ಆ್ಯಪ್ನಗರ

ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಆಯ್ಕೆ ಚರ್ಚೆ: ಕಾಂಗ್ರೆಸ್ v/s ಬಿಜೆಪಿ ಆರೋಪ ಪ್ರತ್ಯಾರೋಪ

ಬಿಜೆಪಿಯಿಂದ ಆದಿವಾಸಿ ಮಹಿಳೆ ದ್ರೌಪತಿ ಮುರ್ಮ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಈ ಕುರಿತಾಗಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾಡಿರುವ ಟ್ವೀಟ್ ಇದೀಗ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ವಾಗ್ದಾದಕ್ಕೆ ಕಾರಣವಾಗಿದೆ.

Vijaya Karnataka Web 23 Jun 2022, 9:46 pm
ಬೆಂಗಳೂರು: ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪ ತೀವ್ರಗೊಂಡಿದೆ. ಬಿಜೆಪಿಯಿಂದ ಆದಿವಾಸಿ ಮಹಿಳೆ ದ್ರೌಪತಿ ಮುರ್ಮ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಈ ಕುರಿತಾಗಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾಡಿರುವ ಟ್ವೀಟ್ ಇದೀಗ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ವಾಗ್ದಾದಕ್ಕೆ ಕಾರಣವಾಗಿದೆ.
Vijaya Karnataka Web ಕಾಂಗ್ರೆಸ್‌, ಬಿಜೆಪಿ
ಕಾಂಗ್ರೆಸ್‌, ಬಿಜೆಪಿ


ಕೋಟಾ ಶ್ರೀನಿವಾಸ್ ಪೂಜಾರಿ ಏನಂದಿದ್ರು?

ಮುಸ್ಲಿಂ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದು ನಾವೇ,ದಲಿತ ವ್ಯಕ್ತಿಯನ್ನು ರಾಷ್ಟ್ರಪತಿ ಮಾಡಿದ್ದೂ ನಾವೇ, ಇಂದು ಮಹಿಳೆ ಅದೂ ಆದಿವಾಸಿ ಬುಡಕಟ್ಟು ಜನಾಂಗದ ಮಹಿಳೆಯನ್ನು ರಾಷ್ಟ್ರಪತಿ ಮಾಡುವುದು ನಾವೇ. ಏಕೆಂದರೆ ನಾವು ಜಾತಿವಾದಿಗಳಲ್ಲಾ- ರಾಷ್ಟ್ರವಾದಿಗಳು. (ವಾಟ್ಸಪ್‌‌ನಲ್ಲಿ ಬಂದಿದ್ದು) ಎಂದು ಟ್ವೀಟ್ ಮಾಡಿದ್ದರು.

Presidential Election: ಬಿಜೆಡಿ, ವೈಎಸ್‌ಆರ್‌ಸಿಪಿ ಬೆಂಬಲ: ದ್ರೌಪದಿ ಮುರ್ಮು ಸುಲಭ ಜಯ ಖಚಿತ

ಕಾಂಗ್ರೆಸ್‌ ವಾದವೇನು?

ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ರಾಷ್ಟ್ರದ ಮೊದಲ ಮುಸ್ಲಿಂ ರಾಷ್ಟ್ರಪತಿ ಕಾಂಗ್ರೆಸ್‌ನ ಕೊಡುಗೆ! ರಾಷ್ಟ್ರದ ಮೊದಲ ಸಿಖ್ ರಾಷ್ಟ್ರಪತಿ ಕಾಂಗ್ರೆಸ್‌ನ ಕೊಡುಗೆ! ರಾಷ್ಟ್ರದ ಮೊದಲ ದಲಿತ ರಾಷ್ಟ್ರಪತಿ ಕಾಂಗ್ರೆಸ್‌ನ ಕೊಡುಗೆ! ಅಷ್ಟೆ ಏಕೆ, ಮೊದಲ‌ ಮಹಿಳಾ ರಾಷ್ಟ್ರಪತಿಯ ಕೊಡುಗೆಯೂ ಕಾಂಗ್ರೆಸ್‌ನದ್ದೆ! ಆದರೆ ಕಾಂಗ್ರೆಸ್ ಯಾವತ್ತೂ ಇದನ್ನು ಪ್ರಚಾರಕ್ಕೆ ಬಳಸಲಿಲ್ಲ. ಇದೇ ವ್ಯತ್ಯಾಸ ಎಂದಿದ್ದಾರೆ.



ಬಿಜೆಪಿಯವರೆಲ್ಲರೂ ವಾಟ್ಸಾಪ್ ಯೂನಿವರ್ಸಿಟಿಯ ವಿಧೇಯ ವಿದ್ಯಾರ್ಥಿಗಳು, ಅದೇ ಅವರ ಜ್ಞಾನದ ಮೂಲ! ಅವರೇ, ವಾಟ್ಸಾಪ್ ಬಿಟ್ಟು ಪುಸ್ತಕಗಳನ್ನು ಓದಿ ಜ್ಞಾನಾರ್ಜನೆ ಮಾಡಿಕೊಳ್ಳಿ, ನೀವು ಮೊದಲಲ್ಲ, ಇವರೆಲ್ಲ ಮೊದಲೇ ರಾಷ್ಟ್ರಪತಿಗಳಾಗಿದ್ದಾರೆ. ಜಾಕಿರ್ ಹುಸೇನ್ (ಮುಸ್ಲಿಂ), ಆರ್.ಕೆ ನಾರಾಯಣ್ (ದಲಿತ), ಪ್ರತಿಭಾ ಪಾಟೀಲ್ (ಮಹಿಳೆ) ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಬಿಜೆಪಿ ತಿರುಗೇಟು

ಕಾಂಗ್ರೆಸ್ ಮುಖಂಡರ ವಾದಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಸಿದ್ದರಾಮಯ್ಯನವರೇ ಗಾಂಧಿ‌ ಕುಟುಂಬದ ತುತ್ತಿನ ಸೇವಕರಾದ ನಿಮಗೆ ಅವರ ಓಲೈಕೆ ಮಾಡುವುದೇ ಬದುಕಿನ ಭಾಗವಾಗಿದೆ. ಒಬ್ಬ ಆದಿವಾಸಿ ಮಹಿಳೆ ರಾಷ್ಟ್ರಪತಿಯಾದರೆ ನಿಮಗೆ ಸಹಿಸಿಕೊಳ್ಳಲು ಕಷ್ಟವೇಕೆ?. ನಿಮಗೆ ದೇವರಾಜ್ ಅರಸು ಅವರ ರೀತಿ ಕೆಲಸ ಮಾಡಲು ಸಾಧ್ಯವೇ? ಮುಖ್ಯಮಂತ್ರಿಯಾಗಿ ನೀವು ಮಾಡಿದ್ದು ಜಾತಿ ರಾಜಕಾರಣ ಮಾತ್ರವಲ್ಲವೇ? ಎಂದು ಪ್ರಶ್ನಿಸಿದೆ.

Draupadi Murmu: ಎನ್‌ಡಿಎ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ದ್ರೌಪದಿ ಮುರ್ಮು ಬಗ್ಗೆ ನಿಮಗೆ ಗೊತ್ತಿರದ ಕೆಲವು ಸಂಗತಿಗಳು

ಒಟ್ಟಿನಲ್ಲಿ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆದಿವಾಸಿ ಮಹಿಳೆಯನ್ನು ಎನ್‌ಡಿಎ ಆಯ್ಕೆ ಮಾಡಿರುವುದು ಚರ್ಚೆಯನ್ನು ಹುಟ್ಟುಹಾಕಿದೆ. ಅದರಲ್ಲೂ ಕೋಟಾ ಶ್ರೀನಿವಾಸ್ ಪೂಜಾರಿ ಟ್ವೀಟ್ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಟ್ವೀಟ್ ವಾರ್‌ಗೆ ಕಾರಣವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ