ಆ್ಯಪ್ನಗರ

ಕಮಲ ಬಂಡಾಯ: ಅತೃಪ್ತರ ತಂತ್ರಕ್ಕೆ ಬಿಎಸ್‌ವೈ ಪ್ರತಿತಂತ್ರ!

ಸರ್ಕಾರಕ್ಕೆ ಮುಜುಗರ ಉಂಟು ಮಾಡುವ ಅತೃಪ್ತರ ತಂತ್ರಕ್ಕೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಪ್ರತಿತಂತ್ರ ಹೂಡುತ್ತಿದ್ದಾರೆ. ತಮ್ಮ ಆಪ್ತರ ಜೊತೆಗೆ ಈ ಕುರಿತಾಗಿ ಚರ್ಚೆಯನ್ನು ನಡೆಸಿದ್ದಾರೆ ಎನ್ನಲಾಗುತ್ತಿದೆ.

Vijaya Karnataka Web 1 Jun 2020, 10:05 am
ಬೆಂಗಳೂರು: ಕಮಲದಲ್ಲಿ ಅತೃಪ್ತರ ಬಂಡಾಯ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಬಂಡಾಯಗಾರರ ತಂತ್ರಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿತಂತ್ರ ಹೂಡುತ್ತಿದ್ದಾರೆ. ಕೊರೊನಾ ಸಂಕಷ್ಟದ ನಡುವೆ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಜೊತೆಗೆ ಗಟ್ಟಿಯಾಗಿ ನಿಲ್ಲಬೇಕಾಗಿದ್ದ ಆಪ್ತ ವಲಯದ ಶಾಸಕರೇ ಬಂಡಾಯದ ಬಾವುಟ ಹಾರಿಸಿರುವುದು ಯಡಿಯೂರಪ್ಪ ಪಾಲಿಗೆ ನುಂಗಲಾರದ ತುತ್ತಾಗಿದೆ. ಇದರಿಂದ ಆಕ್ರೋಶಗೊಂಡಿರುವ ಅವರು ಸಂಪುಟದ ಸಹೋದ್ಯೋಗಿಗಳ ಜೊತೆಗೂ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದು ಬಂಡಾಯಗಾರರ ತಂತ್ರಕ್ಕೆ ಪ್ರತಿತಂತ್ರವನ್ನು ಹೂಡುತ್ತಿದ್ದಾರೆ ಎನ್ನಲಾಗಿದೆ.
Vijaya Karnataka Web bjp bandaya


ಉಮೇಶ್ ಕತ್ತಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಸುಮಾರು 20 ಕ್ಕೂ ಅಧಿಕ ಶಾಸಕರು ಭಿನ್ನಮತೀಯ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ. ಇದವರಿಗೆ ದೆಹಲಿ ಮಟ್ಟದ ಬೆಂಬಲವೂ ಇದೆ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ ಬಂಡಾಯವನ್ನು ಬಿ.ಎಸ್‌ ಯಡಿಯೂರಪ್ಪ ಗಂಭೀರವಾಗಿ ಪರಿಗಣಿಸಿದ್ದಾರೆ. ಇದನ್ನು ಮುಂದುವರಿಯಲು ಆಸ್ಪದ ಕೊಡದ ನಿಟ್ಟಿನಲ್ಲಿ ಏನು ಮಾಡಬಹುದು ಎಂಬ ಚರ್ಚೆಯನ್ನು ಆಪ್ತ ವಲಯದ ಜೊತೆಗೆ ನಡೆಸಿದ್ದಾರೆ ಎಂಬ ಮಾಹಿತಿಯೂ ಮೂಲಗಳಿಂದ ತಿಳಿದುಬಂದಿದೆ.

ತಣ್ಣಗಾಗದ ಕಮಲ ಬಂಡಾಯ, ಮತ್ತೊಂದು ಸಭೆ ನಡೆಸುತ್ತಾರಂತೆ ಅತೃಪ್ತರು!

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು ಸೋಂಕು ನಿರ್ವಹಣೆಯಲ್ಲಿ ಸರ್ಕಾರ ಎಡವಿದೆ ಎಂದು ವಿರೋಧ ಪಕ್ಷಗಳು ಬಿಎಸ್‌ವೈ ವಿರುದ್ಧ ಕತ್ತಿ ಮಸೆಯಲು ಸಜ್ಜಾಗಿದ್ದಾರೆ. ರೈತರು, ಕಾರ್ಮಿಕರ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸಲು ತಂತ್ರ ಹೂಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಸುಭದ್ರತೆ ಅತೀ ಮುಖ್ಯವಾಗಿದೆ. ವಿರೋಧ ಪಕ್ಷಗಳ ಟೀಕೆಗಳಿಗೆ ಉತ್ತರ ಕೊಡಬೇಕಾಗಿರುವ ಶಾಸಕರು ಹಾಗೂ ಸಚಿವರು ಪಕ್ಷದ ಆಂತರಿಕ ಬಿಕ್ಕಟ್ಟಿಗೆ ಉತ್ತರ ನೀಡಬೇಕಾದ ಪರಿಸ್ಥಿತಿ ನಿರ್ಮಾನವಾದರೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡುತ್ತದೆ ಎಂಬ ಆತಂಕ ಬಿಎಸ್‌ವೈಗಿದೆ.

ಬಿಜೆಪಿಯಲ್ಲಿ ಯಾವುದೇ ಕಿತ್ತಾಟ ಇಲ್ಲ, ಸರ್ಕಾರ ಸುಭದ್ರ ಎಂದ ಅಶ್ವತ್ಥ್ ನಾರಾಯಣ

ಈ ನಿಟ್ಟಿನಲ್ಲಿ ಭಿನ್ನಮತವನ್ನು ಬಗೆಹರಿಸಲು ಬಿಎಸ್‌ವೈ ಮುಂದಾಗಿದ್ದಾರೆ ಎಂಬ ಮಾಹಿತಿ ಇದೆ. ಮುಂದಿನ ದಿನಗಳಲ್ಲಿ ಬಂಡಾಯ ಬಹಿರಂಗವಾಗಿ ಚರ್ಚೆಯಾಗದಂತೆ ಸರಿಪಡಿಸುವ ಕುರಿತಾಗಿಯೂ ಆಪ್ತರ ಜೊತೆಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಬಂಡಾಯಗಾರರು ಇದೇ ಪರಿಸ್ಥಿತಿಯನ್ನು ತಮ್ಮ ಪರವಾಗಿ ಪರಿವರ್ತನೆ ಮಾಡಲು ಮುಂದಾಗಿದ್ದಾರೆ.

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಿಎಸ್‌ವೈಯನ್ನು ಇಕ್ಕಟ್ಟಿಗೆ ಸಿಲುಕಿಸುವುದು ಇವರ ತಂತ್ರಗಾರಿಕೆ ಎನ್ನಲಾಗುತ್ತಿದೆ. ಅನುದಾನ ಬಿಡುಗಡೆ ಒಂದು ನೆಪವಾದರೂ ಇತರ ವಿಚಾರಗಳು ಇದರಲ್ಲಿ ಅಡಕವಾಗಿದೆ ಎಂಬ ಮಾತು ಕೇಳಿ ಬರುತ್ತಿದೆ. ಒಟ್ಟಿನಲ್ಲಿ ತಲೆಧೋರಿರುವ ಬಂಡಾಯವನ್ನು ಬಿಎಸ್‌ವೈ ಹೇಗೆ ನಿಭಾಯಿಸುತ್ತಾರೆ ಎಂಬುವುದು ಸದ್ಯದ ಕುತೂಹಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ