ಆ್ಯಪ್ನಗರ

ಬರ ಪೀಡಿತ ತಾಲೂಕುಗಳಿಗೆ ಟ್ಯಾಂಕರ್‌ ಮೂಲಕ ನೀರು, 29 ಕೋಟಿ ರೂ. ಬಿಡುಗಡೆ

ಕಳೆದ ಹಿಂಗಾರು ಹಂಗಾಮಿನಲ್ಲಿ ಬರಪೀಡಿತ ಎಂದು ಘೋಷಣೆಯಾಗಿದ್ದ 49 ತಾಲ್ಲೂಕುಗಳಿಗೆ ಮಾತ್ರ ತುರ್ತು ಕುಡಿಯುವ ನೀರಿಗಾಗಿ ನಿಗದಿಯಾದ 50 ಕೋಟಿ ರೂ. ಪೈಕಿ 29.50 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

Vijaya Karnataka 14 Apr 2020, 8:37 pm
ಬೆಂಗಳೂರು: ರಾಜ್ಯದ ಬರಪೀಡಿತ ತಾಲೂಕುಗಳ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಪೂರೈಕೆಗೆ ರಾಜ್ಯ ಸರಕಾರ 29.50 ಕೋಟಿ ರೂ. ಬಿಡುಗಡೆ ಮಾಡಿದೆ.
Vijaya Karnataka Web Tanker Water


ರಾಜ್ಯಾದ್ಯಂತ ಹಲವೆಡೆ ಕುಡಿಯುವ ನೀರಿನ ಹಾಹಾಕಾರ ಎದುರಾಗಿದೆ. ಆದರೆ, ಕಳೆದ ಹಿಂಗಾರು ಹಂಗಾಮಿನಲ್ಲಿ ಬರಪೀಡಿತ ಎಂದು ಘೋಷಣೆಯಾಗಿದ್ದ 49 ತಾಲ್ಲೂಕುಗಳಿಗೆ ಮಾತ್ರ ತುರ್ತು ಕುಡಿಯುವ ನೀರಿಗಾಗಿ ನಿಗದಿಯಾದ 50 ಕೋಟಿ ರೂ. ಪೈಕಿ 29.50 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಖಾತೆಗೆ ಹಣ ಬಿಡುಗಡೆ ಮಾಡಲಾಗಿದ್ದು, ಬರಪೀಡಿತ ತಾಲೂಕುಗಳಲ್ಲಿ ತೀವ್ರ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಪೂರೈಕೆಗೆ ಸೂಚಿಸಲಾಗಿದೆ.

ಬರಪೀಡಿತ ತಾಲೂಕುಗಳಿಗೆ ತಲಾ 1 ಕೋಟಿ ರೂ. ಹಾಗೂ ಉಳಿದ ತಾಲೂಕುಗಳಿಗೆ ಪೌರಸಂಸ್ಥೆಗಳನ್ನು ಒಳಗೊಂಡು ತಲಾ 50 ಲಕ್ಷ ರೂ. ಗಳನ್ನು ಕುಡಿಯುವ ನೀರು ಪೂರೈಕೆಗಾಗಿ ಬಿಡುಗಡೆ ಮಾಡಲು ಕಳೆದ ಸಚಿವ ಸಂಪುಟ ಸಭೆ ನಿರ್ಧಾರ ಕೈಗೊಂಡಿತ್ತು. ಸದ್ಯ ಬರಪೀಡಿತ ತಾಲೂಕುಗಳಿಗೆ ಮಾತ್ರ ಭಾಗಶಃ ಹಣ ಬಿಡುಗಡೆ ಮಾಡಲಾಗಿದ್ದು, ಉಳಿದ ತಾಲೂಕುಗಳಿಗೆ ಇನ್ನೂ ಹಣ ಬಿಡುಗಡೆ ಆಗಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ