ಆ್ಯಪ್ನಗರ

ನಮಗೆ ಮೈಸೂರಿನ ಶಾಯಿಯೇ ಬೇಕು: ಮಧ್ಯಪ್ರದೇಶ

ರಾಜ್ಯಗಳ ಚುನಾವಣಾ ಆಯುಕ್ತರ ರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಸಮಾರಂಭದ ನಂತರ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚುನಾವಣೆಗಳಲ್ಲಿ ಮತದಾರರ ಬೆರಳಿಗೆ ಹಾಕುವ ಅಳಿಸಲಾಗದ ಶಾಯಿಯನ್ನು ಮೈಸೂರಿನ ಪೇಂಟ್ಸ್ ಮತ್ತು ವಾರ್ನಿಶ್ ಸಂಸ್ಥೆ ಪೂರೈಸುತ್ತಿದೆ. ಇಡೀ ದೇಶದ ಚುನಾವಣೆಗಳಲ್ಲಿ ಮೈಸೂರಿನಿಂದಲೇ ಅಳಿಸಲಾಗದ ಶಾಯಿ ಪೂರೈಕೆಯಾಗುತ್ತಿರುವುದು ಮೈಸೂರಿಗೂ ಹೆಮ್ಮೆ.

Vijaya Karnataka Web 4 Dec 2018, 6:53 pm
ಮೈಸೂರು: ಮೈಸೂರಿನ ಪೇಂಟ್ಸ್ ಮತ್ತು ವಾರ್ನಿಶ್ ಸಂಸ್ಥೆಯು ಪೂರೈಸುತ್ತಿರುವ ಅಳಿಸಲಾಗದ ಶಾಯಿ ಬಗ್ಗೆ ನಮಗೆ ಸಂಪೂರ್ಣ ತೃಪ್ತಿ ಇದ್ದು ಇದನ್ನು ಬದಲಿಸುವ ಅಗತ್ಯ ನಮಗಿಲ್ಲ ಎಂದು ಮಧ್ಯಪ್ರದೇಶದ ಚುನಾವಣಾ ಆಯುಕ್ತ ಪರಶುರಾಮ್ ತಿಳಿಸಿದರು.
Vijaya Karnataka Web 1


ರಾಜ್ಯಗಳ ಚುನಾವಣಾ ಆಯುಕ್ತರ ರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಸಮಾರಂಭದ ನಂತರ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚುನಾವಣೆಗಳಲ್ಲಿ ಮತದಾರರ ಬೆರಳಿಗೆ ಹಾಕುವ ಅಳಿಸಲಾಗದ ಶಾಯಿಯನ್ನು ಮೈಸೂರಿನ ಪೇಂಟ್ಸ್ ಮತ್ತು ವಾರ್ನಿಶ್ ಸಂಸ್ಥೆ ಪೂರೈಸುತ್ತಿದೆ. ಇಡೀ ದೇಶದ ಚುನಾವಣೆಗಳಲ್ಲಿ ಮೈಸೂರಿನಿಂದಲೇ ಅಳಿಸಲಾಗದ ಶಾಯಿ ಪೂರೈಕೆಯಾಗುತ್ತಿರುವುದು ಮೈಸೂರಿಗೂ ಹೆಮ್ಮೆ.

ರಾಜ್ಯ ಸರಕಾರದ ಒಡೆತನದಲ್ಲಿರುವ ಈ ಸಂಸ್ಥೆಯಿಂದ ಪೂರೈಕೆಯಾಗುತ್ತಿರುವ ಶಾಯಿ ಬಗ್ಗೆ ನಮಗೆ ಸಂಪೂರ್ಣ ತೃಪ್ತಿ ಇದೆ. ಮಧ್ಯಪ್ರದೇಶ ಚುನಾವಣಾ ಆಯೋಗ ಮೈಸೂರಿನ ಅಳಿಸಲಾಗದ ಶಾಯಿಯನ್ನೇ ಪಡೆಯುತ್ತದೆ ಎಂದು ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ