ಆ್ಯಪ್ನಗರ

‘ಡ್ರಗ್ಸ್ ಜಾಲದ ಬಗ್ಗೆ ಸ್ವಯಂ ಹೇಳಿಕೆ ಕೊಟ್ಟವರು ಮಹತ್ವದ ಸುಳಿವು ನೀಡಿದ್ದಾರೆ’ : ಬಸವರಾಜ ಬೊಮ್ಮಾಯಿ

ಕೆಲವರು ಸಿನಿಮಾ ನಟರು ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾಗಿದ್ದಾರೆ ಅನ್ನೋ ಮಾಹಿತಿ ಇದೆ. ಈ ಕುರಿತು ಸ್ವಯಂ ಹೇಳಿಕೆ ಕೊಟ್ಟವರು ಮಹತ್ವದ ಸುಳಿವನ್ನು ನೀಡಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

Vijaya Karnataka Web 3 Sep 2020, 11:45 am
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲದಿನಗಳಿಂದ ಗಾಂಜಾ ಕುರಿತಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಸಿನಿಮಾ ನಟ ನಟಿಯರು, ರಾಜಕಾರಣಿಗಳ ಮಕ್ಕಳು ಸೇರಿದಂತೆ ಅನೇಕರ ಮಧ್ಯೆ ಆರೋಪಗಳ ಸುಳಿ ಸುತ್ತುತ್ತಾ ಇದೆ.
Vijaya Karnataka Web Basavaraj Bommai


ಈ ಮಧ್ಯೆ ಸರ್ಕಾರ ಕೂಡ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸರು ಇದರ ಜಾಲವನ್ನು ಬೇಧಿಸೋಕೆ ಚಕ್ರವ್ಯೂಹ ರಚಿಸಿದ್ದಾರೆ. ಈ ನಡುವೆ ಸತತವಾಗಿ ನಾವು ಡ್ರಗ್ಸ್ ಜಾಲದ ಮೇಲೆ ದಾಳಿ ಮಾಡುತ್ತಿದ್ದೇವೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು, ಸರ್ಕಾರದ ನಡೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕಿಡಿ

ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಂತ್ರಜ್ಞಾನದ ಮೂಲಕ ಎಲ್ಲೆಲ್ಲಿ ಡ್ರಗ್ಸ್ ಸಾಗಾಟ ಆಗುತ್ತಿದೆ ಎಂಬುವುದನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಕೆಲಸ ಮಾಡ್ತಿದ್ದೇವೆ. ಕೆಲವರು ಸಿನಿಮಾ ನಟರು ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾಗಿದ್ದಾರೆ ಅನ್ನೋ ಮಾಹಿತಿ ಇದೆ. ಈ ಕುರಿತು ಸ್ವಯಂ ಹೇಳಿಕೆ ಕೊಟ್ಟವರು ಮಹತ್ವದ ಸುಳಿವನ್ನು ನೀಡಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ಬಿಜೆಪಿ ತನ್ನ ಶಕ್ತಿ, ಶೌರ್ಯ ಮತ್ತು ಸತ್ವದಿಂದ ರಾಜ್ಯದಲ್ಲಿ ಅಧಿಕಾರ ಪಡೆದಿದೆ: ಸಿಟಿ ರವಿ

ಇನ್ನು ಕೇವಲ ಸಿಸಿಬಿ ಮಾತ್ರವಲ್ಲ ಎಲ್ಲ ಸ್ಟೇಷನ್ ವ್ಯಾಪ್ತಿಯಲ್ಲಿ ಕ್ರೈಂ ಬ್ರ್ಯಾಂಚ್ ಹೆಚ್ಚು ಜಾಗೃತವಾಗಿರುವಂತೆ ಸೂಚಿಸಿದ್ದೇವೆ ಎಂದ ಗೃಹ ಸಚಿವರು, ಕಸ್ಟಮ್ಸ್ ಮತ್ತು ಏರ್‌ಪೋರ್ಟ್‌ಗಳಲ್ಲಿ ಎಲ್ಲಿಂದ ಡ್ರಗ್ಸ್ ಸಪ್ಲೈ ಬರ್ತಿದೆ ಎನ್ನುವ ಬಗ್ಗೆ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿ ಇದ್ದೇವೆ, ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ