ಬೆಂಗಳೂರು: ಸದ್ಯಕ್ಕೆ ನೈಟ್ ಕರ್ಫ್ಯೂ ಹಾಗೂ ಕಠಿಣ ನಿರ್ಬಂಧಗಳು ಜಾರಿಗೊಳಿಸುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು,ಸದ್ಯಕ್ಕೆ ನೈಟ್ ಕರ್ಫ್ಯೂ ಕೂಡ ಇಲ್ಲ ಬದಲಾಗಿ ಒಂದು ವಾರದ ಬೆಳವಣಿಗೆ ಗಮನಿಸಿ ಬಳಿಕ ನಿರ್ಧಾರ ಮಾಡ್ತೇವೆ ಎಂದರು. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ. ಸುದರ್ಶನ್ ಅವರ ಜೊತೆ ಚರ್ಚೆ ಮಾಡಿದ್ದೇವೆ. ಓಮಿಕ್ರಾನ್ ಬಗ್ಗೆಯೂ ವಿವರಣೆ ನೀಡಿದ್ದಾರೆ. ಈಗಿರೋ ಫಿಗರ್ ನೋಡಿದಾಗ ಗಾಬರಿ ಅವಶ್ಯಕತೆಯಿಲ್ಲ. ಆದರೂ ಮುನ್ನೆಚ್ಷರಿಕೆ ಕ್ರಮ ಕೈಗೊಳ್ಳಬೇಕು ಎಂದರು. ವಸತಿ ನಿಲಯಗಳಲ್ಲಿ ಸೋಂಕು ಪತ್ತೆ ವಿಚಾರವಾಗಿ ಮಾತನಾಡಿ, ಹಾಸ್ಟೆಲ್ ಗಳಿಗೆ ವಿಶೇಷ ಮಾರ್ಗಸೂಚಿ ಕೈಗೊಳ್ಳಲಾಗಿದೆ. ಒಂದೇ ಬಾರಿ ಎಲ್ಲರೂ ಊಟಕ್ಕೆ ಕೂರದಂತೆ ಸೂಚನೆ ನೀಡಲಾಗಿದೆ ಹಾಗೂ ವಾರ್ಡನ್, ಅಡುಗೆಯವರಿಗೆ ೨ ಡೋಸ್ ಲಸಿಕೆ ಆಗಬೇಕು. ಐಸೋಲೇಶನ್ ರೂಂ ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
೩ ಜನರಿಗೆ ಬಂದ್ರೂ ಕ್ಲಸ್ಟರ್ ಅಂತ ನಿರ್ಧಾರ ಮಾಡಿದ್ದೇವೆ. ಕ್ಲಸ್ಟರ್ ಮ್ಯಾನೇಜ್ಮೆಂಟ್ಗೆ ಸೂಚನೆ ಕೊಟ್ಟಿದ್ದೇವೆ. ವ್ಯಾಕ್ಸಿನ್ ಡ್ರೈವ್ ಮಾಡಲು ಸಚಿವರ ಸಲಹೆ. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ನಿರ್ಧಾರ ಮಾಡಲಾಗಿದೆ ಎಂದರು. ಇನ್ನು ಗಡಿ ಭಾಗದಲ್ಲಿರುವ ಕಟ್ಟೆಚ್ಚರ ಮುಂದುವರೆಯಲಿದೆ. ಕೇರಳ ವಿದ್ಯಾರ್ಥಿಗಳಿಗೆ ನಿರ್ಬಂಧ ಮುಂದುವರಿಯಲಿದೆ. ಆರ್ ಟಿಪಿಸಿಆರ್ ಟೆಸ್ಟ್ ಸೇರಿ ಇತರ ನಿರ್ಬಂಧಗಳು ಮುಂದುವರಿಯುತ್ತದೆ ಎಂದ ಅವರು ಒಂದು ವಾರದ ನಂತರ ಕ್ರಿಸ್ಮಸ್, ಹೊಸ ವರ್ಷಕ್ಕೆ ನಿಯಮಾವಳಿ ರೂಪಿಸುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.
ಓಮಿಕ್ರಾನ್ ನಿಯಮಾವಳಿ ಗೊಂದಲ: ರಾಜ್ಯ ಸರ್ಕಾರದ ವಿರುದ್ಧ ಡಿಕೆ ಶಿವಕುಮಾರ್ ಗರಂ!
ಇನ್ನು ನರ್ಸಿಂಗ್ ವಿದ್ಯಾರ್ಥಿಗಳಿಗೆ ಎರಡು ಡೋಸ್ ಕಡ್ಡಾಯ ಎಂದು ಇದೆ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು. ಜೊತೆಗೆ ಸಭೆಗೆ ಆರೋಗ್ಯ ಸಚಿವ ಸುಧಾಕರ್ ಗೈರು ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸುಧಾಕರ್ ಅವರಿಗೆ ಬರಲು ಸಾಧ್ಯವಾಗ್ತಿಲ್ಲ ಅಂತ ಮೊದಲೇ ಅನುಮತಿ ಪಡೆದಿದ್ರು ಎಂದು ತಿಳಿಸಿದ್ದಾರೆ.
೩ ಜನರಿಗೆ ಬಂದ್ರೂ ಕ್ಲಸ್ಟರ್ ಅಂತ ನಿರ್ಧಾರ ಮಾಡಿದ್ದೇವೆ. ಕ್ಲಸ್ಟರ್ ಮ್ಯಾನೇಜ್ಮೆಂಟ್ಗೆ ಸೂಚನೆ ಕೊಟ್ಟಿದ್ದೇವೆ. ವ್ಯಾಕ್ಸಿನ್ ಡ್ರೈವ್ ಮಾಡಲು ಸಚಿವರ ಸಲಹೆ. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ನಿರ್ಧಾರ ಮಾಡಲಾಗಿದೆ ಎಂದರು. ಇನ್ನು ಗಡಿ ಭಾಗದಲ್ಲಿರುವ ಕಟ್ಟೆಚ್ಚರ ಮುಂದುವರೆಯಲಿದೆ. ಕೇರಳ ವಿದ್ಯಾರ್ಥಿಗಳಿಗೆ ನಿರ್ಬಂಧ ಮುಂದುವರಿಯಲಿದೆ. ಆರ್ ಟಿಪಿಸಿಆರ್ ಟೆಸ್ಟ್ ಸೇರಿ ಇತರ ನಿರ್ಬಂಧಗಳು ಮುಂದುವರಿಯುತ್ತದೆ ಎಂದ ಅವರು ಒಂದು ವಾರದ ನಂತರ ಕ್ರಿಸ್ಮಸ್, ಹೊಸ ವರ್ಷಕ್ಕೆ ನಿಯಮಾವಳಿ ರೂಪಿಸುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.
ಓಮಿಕ್ರಾನ್ ನಿಯಮಾವಳಿ ಗೊಂದಲ: ರಾಜ್ಯ ಸರ್ಕಾರದ ವಿರುದ್ಧ ಡಿಕೆ ಶಿವಕುಮಾರ್ ಗರಂ!
ಇನ್ನು ನರ್ಸಿಂಗ್ ವಿದ್ಯಾರ್ಥಿಗಳಿಗೆ ಎರಡು ಡೋಸ್ ಕಡ್ಡಾಯ ಎಂದು ಇದೆ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು. ಜೊತೆಗೆ ಸಭೆಗೆ ಆರೋಗ್ಯ ಸಚಿವ ಸುಧಾಕರ್ ಗೈರು ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸುಧಾಕರ್ ಅವರಿಗೆ ಬರಲು ಸಾಧ್ಯವಾಗ್ತಿಲ್ಲ ಅಂತ ಮೊದಲೇ ಅನುಮತಿ ಪಡೆದಿದ್ರು ಎಂದು ತಿಳಿಸಿದ್ದಾರೆ.