ಆ್ಯಪ್ನಗರ

ನ.23 ರಂದು ದುಬೈನಲ್ಲಿ ವಿಶ್ವ ತುಳು ಸಮ್ಮೇಳನ

ಅಖಿಲ ಭಾರತ ತುಳು ಒಕ್ಕೂಟವು ಪ್ರಥಮ ಬಾರಿಗೆ ನ.23 ಮತ್ತು 24ರಂದು ದುಬೈನಲ್ಲಿ ವಿಶ್ವ ತುಳು ಸಮ್ಮೇಳನ ಆಯೋಜಿಸಿದೆ.

Vijaya Karnataka Web 11 Sep 2018, 10:23 pm
ಬೆಂಗಳೂರು: ಅಖಿಲ ಭಾರತ ತುಳು ಒಕ್ಕೂಟವು ಪ್ರಥಮ ಬಾರಿಗೆ ನ.23 ಮತ್ತು 24ರಂದು ದುಬೈನಲ್ಲಿ ವಿಶ್ವ ತುಳು ಸಮ್ಮೇಳನ ಆಯೋಜಿಸಿದೆ.
Vijaya Karnataka Web tulu sammelana


ಅಖಿಲ ಭಾರತ ತುಳು ಒಕ್ಕೂಟ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕೊಲ್ಲಿ ರಾಷ್ಟ್ರಗಳ ತುಳುವ ಸಂಘ, ಸಂಸ್ಥೆಗಳು ಸಾಗರೋತ್ತರ ತುಳುವರ ಸಹಯೋಗದೊಂದಿಗೆ ಈ ಸಮ್ಮೇಳನ ಆಯೋಜಿಸಲಾಗಿದೆ ಎಂದು ಮುಖ್ಯ ಸಂಘಟಕ ಸರ್ವೋತ್ತಮ ಶೆಟ್ಟಿ ದುಬೈ ಸುದ್ದಿಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.

ಸಮ್ಮೇಳನದಲ್ಲಿ ಕೊಲ್ಲಿ ರಾಷ್ಟ್ರದ ಸಮಸ್ತ ತುಳುವರನ್ನು ಒಗ್ಗೂಡಿಸಲಾಗುವುದು. ತುಳು ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳನ್ನು ನೆನಪಿಸುವ ಕಾರ್ಯಕ್ರಮಗಳೊಂದಿಗೆ ಸಮ್ಮೇಳನ ನಡೆಯಲಿದೆ. ವಿದೇಶದ ನಾನಾ ತುಳು ಸಂಘಟನೆಗಳಿಗೆ ಸಾಂಸ್ಕೃತಿಕ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ, ವಿಚಾರ ಮಂಥನ ಯಕ್ಷಗಾನ, ನಾಟಕ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರಪಂಚದಾದ್ಯಂತ ಇರುವ ನಾನಾ ತುಳು ಸಂಘಟನೆಗಳನ್ನು ಒಂದೇ ಸೂರಿನಡಿ ಸೇರಿಸಿ ಸಮ್ಮೇಳನ ನಡೆಸಲಾಗುವುದು ಎಂದರು.

ಈಗಾಗಲೇ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್‌ ರಾಜ್ಯಗಳಿಂದ ನೂರಾರು ತುಳುವ ಸಮಾಜದವರು ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನೋಂದಾಯಿಸಿಕೊಂಡಿದ್ದಾರೆ. ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆ, ಹೇಮಾವತಿ ಹೆಗಡೆ ಎರಡು ದಿನಗಳ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಉಳಿದಂತೆ ತುಳು ಭಾಷಿಕರ ಗಣ್ಯರು, ಹಿಂದು, ಮುಸ್ಲಿಂ, ಕ್ರೈಸ್ತ, ಧಾರ್ಮಿಕ ಗುರುಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ