ಆ್ಯಪ್ನಗರ

ಇ-ಮೇಲ್‌ ಮೂಲಕ ಮತದಾನ: ಆಯೋಗಕ್ಕೆ ನೋಟಿಸ್‌ ಜಾರಿ

ಸಾರ್ವತ್ರಿಕ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಬೇರೆ ಊರಿನಲ್ಲಿ ಇದ್ದುಕೊಂಡೇ ಇ-ಮೇಲ್‌ ಮೂಲಕ ಮತ ಹಾಕಲು ಅವಕಾಶ ಕಲ್ಪಿಸಲು ಒಪ್ಪಿಗೆ ನೀಡುವ ಕುರಿತು ಕೇಂದ್ರ ಚುನಾವಣೆ ಆಯೋಗ ಹಾಗೂ ಕೇಂದ್ರ ಕಾನೂನು ಸಚಿವಾಲಯಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

Vijaya Karnataka 5 May 2018, 7:26 am
ಬೆಂಗಳೂರು: ಸಾರ್ವತ್ರಿಕ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಬೇರೆ ಊರಿನಲ್ಲಿ ಇದ್ದುಕೊಂಡೇ ಇ-ಮೇಲ್‌ ಮೂಲಕ ಮತ ಹಾಕಲು ಅವಕಾಶ ಕಲ್ಪಿಸಲು ಒಪ್ಪಿಗೆ ನೀಡುವ ಕುರಿತು ಕೇಂದ್ರ ಚುನಾವಣೆ ಆಯೋಗ ಹಾಗೂ ಕೇಂದ್ರ ಕಾನೂನು ಸಚಿವಾಲಯಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.
Vijaya Karnataka Web election


ಬೆಂಗಳೂರಿನ ಜಯನಗರ ನಿವಾಸಿ ಎಂ.ನರಸಿಂಹಮೂರ್ತಿ ಅವರು ದಾಖಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ.ವೀರಪ್ಪ ಹಾಗೂ ನ್ಯಾ. ಎಸ್‌.ಸುನೀಲ್‌ದತ್‌ ಯಾದವ್‌ ಅವರಿದ್ದ ರಜಾ ಕಾಲದ ವಿಭಾಗೀಯ ಪೀಠವು ಶುಕ್ರವಾರ ಈ ಆದೇಶ ಪ್ರಕಟಿಸಿದೆ.

''ಸದ್ಯ ಸರಕಾರಿ ಕೆಲಸದಲ್ಲಿರುವವರು ಅಂಚೆ ಮೂಲಕ ಮತ ಚಲಾಯಿಸಬಹುದು. ಈ ಅವಕಾಶ ಮತಕ್ಷೇತ್ರದಿಂದ ದೂರವಿರುವವವರಿಗೆ ಇಲ್ಲ. ಇದರಿಂದ ಅಂತಹವರ ಹಕ್ಕು ಚಲಾಯಿಸಲು ಸಾಧ್ಯವಾಗುತ್ತಿಲ್ಲ. ಕ್ಷೇತ್ರದಿಂದ ಹೊರಗಿರುವವರು ಚುನಾವಣೆಯಲ್ಲಿ ಪಾಲ್ಗೊಳ್ಳಲು ಇ-ಮೇಲ್‌ ಮೂಲಕ ಮತ ಹಾಕಲು ಆಯೋಗ ಮುಂದಾಗಲಿ,'' ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ