕೊಳ್ಳಬೇಕು ಮತ್ತು 55ವರ್ಷ ದಾಟಿದ ಅಧಿಕಾರಿ ಹಾಗೂ ನೌಕರರಿಗೆ ಸಭಾಧ್ಯಕ್ಷರ ಆದೇಶದಂತೆ ರಜೆಯನ್ನು ಘೋಷಿಸಲಾಗಿದೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ