ಆ್ಯಪ್ನಗರ

ಕೊಪ್ಪಳ: ಧ್ವಂಸಗೊಂಡ ವ್ಯಾಸರಾಯರ ವೃಂದಾವನ ಪುನರ್ ನಿರ್ಮಾಣ

ಗಂಗಾವತಿ ತಾಲೂಕಿನ ಆನೆಗೊಂದಿ ಬಳಿಯ ನವವೃಂದಾವನದ ಶ್ರೀ ವ್ಯಾಸರಾಜರ ವೃಂದಾವನ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಇದಕ್ಕೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

Vijaya Karnataka Web 19 Jul 2019, 6:24 pm
ಕೊಪ್ಪಳ: ಗಂಗಾವತಿ ತಾಲೂಕಿನ ಆನೆಗೊಂದಿ ಬಳಿಯ ನವವೃಂದಾವನದ ವ್ಯಾಸರಾಯರ ವೃಂದಾವನ ಯತಿಗಳ ನೇತೃತ್ವದಲ್ಲಿ ಶುಕ್ರವಾರ ಪುನರ್ ನಿರ್ಮಾಣ ಮಾಡಲಾಗಿದೆ..
Vijaya Karnataka Web ವೃಂದಾವನ
ವೃಂದಾವನ


ದುಷ್ಕರ್ಮಿಗಳು ವ್ಯಾಸರಾಜರ ವೃಂದಾವನ ಗುರುವಾರ ಬೆಳಗಿನ ಜಾವ ಧ್ವಂಸಗೊಳಿಸಿದ ಹಿನ್ನಲೆಯಲ್ಲಿ ಶುಕ್ರವಾರ ನೂರಾರು ಭಕ್ತರ ಶ್ರಮದಾನದಿಂದ ಪುನರ್ ನಿರ್ಮಾಣ ಮಾಡಲಾಯಿತು.

ಮುಂಬಯಿ ಮೂಲದ ವಾಸ್ತುಶಾಸ್ತ್ರಜ್ಞ ನೀರಜ್ ಕುಲಕರ್ಣಿ, ತಮಿಳುನಾಡು ಮೂಲದ ಶಿಲ್ಪಿಗಳ ನೇತೃತ್ವದಲ್ಲಿ ನಾನಾ ಕಡೆಯಿಂದ ಬಂದಿದ್ದ ಭಕ್ತರು ಕೈಜೋಡಿಸಿದರು.

ಮಠಾಧೀಶರು


ಮಂತ್ರ ಪಠಣ, ವೇದಘೋಷಗಳ ಮಧ್ಯೆ ಪುನರ್ ನಿರ್ಮಾಣ ಕಾರ್ಯ ನಡೆಯಿತು. ಪುನರ್ ನಿರ್ಮಾಣ ಮುಗಿಯುತ್ತಿದ್ದಂತೆ ಭಕ್ತರು ಚಪ್ಪಾಳೆ ತಟ್ಟಿ ಸಂಭ್ರಮಿಸಿದರು.

ಪೇಜಾವರ ಮಠದ ವಿಶ್ವೇಶ್ವರ ತೀರ್ಥರು,ಮಂತ್ರಾಲಯ ಮಠದ ಸುಭುದೇಂದ್ರ ತೀರ್ಥರು, ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥರು, ಉತ್ತರಾದಿಮಠದ ಸತ್ಯಾತ್ಮತೀರ್ಥರು, ತಬ್ಬಿಹಳ್ಳಿ ಮಧ್ವಾಚಾರ್ಯ ಪೀಠದ ವಿದ್ಯಾಸಾಗರ ಮಾಧ್ವ ತೀರ್ಥರು ನೇತೃತ್ವ ವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ