ಆ್ಯಪ್ನಗರ

11 ಗಂಟೆಗೆ ಏನಾಗುತ್ತೆ ನೀವೇ ನೋಡಿ: ರಾಜ್ಯ ಕೈ ನಾಯಕರಿಗೆ ಅತೃಪ್ತರ ಸವಾಲು

ಸುಪ್ರೀಂ ತೀರ್ಪಿನ ಬಳಿಕ ಅತೃಪ್ತ ಶಾಸಕರು ಬೆಂಗಳೂರಿಗೆ ವಾಪಸ್ಸಾಗುವುದರ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.

Vijaya Karnataka Web 11 Jul 2019, 9:50 am
ಬೆಂಗಳೂರು: ಸುಪ್ರೀಂನಲ್ಲಿಂದು ಅತೃಪ್ತ ಶಾಸಕರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದ್ದು, ತೀರ್ಪಿನ ಬಳಿಕ ಅತೃಪ್ತರು ಮುಂದಿನ ನಡೆಯ ಬಗ್ಗೆ ನಿರ್ಧರಿಸುವ ಸಾಧ್ಯತೆಗಳಿವೆ.
Vijaya Karnataka Web Supreme Court


ಶಾಸಕ ಎಸ್‌.ಟಿ ಸೋಮಶೇಖರ್ ಮನವೊಲಿಸಲು ಅವರ ನಿವಾಸಕ್ಕೆ ಸಚಿವ ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದರೂ, ಸೋಮಶೇಖರ್‌ ಭೇಟಿ ಸಾಧ್ಯವಾಗಿಲ್ಲ.

ತೀರ್ಪು ಬಂದ ಬಳಿಕ ಅತೃಪ್ತರು ಮುಂದಿನ ನಿರ್ಧಾರ ತಳೆಯಲಿದ್ದು, ಇಂದು 11 ಗಂಟೆಗೆ ಏನಾಗತ್ತೆ ಎಂದು ನೀವೇ ನೋಡಿ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಬುಧವಾರ ಸವಾಲು ಹಾಕಿದ್ದಾರೆ.

ಭೈರತಿ ಬಸವರಾಜ್ ಮತ್ತು ಎಸ್ ಟಿ ಸೋಮಶೇಖರ್ ಅವರು ಈ ಸಂದೇಶ ರವಾನಿಸಿದ್ದಾರೆ ಎನ್ನಲಾಗುತ್ತಿದೆ.

ಇನ್ನಿಬ್ಬರು ಭಿನ್ನಮತೀಯ ಶಾಸಕರಾದ ಡಾ. ಕೆ ಸುಧಾಕರ್ ಮತ್ತು ಮತ್ತು ಎಂಟಿಬಿ ನಾಗರಾಜ್ ಅವರನ್ನು ಭೇಟಿ ಮಾಡಲೂ ಸಚಿವ ಡಿಕೆಶಿ ಪ್ರಯತ್ನಿಸುತ್ತಿದ್ದಾರೆ.

ರಾಜಕಾರಣವೇ ಬೇಸರವಾಗಿದೆ. ರಾಜಕೀಯದಿಂದ ನಿವೃತ್ತಿಯಾಗಬೇಕೆಂದು ಬಯಸಿದ್ದೇನೆ ಎಂದು ಶಾಸಕ ಎಂಟಿಬಿ ನಾಗರಾಜ್‌ ಟಿವಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.


ರಾಜೀನಾಮೆ‌ ನೀಡಿರುವ ಶಾಸಕರು‌ ಮಾತ್ರವಲ್ಲ, ಕಾಂಗ್ರೆಸ್‌ನ ಎಲ್ಲ 78 ಶಾಸಕರೂ ನನಗೆ ಆಪ್ತರಾಗಿದ್ದಾರೆ. ಅವರು ನಮ್ಮ ಪಕ್ಷದ ಬಹಳಷ್ಟು ನಾಯಕರಿಗೂ ಆಪ್ತರಾಗಿದ್ದಾರೆ. ಮಾಧ್ಯಮಗಳು ಸೆಲೆಕ್ಟಿವ್ ಆಗಿ ಈ ಶಾಸಕರು ನನ್ನ ಆಪ್ತರು ಎಂದು ಹೇಳುತ್ತಿರುವುದು ಸರಿ ಅಲ್ಲ. ಇದರಿಂದ ನನ್ನ ಮನಸ್ಸಿಗೆ ನೋವಾಗಿದೆ.

ಅತೃಪ್ತ ಶಾಸಕರ ಬಿಜೆಪಿ ಸೇರ್ಪಡೆ ಸುಗಮವಲ್ಲ, ಗೋಪಾಲಯ್ಯ ಸೇರ್ಪಡೆಗೆ ಕಾರ್ಯಕರ್ತರ ವಿರೋಧ

ಯಾವುದೇ ಕಾರಣವಿಲ್ಲದೇ, ಉದ್ದೇಶ ಪೂರ್ವಕವಾಗಿ ಸ್ಪೀಕರ್ ರಮೇಶ್ ಕುಮಾರ್ ನಮ್ಮ ರಾಜೀನಾಮೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಅನಗತ್ಯವಾಗಿ ವಿಳಂಬ ಮಾಡುತ್ತಿದ್ದಾರೆ. ರಾಜೀನಾಮೆ ಪಡೆಯುವಂತೆ ಸ್ಪೀಕರ್‌ಗೆ ಸೂಚಿಸಿ ಎಂದು ಅತೃಪ್ತ 10 ಶಾಸಕರು ಸುಪ್ರೀಂಕೋರ್ಟ್‌ನಲ್ಲಿ ಬುಧವಾರ ಅರ್ಜಿ ಸಲ್ಲಿಸಿದ್ದಾರೆ. ಸರಿಯಾಗಿ 10.30ಗೆ ಅರ್ಜಿ ವಿಚಾರಣೆ ಆರಂಭಗೊಳ್ಳಲಿದೆ. ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಕಿ ಅತೃಪ್ತರ ಪರ ವಾದ ಮಂಡಿಸಲಿದ್ದಾರೆ.

ನಿಮ್ಮಿಂದಲೇ ಎಲ್ಲ ಹಾಳಾಗ್ತಿರೋದು: ಮಾಧ್ಯಮಗಳ ಮೇಲೆ ಸಿದ್ದರಾಮಯ್ಯ ಕಿಡಿ

ಅಭಿಷೇಕ್ ಮನು ಸಿಂಘ್ವಿ ಕಾಂಗ್ರೆಸ್ ಪರ ವಾದ ಮಂಡಿಸಲಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ