ಇಂದು ವಿಕ ಸೂಪರ್ ಸ್ಟಾರ್ ರೈತ ಸಮಾರೋಪ, ರವೀಂದ್ರ ಕಲಾಕ್ಷೇತ್ರದಲ್ಲಿ 20 ಮಂದಿಗೆ ಪ್ರಶಸ್ತಿ ಪ್ರದಾನ
ಅನ್ನದಾತರಲ್ಲಿಆತ್ಮಸ್ಥೈರ್ಯ, ಆತ್ಮಾಭಿಮಾನ ತುಂಬಿ ಕೃಷಿ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆಗೆ ಪ್ರೋತ್ಸಾಹಿಸಲು 'ವಿಕ' ಪತ್ರಿಕೆ ಆರಂಭಿಸಿರುವ 'ವಿಕ ಸೂಪರ್ ಸ್ಟಾರ್ ರೈತ-2019' ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅಂತಿಮ ಘಟ್ಟ ತಲುಪಿದ್ದು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ಸಮಾರೋಪ ಸಮಾರಂಭ ನಡೆಯಲಿದೆ.
Vijaya Karnataka Web 28 Jan 2020, 9:40 am
ಬೆಂಗಳೂರು: ಅನ್ನದಾತರಲ್ಲಿಆತ್ಮಸ್ಥೈರ್ಯ, ಆತ್ಮಾಭಿಮಾನ ತುಂಬಿ ಕೃಷಿ ಕ್ಷೇತ್ರದಲ್ಲಿಮತ್ತಷ್ಟು ಸಾಧನೆಗೆ ಪ್ರೋತ್ಸಾಹಿಸಲು 'ವಿಜಯ ಕರ್ನಾಟಕ' ಪತ್ರಿಕೆ ಆರಂಭಿಸಿರುವ 'ವಿಕ ಸೂಪರ್ ಸ್ಟಾರ್ ರೈತ-2019' ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅಂತಿಮ ಘಟ್ಟ ತಲುಪಿದ್ದು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ಸಮಾರೋಪ ಸಮಾರಂಭ ನಡೆಯಲಿದೆ.
ದೇಸೀಯ ಮತ್ತು ವಿಶಿಷ್ಟ ತಂತ್ರಜ್ಞಾನಗಳನ್ನು ಬಳಸಿಕೊಂಡು ಬಂಪರ್ ಬೆಳೆ ಬೆಳೆದಿರುವ 20 ಮಂದಿ ಸಾಧಕ ರೈತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 'ವಿಕ ಸೂಪರ್ ಸ್ಟಾರ್ ರೈತ' ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಸಮಾರಂಭ ಆರಂಭವಾಗಲಿದ್ದು, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್.ರಾಜೇಂದ್ರ ಪ್ರಸಾದ್ ಮತ್ತು ಕೃಷಿ ಇಲಾಖೆಯ ನಿರ್ದೇಶಕ ಬಿ.ವೈ.ಶ್ರೀನಿವಾಸ್ ಅವರು ಕೃಷಿ ಕ್ಷೇತ್ರದಲ್ಲಿಆಗಿರುವ ಬದಲಾವಣೆ, ತಂತ್ರಜ್ಞಾನ ಹಾಗೂ ಹೊಸ ಪದ್ಧತಿಗಳ ಕುರಿತು ರೈತರಿಗೆ ತಿಳಿಸಿಕೊಡಲಿದ್ದಾರೆ.
ಮೊದಲ ಹಂತದಲ್ಲಿ ಜಿಲ್ಲಾ ಮಟ್ಟದಲ್ಲಿ ಸೂಪರ್ ಸ್ಟಾರ್ ರೈತ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಅದರಂತೆ ರಾಜ್ಯಾದ್ಯಂತ 25 ಕಾರ್ಯಕ್ರಮಗಳು ನಡೆದು ಐದರಿಂದ ಆರು ಮಂದಿ ಸಾಧಕ ರೈತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಇವರಲ್ಲಿಅತ್ಯುತ್ತಮ ಸಾಧನೆ ಮಾಡಿರುವ 20 ಮಂದಿ ರೈತರನ್ನು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಗಿದೆ. ಈ ಕೃಷಿ ಸಾಧಕರಿಗೆ ಸಿಎಂ ಯಡಿಯೂರಪ್ಪ ಅವರು ಸೂಪರ್ ಸ್ಟಾರ್ ರೈತ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ.
ದೇಸೀಯ ಮತ್ತು ವಿಶಿಷ್ಟ ತಂತ್ರಜ್ಞಾನಗಳನ್ನು ಬಳಸಿಕೊಂಡು ಬಂಪರ್ ಬೆಳೆ ಬೆಳೆದಿರುವ 20 ಮಂದಿ ಸಾಧಕ ರೈತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 'ವಿಕ ಸೂಪರ್ ಸ್ಟಾರ್ ರೈತ' ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಸಮಾರಂಭ ಆರಂಭವಾಗಲಿದ್ದು, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್.ರಾಜೇಂದ್ರ ಪ್ರಸಾದ್ ಮತ್ತು ಕೃಷಿ ಇಲಾಖೆಯ ನಿರ್ದೇಶಕ ಬಿ.ವೈ.ಶ್ರೀನಿವಾಸ್ ಅವರು ಕೃಷಿ ಕ್ಷೇತ್ರದಲ್ಲಿಆಗಿರುವ ಬದಲಾವಣೆ, ತಂತ್ರಜ್ಞಾನ ಹಾಗೂ ಹೊಸ ಪದ್ಧತಿಗಳ ಕುರಿತು ರೈತರಿಗೆ ತಿಳಿಸಿಕೊಡಲಿದ್ದಾರೆ.
ಮೊದಲ ಹಂತದಲ್ಲಿ ಜಿಲ್ಲಾ ಮಟ್ಟದಲ್ಲಿ ಸೂಪರ್ ಸ್ಟಾರ್ ರೈತ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಅದರಂತೆ ರಾಜ್ಯಾದ್ಯಂತ 25 ಕಾರ್ಯಕ್ರಮಗಳು ನಡೆದು ಐದರಿಂದ ಆರು ಮಂದಿ ಸಾಧಕ ರೈತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಇವರಲ್ಲಿಅತ್ಯುತ್ತಮ ಸಾಧನೆ ಮಾಡಿರುವ 20 ಮಂದಿ ರೈತರನ್ನು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಗಿದೆ. ಈ ಕೃಷಿ ಸಾಧಕರಿಗೆ ಸಿಎಂ ಯಡಿಯೂರಪ್ಪ ಅವರು ಸೂಪರ್ ಸ್ಟಾರ್ ರೈತ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ.