ಆ್ಯಪ್ನಗರ

ವಿವಿಪ್ಯಾಟ್‌ ಎಣಿಕೆ :ಮಧ್ಯಂತರ ಆದೇಶಕ್ಕೆ ನಕಾರ

ಇವಿಎಂ ಯಂತ್ರದಲ್ಲಿ ಮತ ಎಣಿಕೆಗೆ ಮೊದಲು ವಿವಿಪ್ಯಾಟ್‌ ಸ್ಲಿಪ್‌ಗಳ ಎಣಿಕೆ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ಮೇಲೆ ಮಧ್ಯಂತರ ಆದೇಶ ಹೊರಡಿಸಲು ಹೈಕೋರ್ಟ್‌ ಬುಧವಾರ ನಿರಾಕರಿಸಿತು.

Vijaya Karnataka 23 May 2019, 5:00 am
ಬೆಂಗಳೂರು : ಇವಿಎಂ ಯಂತ್ರದಲ್ಲಿ ಮತ ಎಣಿಕೆಗೆ ಮೊದಲು ವಿವಿಪ್ಯಾಟ್‌ ಸ್ಲಿಪ್‌ಗಳ ಎಣಿಕೆ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ಮೇಲೆ ಮಧ್ಯಂತರ ಆದೇಶ ಹೊರಡಿಸಲು ಹೈಕೋರ್ಟ್‌ ಬುಧವಾರ ನಿರಾಕರಿಸಿತು.
Vijaya Karnataka Web vvpat counting court reject
ವಿವಿಪ್ಯಾಟ್‌ ಎಣಿಕೆ :ಮಧ್ಯಂತರ ಆದೇಶಕ್ಕೆ ನಕಾರ


ನ್ಯಾಯಮೂರ್ತಿಗಳಾದ ಎಸ್‌.ಸುಜಾತ ಮತ್ತು ಎಸ್‌.ಜಿ ಪಂಡಿತ್‌ ಅವರಿದ್ದ ಬೇಸಿಗೆ ರಜಾಕಾಲದ ಪೀಠ ವಿಚಾರಣೆ ನಡೆಸಿ, ''ಗುರುವಾರವೇ ಎಣಿಕೆ ಕಾರ್ಯ ನಡೆಯಲಿದ್ದು, ಇಂತಹ ಸಂದರ್ಭದಲ್ಲಿ ಯಾವುದೇ ಆದೇಶ ನೀಡಲಾಗದು. ಈ ಕುರಿತಂತೆ ಸುಪ್ರೀಂ ಕೋರ್ಟ್‌ ಕೂಡ ಹಲವು ಆದೇಶಗಳನ್ನು ನೀಡಿದ್ದು ಮೇ 21ರಂದು ಒಂದು ಆದೇಶವನ್ನು ಹೊರಡಿಸಿದೆ'' ಎಂದು ತಿಳಿಸಿತು.

ಕೇಂದ್ರ ಚುನಾವಣಾ ಆಯೋಗದ ಪ್ರಕಾರ ಇವಿಎಂ ಯಂತ್ರಗಳಲ್ಲಿನ ಎಣಿಕೆ ಕಾರ್ಯ ಮುಕ್ತಾಯದ ಬಳಿಕ, ಪ್ರತಿಯೊಂದು ವಿಧಾನಸಭೆ ಕ್ಷೇತ್ರದ ಐದು ಮತಗಟ್ಟೆಗಳ ವಿವಿಪ್ಯಾಟ್‌ ಸ್ಲಿಪ್‌ಗಳನ್ನು ಎಣಿಕೆ ಮಾಡಲಾಗುತ್ತದೆ.

ಪೀಪಲ್ಸ್‌ ಯೂನಿಯನ್‌ ಫಾರ್‌ ಸಿವಿಲ್‌ ಲಿಬರ್ಟೀಸ್‌ ಕರ್ನಾಟಕ ಮತ್ತು ದಕ್ಷ ಫೌಂಡೇಷನ್‌ಗಳು ಚುನಾವಣಾ ಆಯೋಗದ ನಿರ್ದೇಶನಗಳನ್ನು ಪ್ರಶ್ನಿಸಿ ಎರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿಯನ್ನು ಸಲ್ಲಿಸಿದ್ದವು. ಈ ಕುರಿತು ತುರ್ತು ವಿಚಾರಣೆಯನ್ನು ಬುಧವಾರ ಮಧ್ಯಾಹ್ನಕ್ಕೆ ನಿಗದಿಪಡಿಸಲಾಗಿತ್ತು.

''ಮುಂಚಿತವಾಗಿಯೇ ವಿವಿಪ್ಯಾಟ್‌ ಸ್ಲಿಪ್‌ಗಳನ್ನು ಎಣಿಸುವುದರಿಂದ ಯಾರಿಗೂ ಸಮಸ್ಯೆಯಾಗುವುದಿಲ್ಲ. ಅಲ್ಲದೇ, ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ಪ್ರಕ್ರಿಯೆಗೆ ನೆರವಾಗುತ್ತವೆ. ಕೊನೆ ಹಂತದಲ್ಲಿ ಮಾಡಿದರೆ ವಿವಿಪ್ಯಾಟ್‌ ಮಿಸ್‌ಮ್ಯಾಚ್‌ ಆದರೆ ಗೊಂದಲಗಳು ಉಂಟಾಗುತ್ತವೆ. ಅಂತಹ ಸಂದರ್ಭಗಳನ್ನು ಹೇಗೆ ನಿಭಾಯಿಸಬೇಕು ಎಂಬ ಪರಿಹಾರಗಳನ್ನು ಆಯೋಗ ಒದಗಿಸಿಲ್ಲ'' ಎಂದು ಅರ್ಜಿದಾರರ ಪರ ಮಾಜಿ ಅಡ್ವೋಕೇಟ್‌ ಜನರಲ್‌ ಫ್ರೋ. ರವಿವರ್ಮಾ ಕುಮಾರ್‌ ವಾದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ