ಆ್ಯಪ್ನಗರ

ವರ್ಗಾವಣೆಯಲ್ಲ, ಅಭಿವೃದ್ಧಿ ಸರಕಾರ ಆಗಬೇಕು ಕೋರ್‌ ಕಮಿಟಿ ಸಭೆಯಲ್ಲಿ ಕಟೀಲ್‌

ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ರಚನೆಯಾದ ಬಳಿಕ ನಿತ್ಯವೂ ನಡೆಯುತ್ತಿರುವ ವರ್ಗಾವಣೆ ಪ್ರಕ್ರಿಯೆಗೆ ಈಗ ಪಕ್ಷದೊಳಗಿಂದಲೇ ಅಪಸ್ವರ ಕೇಳಿ ಬಂದಿದೆ.

Vijaya Karnataka 7 Sep 2019, 5:00 am
ಬೆಂಗಳೂರು : ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ರಚನೆಯಾದ ಬಳಿಕ ನಿತ್ಯವೂ ನಡೆಯುತ್ತಿರುವ ವರ್ಗಾವಣೆ ಪ್ರಕ್ರಿಯೆಗೆ ಈಗ ಪಕ್ಷದೊಳಗಿಂದಲೇ ಅಪಸ್ವರ ಕೇಳಿ ಬಂದಿದೆ.
Vijaya Karnataka Web we expect development government say nali kumar katil
ವರ್ಗಾವಣೆಯಲ್ಲ, ಅಭಿವೃದ್ಧಿ ಸರಕಾರ ಆಗಬೇಕು ಕೋರ್‌ ಕಮಿಟಿ ಸಭೆಯಲ್ಲಿ ಕಟೀಲ್‌


ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟೀಲ್‌ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿ ನಡೆದ ಕೋರ್‌ ಕಮಿಟಿ ಸಭೆಯಲ್ಲಿ ಸ್ವತಃ ಅಧ್ಯಕ್ಷರೇ ಈ ವಿಷಯ ಪ್ರಸ್ತಾಪಿಸಿದ್ದಾರೆ. ನಮ್ಮದು ಅಭಿವೃದ್ಧಿ ಪರ ಸರಕಾರವಾಗಬೇಕೇ ಹೊರತು ವರ್ಗಾವಣೆ ಸರಕಾರವಾಗಬಾರದು. ವರ್ಗಾವಣೆ ಕುರಿತು ಸಾಕಷ್ಟು ಟೀಕೆಗಳು ಬರುತ್ತಿವೆ ಎಂದು ಹೇಳಿದಾಗ ಮಧ್ಯ ಪ್ರವೇಶಿಸಿ ಯಡಿಯೂರಪ್ಪ ಅವರು ಸ್ಥಳೀಯ ಶಾಸಕರ ಬೇಡಿಕೆಗೆ ಅನುಗುಣವಾಗಿ ವರ್ಗಾವಣೆ ಮಾಡಿಕೊಡಬೇಕಾಗುತ್ತದೆ ಎಂದು ಸಮರ್ಥಿಸಿಕೊಂಡರೆಂದು ತಿಳಿದುಬಂದಿದೆ.

ಇನ್ನು ನಿಗಮ, ಮಂಡಳಿಗಳ ನೇಮಕದಲ್ಲೂ ಏಕಪಕ್ಷೀಯ ತೀರ್ಮಾನ ಆಗಬಾರದು, ಪಕ್ಷದ ಸಮ್ಮತಿ ಪಡೆದು ನೇಮಕ ಆಗಬೇಕು. ವಿಶೇಷವಾಗಿ ಪಕ್ಷಕ್ಕೆ ದುಡಿದ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಬೇಕೇ ಹೊರತು ಕೇವಲ ನಾಯಕರ ಹಿಂಬಾಲಕರಿಗೆ ಅವಕಾಶ ಕೊಡಬಾರದೆಂದು ಹೇಳಿದರೆಂದು ಗೊತ್ತಾಗಿದೆ. ಸರಕಾರದ ವರ್ಚಸ್ಸು ವೃದ್ಧಿಸಬೇಕಾದರೆ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ಕೊಡಬೇಕು, ನೆರೆ ಸಂತ್ರಸ್ತರಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ನೆರವು ಕಲ್ಪಿಸಲು ಸರಕಾರ ಮುಂದಾಗಬೇಕೆಂದು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ