ಆ್ಯಪ್ನಗರ

ನೆರೆ ಪೀಡಿತ ಪ್ರದೇಶಗಳ ಪರಿಶೀಲನೆಗೆ ಹೊರಡಿ: ಸಚಿವರಿಗೆ ಸಿಎಂ ಸೂಚನೆ

ಎರಡು ತಿಂಗಳು ಹಿಂದೆ ರಾಜ್ಯದಲ್ಲಿಉಂಟಾಗಿದ್ದ ಪ್ರವಾಹ ಹಾನಿಯಿಂದ ಚೇತರಿಸಿಕೊಳ್ಳುವುದಕ್ಕೆ ಮುನ್ನವೇ ಮತ್ತೊಮ್ಮೆ ರಾಜ್ಯದ ಮೇಲೆ ಜಲಾಘಾತವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ತನ್ನ ಸಂಪುಟ ಸಚಿವರಿಗೆ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸೂಚಿಸಿದ್ದಾರೆ.

Vijaya Karnataka Web 23 Oct 2019, 11:08 am
ಬೆಂಗಳೂರು: ಎರಡು ತಿಂಗಳು ಹಿಂದೆ ರಾಜ್ಯದಲ್ಲಿಉಂಟಾಗಿದ್ದ ಪ್ರವಾಹ ಹಾನಿಯಿಂದ ಚೇತರಿಸಿಕೊಳ್ಳುವುದಕ್ಕೆ ಮುನ್ನವೇ ಮತ್ತೊಮ್ಮೆ ರಾಜ್ಯದ ಮೇಲೆ ಜಲಾಘಾತವಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರು ತಕ್ಷಣ ನೆರೆ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
Vijaya Karnataka Web Hubballi


ನೆರೆ ಪೀಡಿತ ಪ್ರದೇಶಗಳ ಪರಿಶೀಲನೆಗೆ ಹೊರಡಿ: ಸಚಿವರಿಗೆ ಸಿಎಂ ಸೂಚನೆ

ಮಂಗಳವಾರ ನಡೆದ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಯಡಿಯೂರಪ್ಪ ಆದೇಶಿಸಿದ್ದು, ಬುಧವಾರ ದಿಂದಲೇ ತಲಾ ಇಬ್ಬರು ಸಚಿವರ ತಂಡ ಜಿಲ್ಲೆಗಳಿಗೆ ತೆರಳಿ ಉಸ್ತುವಾರಿ ನಡೆಸಲಿದೆ.

ಅಬ್ಬರಿಸುತ್ತಿರುವ ಹಿಂಗಾರು: ತುಂಬಿ ತುಳುಕುತ್ತಿವೆ ರಾಜ್ಯದ ಜಲಾಶಯಗಳು

ಪ್ರವಾಹ ಎದುರಿಸಲು ತೆಗೆದುಕೊಂಡ ಸಿದ್ಧತೆ ಬಗ್ಗೆ ವಿವರಣೆ ನೀಡಿದ ಕಂದಾಯ ಸಚಿವ ಆರ್‌.ಅಶೋಕ್‌, ಕಳೆದ ನಾಲ್ಕು ದಿನದಿಂದ ಸುರಿಯುತ್ತಿ ರುವ ಮಳೆಗೆ 12 ಮಂದಿ ಮೃತಪಟ್ಟಿದ್ದು, 5440 ಮನೆಗಳು ಹಾನಿಯಾಗಿವೆ. ನೂರಾರು ಸಂಖ್ಯೆಯಲ್ಲಿ ಜಾನುವಾರುಗಳು ಜೀವ ಕಳೆದುಕೊಂಡಿವೆ. ಈ ವರೆಗೆ 12 ಕಾಳಜಿ ಕೇಂದ್ರ ತೆರೆಯಲಾಗಿದ್ದು, 2176 ಮಂದಿಗೆ ಆಶ್ರಯ ಪಡೆದಿದ್ದಾರೆ ಎಂದು ತಿಳಿಸಿದರು.

ನೆರೆಯಾಘತಕ್ಕೆ ಬಲಿ, ಜೀವ ವಿಲಿವಿಲಿ

ಕೇಂದ್ರಕ್ಕೆ ಮತ್ತೆ ಮನವಿ: ಸಚಿವರ ನಾಲ್ಕು ತಂಡ ಪ್ರವಾಹ ಪೀಡಿತ ಜಿಲ್ಲೆಗಳಿಗೆ ತಕ್ಷಣವೇ ತೆರಳಲಿದ್ದು, ಮುಂದಿನ ಮೂರ್ನಾಲ್ಕು ದಿನಗಳ ಬಳಿಕ ತಮ್ಮ ವರದಿಯನ್ನು ಸರಕಾರಕ್ಕೆ ನೀಡಲಿದ್ದಾರೆ. ಬಳಿಕ ಕೇಂದ್ರಕ್ಕೆ ಹೆಚ್ಚಿನ ನೆರವು ಕೋರಿ ಬೇಡಿಕೆ ಸಲ್ಲಿಸಲಾಗುತ್ತದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ದಾವಣಗೆರೆ, ರಾಯಚೂರು, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ ಮತ್ತು ಮಂಡ್ಯ ಜಿಲ್ಲೆಗಳಲ್ಲಿಅಪಾರ ಹಾನಿಯಾಗಿದೆ.

ರಾಜ್ಯದಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಜೀವ ಬಲಿ, ಸಾವಿನ ಸಂಖ್ಯೆ 10ಕ್ಕೆ ಏರಿಕೆ

ನೆರೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿ ಅಗತ್ಯ ಮಾರ್ಗದರ್ಶನ ನೀಡಲಾಗಿದೆ. ಯಾವ ಜಿಲ್ಲೆಗಳ ಪಿಡಿ ಖಾತೆಯಲ್ಲಿ1 ಕೋಟಿ ಹಣ ಇಲ್ಲವೋ ಅಲ್ಲಿಗೆ ಪ್ರಸ್ತಾವನೆ ಪಡೆಯದೇ ಸರಕಾರ ನೇರವಾಗಿ ಆರ್‌ಟಿಜಿಎಸ್‌ ಮೂಲಕ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ಸರಕಾರ ಸ್ಪಷ್ಟಪಡಿಸಿದೆ. ಎನ್‌ಡಿಆರ್‌ಎಫ್‌ ನೆರವು: ಮುಂದಿನ ನಾಲ್ಕೈದು ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಎಸ್‌ಡಿಆರ್‌ಎಫ್‌ ಹಾಗೂ ಎನ್‌ಡಿಆರ್‌ಎಫ್‌ನ ತಲಾ 2 ತಂಡಗಳು ಬೆಳಗಾವಿ ಜಿಲ್ಲೆಯಲ್ಲಿರಕ್ಷಣಾ ಕಾರ್ಯ ನಡೆಸುತ್ತಿದ್ದು, ಗದಗಕ್ಕೆ ಒಂದು ತಂಡ ಕಳುಹಿಸಲಾಗಿದೆ ಎಂದು ಸಚಿವ ಆರ್‌.ಅಶೋಕ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ