ಆ್ಯಪ್ನಗರ

ವಿಶ್ವನಾಥ್‌ ರಾಜೀನಾಮೆಗೆ ಜೆಡಿಎಲ್‌ಪಿ ಮುದ್ರೆ

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್‌.ವಿಶ್ವನಾಥ್‌ ರಾಜೀನಾಮೆ ಶಾಕ್‌ ಪಕ್ಷದ ಶಾಸಕಾಂಗ ಸಭೆಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯದೇ ಇರಲು ವಿಶ್ವನಾಥ್‌ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಅವರ ನಿರ್ಧಾರಕ್ಕೆ ಪಕ್ಷದ ಅಧಿಕೃತ ಮುದ್ರೆ ಬೀಳುವುದು ಖಾತ್ರಿಯಾಗಿದೆ.

Vijaya Karnataka 5 Jun 2019, 5:00 am
ಬೆಂಗಳೂರು : ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್‌.ವಿಶ್ವನಾಥ್‌ ರಾಜೀನಾಮೆ ಶಾಕ್‌ ಪಕ್ಷದ ಶಾಸಕಾಂಗ ಸಭೆಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯದೇ ಇರಲು ವಿಶ್ವನಾಥ್‌ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಅವರ ನಿರ್ಧಾರಕ್ಕೆ ಪಕ್ಷದ ಅಧಿಕೃತ ಮುದ್ರೆ ಬೀಳುವುದು ಖಾತ್ರಿಯಾಗಿದೆ.
Vijaya Karnataka Web vishvanath resignation may be accept
ವಿಶ್ವನಾಥ್‌ ರಾಜೀನಾಮೆಗೆ ಜೆಡಿಎಲ್‌ಪಿ ಮುದ್ರೆ


ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ನೇತೃತ್ವದಲ್ಲಿ ಜೆಪಿ ನಗರದಲ್ಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ನಿವಾಸದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ , ಸಂಪುಟ ವಿಸ್ತರಣೆ ಸೇರಿದಂತೆ ಪ್ರಮುಖ ನಿರ್ಧಾರಗಳ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಆದರೆ ವಿಶ್ವನಾಥ್‌ ರಾಜೀನಾಮೆ ಬಗ್ಗೆ ಆರಂಭದಲ್ಲೇ ಪ್ರಸ್ತಾಪವಾಗಿದ್ದು, ನಿರ್ಧಾರ ಹಿಂದೆ ಪಡೆಯುವಂತೆ ದೇವೇಗೌಡರು ಮನವಿ ಮಾಡಿದರು ಎನ್ನಲಾಗಿದೆ. ಆದರೆ ವಿಶ್ವನಾಥ್‌ ಇದಕ್ಕೆ ಒಪ್ಪದೇ ಇರುವ ಹಿನ್ನೆಲೆಯಲ್ಲಿ ಕೆಲ ದಿನಗಳ ಕಾಲ ಕಾದು ನೋಡಿ. ಆಮೇಲೂ ನಿಲುವು ಬದಲಾಗದೇ ಇದ್ದರೆ ರಾಜೀನಾಮೆ ಪ್ರಸ್ತಾಪವನ್ನು ಒಪ್ಪಿಕೊಳ್ಳೋಣ ಎಂದು ಸಲಹೆ ನೀಡಲಾಗಿದೆ.

ಸಭೆಯ ಜತೆಗೆ ಭೋಜನದ ವ್ಯವಸ್ಥೆ ಮಾಡಿದ್ದರಿಂದ ತಡರಾತ್ರಿಯವರೆಗೂ ಚರ್ಚೆ ನಡೆದಿದೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಜೆಡಿಎಸ್‌ನ ಸ್ಥಾನವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡುವ ಬಗ್ಗೆ ನಡೆಯುತ್ತಿರುವ ಚರ್ಚೆ ಎಷ್ಟು ಸರಿ ಎಂದು ಕೆಲ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗುತ್ತಿದೆ. ಆದರೆ ಸರಕಾರವನ್ನು ಉಳಿಸಿಕೊಳ್ಳುವ ದೃಷ್ಟಿಯಿಂದ ಕೆಲ ತ್ಯಾಗ ಮಾಡಲೇಬೇಕು ಎಂದು ಕುಮಾರಸ್ವಾಮಿ ಶಾಸಕರಿಗೆ ಕಿವಿ ಮಾತು ಹೇಳಿದರು ಎಂದು ಗೊತ್ತಾಗಿದೆ.

ಬಿಜೆಪಿ ಆಪರೇಷನ್‌ ಕಮಲ ಮಾಡುವುದಿಲ್ಲ ಎಂದು ಹೇಳುತ್ತಿದೆಯಾದರೂ ಸರಕಾರ ರಚನೆ ಪ್ರಸ್ತಾಪವನ್ನು ಕೈ ಬಿಟ್ಟಿಲ್ಲ. ಇದರ ಜತೆಗೆ ಮಧ್ಯಂತರ ಚುನಾವಣೆಗೆ ಹೋಗುವ ಬಗ್ಗೆಯೂ ಆ ಪಕ್ಷದ ವರಿಷ್ಠರು ಚರ್ಚೆ ನಡೆಸುತ್ತಿದ್ದಾರೆ. ಈ ಯಾವುದೇ ತಂತ್ರಗಳಿಗೂ ಜೆಡಿಎಸ್‌ ಮುಖಂಡರು ಸೋಲಬಾರದು. ಯಾವುದೇ ಆಸೆ-ಆಮಿಷಗಳಿಗೆ ಒಳಗಾಗಬಾರದು. ನಿಮ್ಮೆಲ್ಲ ಕೆಲಸಗಳಿಗೆ ಸರಕಾರ ಸ್ಪಂದಿಸುತ್ತದೆ. ಎಲ್ಲರೂ ಒಟ್ಟಾಗಿದ್ದು ಮೈತ್ರಿ ಸರಕಾರವನ್ನು ಉಳಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾಗಿ ತಿಳಿದು ಬಂದಿದೆ.

ಮಾಧ್ಯಮದಿಂದ ದೂರ

ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಗೆ ಮಾಧ್ಯಮ ಪ್ರತಿನಿಧಿಗಳನ್ನು ದೂರ ಇಡಲಾಗಿತ್ತು. ಸಭೆ ನಡೆಯುವ ಪ್ರದೇಶದಿಂದ ಸುಮಾರು 200 ಮೀಟರ್‌ ವರೆಗೆ ಯಾವುದೇ ಟಿವಿ ವಾಹಿನಗಳಿಗೆ ಹಾಗೂ ಮುದ್ರಣ ಮಾಧ್ಯಮ ಪ್ರತಿನಿಧಿಗಳಿಗೆ ಪ್ರವೇಶ ನೀಡಿರಲಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ