ಬೆಂಗಳೂರು: ಕರ್ನಾಟಕ ಸೇರಿದಂತೆ 6 ರಾಜ್ಯಗಳ ಆಕ್ಷೇಪದ ಮಧ್ಯೆಯೇ ಪಶ್ಚಿಮಘಟ್ಟವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಿಲು ಸದ್ಯದಲ್ಲೇ ಅಧಿಸೂಚನೆ ಹೊರಡಿಸಲು ಕೇಂದ್ರ ಸರಕಾರ ನಿರ್ಧರಿಸಿದೆ.
ಪಶ್ಚಿಮಘಟ್ಟ ಪ್ರದೇಶಗಳ 56825 ಚದರ ಕಿಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಲು 2014ರಲ್ಲಿ ಕೇಂದ್ರ ಸರಕಾರ ಹೊರಡಿಸಿದ್ದ ಅಧಿಸೂಚನೆಗೆ ರಾಜ್ಯ ಸರಕಾರಗಳು ವಿರೋಧ ವ್ಯಕ್ತಪಡಿಸಿದ್ದವು. ಆದರೆ ಕೇರಳ ಹಾಗೂ ಮಡಿಕೇರಿಯಲ್ಲಿ ಭಾರಿ ಮಳೆಯಿಂದ ಆದ ಅನಾಹುತ ಹಿನ್ನೆಲೆಯಲ್ಲಿ ಮಾಧವ್ ಗಾಡ್ಗೀಳ್ ಹಾಗೂ ಪ್ರೊ.ಕಸ್ತೂರಿ ರಂಗನ್ ವರದಿ ಆಧರಿಸಿ ಪಶ್ಚಿಮಘಟ್ಟಗಳಲ್ಲಿ ಅರಣ್ಯ ಸಂರಕ್ಷಣೆಗೆ ಹೆಚ್ಚು ಒತ್ತು ನೀಡುವ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಇದಕ್ಕೆ ಪೂರಕವಾಗಿ ಸೆಪ್ಟಂಬರ್ 1ರಂದು ನಡೆದ ಹಸಿರು ಪೀಠದ ವಿಚಾರಣೆ ಸಂದರ್ಭದಲ್ಲಿ ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಗೆ ಸೇರಿಸಲು ಗುರುತಿಸಿರುವ ಪ್ರದೇಶಗಳ ಪೈಕಿ ಒಂದು ಇಂಚು ಜಾಗವನ್ನೂ ಕಡಿಮೆ ಮಾಡದೇ ಇರಲು ನಿರ್ಧರಿಸಲಾಗಿದೆ. ರಾಜ್ಯಗಳಿಗೆ ಈ ಬಗ್ಗೆ ಆಕ್ಷೇಪ ಸಲ್ಲಿಸಲು 60 ದಿನಗಳ ಕಾಲಾವಕಾಶವಿದೆ. ರಾಜ್ಯ ಸರಕಾರ ಈಗಾಗಲೇ ತನ್ನ ವಿರೋಧವನ್ನು ವ್ಯಕ್ತಪಡಿಸಿದೆ.
ಪಶ್ಚಿಮಘಟ್ಟ ಪ್ರದೇಶಗಳ 56825 ಚದರ ಕಿಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಲು 2014ರಲ್ಲಿ ಕೇಂದ್ರ ಸರಕಾರ ಹೊರಡಿಸಿದ್ದ ಅಧಿಸೂಚನೆಗೆ ರಾಜ್ಯ ಸರಕಾರಗಳು ವಿರೋಧ ವ್ಯಕ್ತಪಡಿಸಿದ್ದವು. ಆದರೆ ಕೇರಳ ಹಾಗೂ ಮಡಿಕೇರಿಯಲ್ಲಿ ಭಾರಿ ಮಳೆಯಿಂದ ಆದ ಅನಾಹುತ ಹಿನ್ನೆಲೆಯಲ್ಲಿ ಮಾಧವ್ ಗಾಡ್ಗೀಳ್ ಹಾಗೂ ಪ್ರೊ.ಕಸ್ತೂರಿ ರಂಗನ್ ವರದಿ ಆಧರಿಸಿ ಪಶ್ಚಿಮಘಟ್ಟಗಳಲ್ಲಿ ಅರಣ್ಯ ಸಂರಕ್ಷಣೆಗೆ ಹೆಚ್ಚು ಒತ್ತು ನೀಡುವ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಇದಕ್ಕೆ ಪೂರಕವಾಗಿ ಸೆಪ್ಟಂಬರ್ 1ರಂದು ನಡೆದ ಹಸಿರು ಪೀಠದ ವಿಚಾರಣೆ ಸಂದರ್ಭದಲ್ಲಿ ಪರಿಸರ ಸೂಕ್ಷ್ಮ ವಲಯ ವ್ಯಾಪ್ತಿಗೆ ಸೇರಿಸಲು ಗುರುತಿಸಿರುವ ಪ್ರದೇಶಗಳ ಪೈಕಿ ಒಂದು ಇಂಚು ಜಾಗವನ್ನೂ ಕಡಿಮೆ ಮಾಡದೇ ಇರಲು ನಿರ್ಧರಿಸಲಾಗಿದೆ. ರಾಜ್ಯಗಳಿಗೆ ಈ ಬಗ್ಗೆ ಆಕ್ಷೇಪ ಸಲ್ಲಿಸಲು 60 ದಿನಗಳ ಕಾಲಾವಕಾಶವಿದೆ. ರಾಜ್ಯ ಸರಕಾರ ಈಗಾಗಲೇ ತನ್ನ ವಿರೋಧವನ್ನು ವ್ಯಕ್ತಪಡಿಸಿದೆ.