ಆ್ಯಪ್ನಗರ

ಖಾಸಗಿ ಆಸ್ಪತ್ರೆಗಳ ವಿರುದ್ಧ ಮುಲಾಜಿಲ್ಲದೆ ಕ್ರಮ - ಸುಧಾಕರ್‌ ಎಚ್ಚರಿಕೆ

​‘ಸರಕಾರದ ಆದೇಶಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರುತ್ತಿರುವ ಆಸ್ಪತ್ರೆಯ ಆಡಳಿತ ಮಂಡಳಿ, ನಿಗದಿ ಮಾಡಿದ ಹಣಕ್ಕಿಂತ ಹೆಚ್ಚು ಹಣ ಪಡೆದಿದೆ. ಈ ವಿಚಾರ ನನ್ನ ಗಮನಕ್ಕೆ ಬಂದಿದ್ದು ಖಾಸಗಿ ಆಸ್ಪತ್ರೆ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ’ ಎಂದು ಸುಧಾಕರ್‌ ಎಚ್ಚರಿಕೆ ನೀಡಿದ್ದಾರೆ.

Vijaya Karnataka 29 Jul 2020, 7:54 pm

ಬೆಂಗಳೂರು: ಸರಕಾರಿ ಆದೇಶ ಉಲ್ಲಂಘಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮತ್ತೊಮ್ಮೆ‌ ಎಚ್ಚರಿಕೆ ನೀಡಿದ್ದಾರೆ.
Vijaya Karnataka Web k sudhakar


ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಖಾಸಗಿ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಅನೇಕ ಬಾರಿ ಈ ಆಸ್ಪತ್ರೆಗೆ ಎಚ್ಚರಿಕೆ ನೀಡಲಾಗಿದೆ. ಆದಾಗಿಯೂ ಕೊರೊನಾ ರೋಗಿಗೆ 5 ಲಕ್ಷ ರೂ. ಬಿಲ್‌ ಮಾಡಿದ್ದಾರೆ ಎನ್ನುವ ಸುದ್ದಿ ತಿಳಿದು ಆಘಾತವಾಯಿತು ಎಂದು ಟ್ವೀಟರ್‌ನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳು ಚಿಕಿತ್ಸೆಗೆ ನಿರಾಕರಿಸುವಂತಿಲ್ಲ: ಸರಕಾರದಿಂದ ಕಟ್ಟಪ್ಪಣೆ



‘ಸರಕಾರದ ಆದೇಶಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರುತ್ತಿರುವ ಆಸ್ಪತ್ರೆ ಆಡಳಿತ ಮಂಡಳಿ ನಿಗದಿ ಮಾಡಿದ ಹಣಕ್ಕಿಂತ ಹೆಚ್ಚು ಹಣ ಪಡೆದಿದೆ. ಈ ವಿಚಾರ ನನ್ನ ಗಮನಕ್ಕೆ ಬಂದಿದ್ದು ಖಾಸಗಿ ಆಸ್ಪತ್ರೆ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಸ್ಮರಣೆ

ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಪುತ್ರ ರಾಕೇಶ್‌ ಸಿದ್ದರಾಮಯ್ಯ ನಮ್ಮನ್ನು ಅಗಲಿ ನಾಲ್ಕು ವರ್ಷ ಕಳೆದವು. ಅವರ ಜತೆಗಿನ ಸ್ನೇಹ ಎಂದೂ ಮರೆಯಲು ಸಾಧ್ಯವಿಲ್ಲ. ಅವರಿಗೆ ನನ್ನ ಭಾವಪೂರ್ಣ ನಮನ ಎಂದು ಸುಧಾಕರ್ ಟ್ಟಿಟ್ಟರ್‌ನಲ್ಲಿ‌ ಸ್ಮರಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ