ಆ್ಯಪ್ನಗರ

ವಿಜಯನಗರ ಜಿಲ್ಲೆಗೆ ಅನುಮೋದನೆ; ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ..!

ವಿಜಯ ನಗರ ಭಾಗದ ಜನರ ಬಹುಕಾಲದ ಬೇಡಿಕೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಜಯ ನಗರವನ್ನು ಜಿಲ್ಲೆಯನ್ನಾಗಿ ಮಾಡುವ ನಿರ್ಧಾರಕ್ಕೆ ತಾತ್ವಿಕ ಒಪ್ಪಿಗೆಯನ್ನು ನೀಡಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

Vijaya Karnataka Web 18 Nov 2020, 12:27 pm
ಬೆಂಗಳೂರು: ವಿಜಯ ನಗರ ಜಿಲ್ಲೆ ರಚನೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
Vijaya Karnataka Web madhuswamy


ಬಳ್ಳಾರಿ ಇಬ್ಭಾಗಕ್ಕೆ ಆಕ್ರೋಶದ ಬೆಂಕಿ; ವಿಜಯನಗರ ಜಿಲ್ಲೆ ರಚನೆಗೆ ಸೋಮಶೇಖರ ರೆಡ್ಡಿ ಪ್ರಬಲ ವಿರೋಧ..!

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯ ನಗರವನ್ನು ಜಿಲ್ಲೆಯನ್ನಾಗಿ ಮಾಡುವ ನಿರ್ಧಾರಕ್ಕೆ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆಯನ್ನು ನೀಡಲಾಗಿದೆ. ಅನೌಪಚಾರಿಕವಾಗಿ ಈ ಬಗ್ಗೆ ನಾವು ಮಾತನಾಡಿ ನಿರ್ಧಾರಕ್ಕೆ ಬಂದಿದ್ದೇವೆ. ವಿಜಯ ನಗರ ಜಿಲ್ಲೆಯ ಕುರಿತಾದ ಸವಿವರಗಳನ್ನು ಮುಂದಿನ ಸಭೆಯಲ್ಲಿ ಚರ್ಚಿಸಿದ ಬಳಿಕ ನೀಡಲಾಗುವುದು ಎಂದು ಹೇಳಿದ್ದಾರೆ.

ದೆಹಲಿಯತ್ತ ಬಿಎಸ್‌ವೈ, ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ !

ಸಿಎಂ ಬಿಎಸ್‌ವೈ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಭಿವೃದ್ಧಿ ನಿಗಮ, ಉಪಚುನಾವಣೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚಿಸಲಾಗಿದೆ. ಆ ಪೈಕಿ ವಿಜಯ ನಗರವನ್ನು ಜಿಲ್ಲೆಯನ್ನಾಗಿ ಮಾಡುವ ವಿಚಾರವೂ ಸೇರಿದೆ. ವಿಜಯನಗರವನ್ನು ಜಿಲ್ಲೆಯನ್ನಾಗಿ ಘೋಷಿಸಿದರೆ ಆ ಭಾಗದ ಜನರ ಬಹುಕಾಲದ ಬೇಡಿಕೆ ಈಡೇರಿದಂತಾಗುತ್ತದೆ.

ಲಿಂಗಾಯತ ನಿಗಮ ಮಂಡಳಿ ಸ್ಥಾಪನೆಯಾದರೂ ಹಣ ಬಿಡುಗಡೆ ಯಾಕಿಲ್ಲ? ಕುತೂಹಕ್ಕೆ ಕಾರಣವಾದ ಬಿಎಸ್‌ವೈ ನಡೆ

ಸಚಿವ ಸಂಪುಟ ಸಭೆಯಲ್ಲಿ ವಿಜಯ ನಗರವನ್ನು ಜಿಲ್ಲೆಯನ್ನಾಗಿ ಘೋಷಿಸುವ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಆನಂದ್‌ ಸಿಂಗ್ ಈ ಬಗ್ಗೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ವಿಜಯ ನಗರ ಜಿಲ್ಲೆ ಆಗಬೇಕೆಂಬುದು ನಮ್ಮ ಬಹುಕಾಲದ ಬೇಡಿಕೆ ಆಗಿದೆ. ಈ ಬೇಡಿಕೆಯನ್ನು ಸಾಕಾರಗೊಳಿಸಲು ನಿರ್ಧಾರ ಕೈಗೊಂಡ ಸಿಎಂ ಬಿಎಸ್‌ ಯಡಿಯೂರಪ್ಪನವರಿಗೆ ನಾವು ಎಷ್ಟು ಧನ್ಯವಾದ ಹೇಳಿದರೂ ಸಾಕಾಗಲ್ಲ ಎಂದು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ